• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಡಿಯಾಚೆಗಿನ ಸರ್ಜಿಕಲ್ ಸ್ಟ್ರೈಕ್ ಗಾಗಿಯೇ ಸ್ಪೆಶಲ್ ಫೋರ್ಸ್ ಅಸ್ಥಿತ್ವಕ್ಕೆ…!?

TNN Correspondent Posted On December 4, 2018
0


0
Shares
  • Share On Facebook
  • Tweet It

ದೆಹಲಿ_ಭಾರತಕ್ಕೆ ಸಮುದ್ರ ಮಾರ್ಗ ಹಾಗೂ  ವೈಮಾನಿಕ ದಾಳಿಗಳ ಅಪಾಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ರ್ಜಿಕಲ್ ಸ್ಟ್ರೈಕ್ ನಡೆಸುವುದಕ್ಕಾಗಿಯೇ ವಿಶೇಷ ತಂಡವನ್ನು ಅಸ್ಥಿತ್ವಕ್ಕೆ ತರಲು ಯೋಜನೆ ರೂಪಿಸುತ್ತಿದೆ.
ಭಾರತೀಯ ಸೇನೆಯ ಮೂರೂ ವಿಭಾಗದಿಂದ ನುರಿತ ಅತ್ಯುತ್ತಮ ಯೋಧರನ್ನೊಳಗೊಂಡ ಸರ್ಜಿಕಲ್ ಸ್ಟ್ರೈಕ್ ತಂಡವನ್ನು ಅಸ್ಥಿತ್ವಕ್ಕೆ ತರವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ಎನ್ ಡಿ ಟಿವಿ ವರದಿ ಪ್ರಕಟಿಸಿದ್ದು, ಸರ್ಕಾರ ಅಸ್ಥಿತ್ವಕ್ಕೆ ತರಲು ಯೋಜನೆ ರೂಪಿಸಿರುವ ಸೇನಾ ತಂಡ 2016 ರ ಸರ್ಜಿಕಲ್ ಸ್ಟ್ರೈಕ್ ಮಾದರಿಯಲ್ಲಿ ಅನಿರೀಕ್ಷಿತವಾಗಿ ಶತ್ರುಗಳ ಪ್ರದೇಶಕ್ಕೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ನಡೆಸಿ ಅತಿ ಹೆಚ್ಚು ಹಾನಿಯುಂಟುಮಾಡಿ ಕಡಿಮೆ ಸಮಯದಲ್ಲಿ ವಾಪಸ್ಸಾಗಲಿದೆ ಎಂದು ಹೇಳಲಾಗುತ್ತಿದೆ.

ಈ ಯೋಜನೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಯೋಜನೆಯಾಗಿದೆ. ತಂಡದಲ್ಲಿ ವಾಯುಪಡೆ, ನೌಕಾ ಪಡೆ, ಸೇನಾ ಪಡೆಗಳ ಗರುಡ, ಮಾರ್ಕೋ, ಪಾರಾಗಳಿಂದ ಯೋಧರನ್ನೊಳಗೊಂಡಿರಲಿದ್ದು ಅಮೆರಿಕದ ನೇವಿ ಸೀಲ್ಸ್  ಯೋಧರಿಗೆ ನೀಡುವ ಮಾದರಿಯಲ್ಲಿ ತರಬೇತಿ ನೀಡಲಾಗುತ್ತದೆ.
ಪಾಕಿಸ್ತಾನದಿಂದ ನಿರಂತರವಾಗಿ ಕದನ ವಿರಾಮ ಉಲ್ಲಂಘನೆ ಹಾಗೂ ಒಳನುಸುಳುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶತ್ರು ದೇಶವನ್ನು ಒತ್ತಡದಲ್ಲಿ ಸಿಲುಕಿಸಲು ಈ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ, ಬಜೆಟ್ ನಲ್ಲಿ ಈ ತಂಡದ ಕಾರ್ಯನಿರ್ವಹಣೆಗಾಗಿಯೇ ಪ್ರತ್ಯೇಕ ಅನುದಾನವೂ ಇರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
0
Shares
  • Share On Facebook
  • Tweet It


#modi #indianarmy


Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search