• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಡಿಯಾಚೆಗಿನ ಸರ್ಜಿಕಲ್ ಸ್ಟ್ರೈಕ್ ಗಾಗಿಯೇ ಸ್ಪೆಶಲ್ ಫೋರ್ಸ್ ಅಸ್ಥಿತ್ವಕ್ಕೆ…!?

TNN Correspondent Posted On December 4, 2018
0


0
Shares
  • Share On Facebook
  • Tweet It

ದೆಹಲಿ_ಭಾರತಕ್ಕೆ ಸಮುದ್ರ ಮಾರ್ಗ ಹಾಗೂ  ವೈಮಾನಿಕ ದಾಳಿಗಳ ಅಪಾಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ರ್ಜಿಕಲ್ ಸ್ಟ್ರೈಕ್ ನಡೆಸುವುದಕ್ಕಾಗಿಯೇ ವಿಶೇಷ ತಂಡವನ್ನು ಅಸ್ಥಿತ್ವಕ್ಕೆ ತರಲು ಯೋಜನೆ ರೂಪಿಸುತ್ತಿದೆ.
ಭಾರತೀಯ ಸೇನೆಯ ಮೂರೂ ವಿಭಾಗದಿಂದ ನುರಿತ ಅತ್ಯುತ್ತಮ ಯೋಧರನ್ನೊಳಗೊಂಡ ಸರ್ಜಿಕಲ್ ಸ್ಟ್ರೈಕ್ ತಂಡವನ್ನು ಅಸ್ಥಿತ್ವಕ್ಕೆ ತರವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ಎನ್ ಡಿ ಟಿವಿ ವರದಿ ಪ್ರಕಟಿಸಿದ್ದು, ಸರ್ಕಾರ ಅಸ್ಥಿತ್ವಕ್ಕೆ ತರಲು ಯೋಜನೆ ರೂಪಿಸಿರುವ ಸೇನಾ ತಂಡ 2016 ರ ಸರ್ಜಿಕಲ್ ಸ್ಟ್ರೈಕ್ ಮಾದರಿಯಲ್ಲಿ ಅನಿರೀಕ್ಷಿತವಾಗಿ ಶತ್ರುಗಳ ಪ್ರದೇಶಕ್ಕೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ನಡೆಸಿ ಅತಿ ಹೆಚ್ಚು ಹಾನಿಯುಂಟುಮಾಡಿ ಕಡಿಮೆ ಸಮಯದಲ್ಲಿ ವಾಪಸ್ಸಾಗಲಿದೆ ಎಂದು ಹೇಳಲಾಗುತ್ತಿದೆ.

ಈ ಯೋಜನೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಯೋಜನೆಯಾಗಿದೆ. ತಂಡದಲ್ಲಿ ವಾಯುಪಡೆ, ನೌಕಾ ಪಡೆ, ಸೇನಾ ಪಡೆಗಳ ಗರುಡ, ಮಾರ್ಕೋ, ಪಾರಾಗಳಿಂದ ಯೋಧರನ್ನೊಳಗೊಂಡಿರಲಿದ್ದು ಅಮೆರಿಕದ ನೇವಿ ಸೀಲ್ಸ್  ಯೋಧರಿಗೆ ನೀಡುವ ಮಾದರಿಯಲ್ಲಿ ತರಬೇತಿ ನೀಡಲಾಗುತ್ತದೆ.
ಪಾಕಿಸ್ತಾನದಿಂದ ನಿರಂತರವಾಗಿ ಕದನ ವಿರಾಮ ಉಲ್ಲಂಘನೆ ಹಾಗೂ ಒಳನುಸುಳುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶತ್ರು ದೇಶವನ್ನು ಒತ್ತಡದಲ್ಲಿ ಸಿಲುಕಿಸಲು ಈ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ, ಬಜೆಟ್ ನಲ್ಲಿ ಈ ತಂಡದ ಕಾರ್ಯನಿರ್ವಹಣೆಗಾಗಿಯೇ ಪ್ರತ್ಯೇಕ ಅನುದಾನವೂ ಇರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
0
Shares
  • Share On Facebook
  • Tweet It


#modi #indianarmy


Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search