• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಡಿಯಾಚೆಗಿನ ಸರ್ಜಿಕಲ್ ಸ್ಟ್ರೈಕ್ ಗಾಗಿಯೇ ಸ್ಪೆಶಲ್ ಫೋರ್ಸ್ ಅಸ್ಥಿತ್ವಕ್ಕೆ…!?

TNN Correspondent Posted On December 4, 2018
0


0
Shares
  • Share On Facebook
  • Tweet It

ದೆಹಲಿ_ಭಾರತಕ್ಕೆ ಸಮುದ್ರ ಮಾರ್ಗ ಹಾಗೂ  ವೈಮಾನಿಕ ದಾಳಿಗಳ ಅಪಾಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ರ್ಜಿಕಲ್ ಸ್ಟ್ರೈಕ್ ನಡೆಸುವುದಕ್ಕಾಗಿಯೇ ವಿಶೇಷ ತಂಡವನ್ನು ಅಸ್ಥಿತ್ವಕ್ಕೆ ತರಲು ಯೋಜನೆ ರೂಪಿಸುತ್ತಿದೆ.
ಭಾರತೀಯ ಸೇನೆಯ ಮೂರೂ ವಿಭಾಗದಿಂದ ನುರಿತ ಅತ್ಯುತ್ತಮ ಯೋಧರನ್ನೊಳಗೊಂಡ ಸರ್ಜಿಕಲ್ ಸ್ಟ್ರೈಕ್ ತಂಡವನ್ನು ಅಸ್ಥಿತ್ವಕ್ಕೆ ತರವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ಎನ್ ಡಿ ಟಿವಿ ವರದಿ ಪ್ರಕಟಿಸಿದ್ದು, ಸರ್ಕಾರ ಅಸ್ಥಿತ್ವಕ್ಕೆ ತರಲು ಯೋಜನೆ ರೂಪಿಸಿರುವ ಸೇನಾ ತಂಡ 2016 ರ ಸರ್ಜಿಕಲ್ ಸ್ಟ್ರೈಕ್ ಮಾದರಿಯಲ್ಲಿ ಅನಿರೀಕ್ಷಿತವಾಗಿ ಶತ್ರುಗಳ ಪ್ರದೇಶಕ್ಕೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ನಡೆಸಿ ಅತಿ ಹೆಚ್ಚು ಹಾನಿಯುಂಟುಮಾಡಿ ಕಡಿಮೆ ಸಮಯದಲ್ಲಿ ವಾಪಸ್ಸಾಗಲಿದೆ ಎಂದು ಹೇಳಲಾಗುತ್ತಿದೆ.

ಈ ಯೋಜನೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಯೋಜನೆಯಾಗಿದೆ. ತಂಡದಲ್ಲಿ ವಾಯುಪಡೆ, ನೌಕಾ ಪಡೆ, ಸೇನಾ ಪಡೆಗಳ ಗರುಡ, ಮಾರ್ಕೋ, ಪಾರಾಗಳಿಂದ ಯೋಧರನ್ನೊಳಗೊಂಡಿರಲಿದ್ದು ಅಮೆರಿಕದ ನೇವಿ ಸೀಲ್ಸ್  ಯೋಧರಿಗೆ ನೀಡುವ ಮಾದರಿಯಲ್ಲಿ ತರಬೇತಿ ನೀಡಲಾಗುತ್ತದೆ.
ಪಾಕಿಸ್ತಾನದಿಂದ ನಿರಂತರವಾಗಿ ಕದನ ವಿರಾಮ ಉಲ್ಲಂಘನೆ ಹಾಗೂ ಒಳನುಸುಳುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶತ್ರು ದೇಶವನ್ನು ಒತ್ತಡದಲ್ಲಿ ಸಿಲುಕಿಸಲು ಈ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ, ಬಜೆಟ್ ನಲ್ಲಿ ಈ ತಂಡದ ಕಾರ್ಯನಿರ್ವಹಣೆಗಾಗಿಯೇ ಪ್ರತ್ಯೇಕ ಅನುದಾನವೂ ಇರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
0
Shares
  • Share On Facebook
  • Tweet It


#modi #indianarmy


Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search