• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಕ್ರಮ ಮರಳುಗಾರಿಕೆಗೆ ಸಚಿವರ ಬೆಂಬಲ.!

Tulunadu News Posted On November 17, 2018
0


0
Shares
  • Share On Facebook
  • Tweet It

ಮಂಗಳೂರು-ಅಕ್ರಮ ಮರಳುಗಾರಿಕೆ ವೇಳೆ ದಾಳಿ ನಡೆಸಿ ಪೊಲೀಸರು ವಶಕ್ಕೆ ಪಡೆದ ಲಾರಿಗಳನ್ನು ಅದರ ಮಾಲಕರಿಗೆ ವಾಪಾಸ್ ಕೊಡಿಸುವ ಸಂಬಂಧ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿರುವುದಾಗಿ ದ‌.ಕ ಜಿಲ್ಲಾ ಉಸ್ತುವಾರಿ ಸಚಿವ ಯು‌.ಟಿ.ಖಾದರ್ ಮಾಹಿತಿ ನೀಡಿದ್ದಾರೆ. ಆದ್ರೆ ಖಾದರ್ ಸಾಹೇಬರ ಈ ನಡೆ ಎಷ್ಟರ ಮಟ್ಟಿಗೆ ಸರಿ ಎಂಬ ಮಾತು ಕೇಳಿ ಬಂದಿದ್ದು, ಖಾದರ್ ಮರಳು ದಂಧೆಕೋರರ ಬೆಂಬಲಕ್ಕೆ ನಿಂತ್ರಾ ಎನ್ನುವ ಆರೋಪ ಕೇಳಿ ಬಂದಿದೆ. ಇಂದು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಖಾದರ್, ಮರಳು ದಂಧೆಗೆ ಪೊಲೀಸರು ಮತ್ತು ಅಧಿಕಾರಿಗಳು ದಾಳಿ ನಡೆಸಿ ಅಲ್ಲಿನ ವಸ್ತುಗಳನ್ನು ವಶಕ್ಕೆ ಪಡೆಯುತ್ತಾರೆ.‌ ಇವುಗಳಲ್ಲಿ ಅನೇಕ ಲಾರಿಗಳಿದ್ದು, ಜಿಲ್ಲೆಯ ಪೊಲೀಸ್ ಠಾಣೆಗಳ ಮುಂಭಾಗ ಸಾಲಾಗಿ ನಿಂತಿದೆ. ಇದರಿಂದ ಲಾರಿಗಳಿಗೆ ತುಕ್ಕು ಹಿಡಿದಿದ್ದು, ಸುಖಾಸುಮ್ನನೆ ಹಾಳಾಗುತ್ತಿದೆ. ಹೀಗಾಗಿ ಆ ಲಾರಿಗಳನ್ನು ಮಾಲೀಕರಿಗೆ ಬಿಡಿಸಿ ಕೊಡಲು ಜಿಲ್ಲಾಧಿಕಾರಿ ಜೊತೆ ಚರ್ಚಿಸಿದ್ದೇನೆ. ಒಂದು ಸಭೆ ಕರೆದು ಲಾರಿಗಳನ್ನು ರಿಲೀಸ್ ಮಾಡೋ ಬಗ್ಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದರು. ಆದ್ರೆ ಖಾದರ್ ಸಾಹೇಬರ ಈ ನಡೆ ಎಷ್ಟರ ಮಟ್ಟಿಗೆ ಸರಿ ಎನ್ನುವ ಮಾತು ಕೇಳಿ ಬಂದಿದೆ. ಇನ್ನು ಇದೇ ವೇಳೆ ಪತ್ರಕರ್ತರು ಖಾದರ್ ಅವರ ನಡೆಯ ಬಗ್ಗೆ ಪ್ರಶ್ನೆ ಮಾಡಿದ್ರು. ಅಕ್ರಮಕ್ಕೆ ಬೆಂಬಲ ಸರಿಯಾ ಅಂತ ಕೇಳಿದ್ರು. ಈ ವೇಳೆ ಸಮಜಾಯಿಷಿ ನೀಡಿದ ಸಚಿವ ಖಾದರ್, ನೀವು ಹೇಳೋದು ಸರಿ. ಹೀಗಾಗಿ ನಾನು ಕೂಡ ಹೆಚ್ಚು ಮಾತನಾಡಲ್ಲ. ಆದ್ರೆ ಮಾನವೀಯತೆ ದೃಷ್ಟಿಯಿಂದ ಡಿಸಿಯವರಿಗೆ ಹೇಳಿದೆ ಅಷ್ಟೇ. ಅನೇಕರು ಸಾಲ ಮಾಡಿ ಲಾರಿ ಖರೀದಿಸಿರುತ್ತಾರೆ. ಆದ್ರೆ ಈ ರೀತಿ ಆದಾಗ ಮನೆ ನೋಡಿಕೊಳ್ಳೋದು ಕಷ್ಟ. ಹೀಗಾಗಿ ಇದನ್ನು ಮಾನವೀಯತೆ ‌ದೃಷ್ಟಿಯಿಂದ ಕಾನೂನು ವ್ಯಾಪ್ತಿಯಲ್ಲಿ ಸರಿ ಪಡಿಸಲು ಹೇಳಿದ್ದೇನೆ ಎಂದರು. ಅದರೆ ಈ ರೀತಿ ಅಕ್ರಮ ಲಾರಿಗಳ ಪರ ಸಚಿವರೇ ಬ್ಯಾಟ್ ಬೀಸಿರೋದು ಸರಿಯಲ್ಲ ಎಂಬ ಮಾತುಗಳು ಕೇಳಿ ಬಂದಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search