• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಡಿಯಾಚೆಗಿನ ಸರ್ಜಿಕಲ್ ಸ್ಟ್ರೈಕ್ ಗಾಗಿಯೇ ಸ್ಪೆಶಲ್ ಫೋರ್ಸ್ ಅಸ್ಥಿತ್ವಕ್ಕೆ…!?

TNN Correspondent Posted On December 4, 2018
0


0
Shares
  • Share On Facebook
  • Tweet It

ದೆಹಲಿ_ಭಾರತಕ್ಕೆ ಸಮುದ್ರ ಮಾರ್ಗ ಹಾಗೂ  ವೈಮಾನಿಕ ದಾಳಿಗಳ ಅಪಾಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ರ್ಜಿಕಲ್ ಸ್ಟ್ರೈಕ್ ನಡೆಸುವುದಕ್ಕಾಗಿಯೇ ವಿಶೇಷ ತಂಡವನ್ನು ಅಸ್ಥಿತ್ವಕ್ಕೆ ತರಲು ಯೋಜನೆ ರೂಪಿಸುತ್ತಿದೆ.
ಭಾರತೀಯ ಸೇನೆಯ ಮೂರೂ ವಿಭಾಗದಿಂದ ನುರಿತ ಅತ್ಯುತ್ತಮ ಯೋಧರನ್ನೊಳಗೊಂಡ ಸರ್ಜಿಕಲ್ ಸ್ಟ್ರೈಕ್ ತಂಡವನ್ನು ಅಸ್ಥಿತ್ವಕ್ಕೆ ತರವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ಎನ್ ಡಿ ಟಿವಿ ವರದಿ ಪ್ರಕಟಿಸಿದ್ದು, ಸರ್ಕಾರ ಅಸ್ಥಿತ್ವಕ್ಕೆ ತರಲು ಯೋಜನೆ ರೂಪಿಸಿರುವ ಸೇನಾ ತಂಡ 2016 ರ ಸರ್ಜಿಕಲ್ ಸ್ಟ್ರೈಕ್ ಮಾದರಿಯಲ್ಲಿ ಅನಿರೀಕ್ಷಿತವಾಗಿ ಶತ್ರುಗಳ ಪ್ರದೇಶಕ್ಕೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ನಡೆಸಿ ಅತಿ ಹೆಚ್ಚು ಹಾನಿಯುಂಟುಮಾಡಿ ಕಡಿಮೆ ಸಮಯದಲ್ಲಿ ವಾಪಸ್ಸಾಗಲಿದೆ ಎಂದು ಹೇಳಲಾಗುತ್ತಿದೆ.

ಈ ಯೋಜನೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಯೋಜನೆಯಾಗಿದೆ. ತಂಡದಲ್ಲಿ ವಾಯುಪಡೆ, ನೌಕಾ ಪಡೆ, ಸೇನಾ ಪಡೆಗಳ ಗರುಡ, ಮಾರ್ಕೋ, ಪಾರಾಗಳಿಂದ ಯೋಧರನ್ನೊಳಗೊಂಡಿರಲಿದ್ದು ಅಮೆರಿಕದ ನೇವಿ ಸೀಲ್ಸ್  ಯೋಧರಿಗೆ ನೀಡುವ ಮಾದರಿಯಲ್ಲಿ ತರಬೇತಿ ನೀಡಲಾಗುತ್ತದೆ.
ಪಾಕಿಸ್ತಾನದಿಂದ ನಿರಂತರವಾಗಿ ಕದನ ವಿರಾಮ ಉಲ್ಲಂಘನೆ ಹಾಗೂ ಒಳನುಸುಳುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶತ್ರು ದೇಶವನ್ನು ಒತ್ತಡದಲ್ಲಿ ಸಿಲುಕಿಸಲು ಈ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ, ಬಜೆಟ್ ನಲ್ಲಿ ಈ ತಂಡದ ಕಾರ್ಯನಿರ್ವಹಣೆಗಾಗಿಯೇ ಪ್ರತ್ಯೇಕ ಅನುದಾನವೂ ಇರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
0
Shares
  • Share On Facebook
  • Tweet It


#modi #indianarmy


Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search