• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗಡಿಯಾಚೆಗಿನ ಸರ್ಜಿಕಲ್ ಸ್ಟ್ರೈಕ್ ಗಾಗಿಯೇ ಸ್ಪೆಶಲ್ ಫೋರ್ಸ್ ಅಸ್ಥಿತ್ವಕ್ಕೆ…!?

TNN Correspondent Posted On December 4, 2018
0


0
Shares
  • Share On Facebook
  • Tweet It

ದೆಹಲಿ_ಭಾರತಕ್ಕೆ ಸಮುದ್ರ ಮಾರ್ಗ ಹಾಗೂ  ವೈಮಾನಿಕ ದಾಳಿಗಳ ಅಪಾಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ರ್ಜಿಕಲ್ ಸ್ಟ್ರೈಕ್ ನಡೆಸುವುದಕ್ಕಾಗಿಯೇ ವಿಶೇಷ ತಂಡವನ್ನು ಅಸ್ಥಿತ್ವಕ್ಕೆ ತರಲು ಯೋಜನೆ ರೂಪಿಸುತ್ತಿದೆ.
ಭಾರತೀಯ ಸೇನೆಯ ಮೂರೂ ವಿಭಾಗದಿಂದ ನುರಿತ ಅತ್ಯುತ್ತಮ ಯೋಧರನ್ನೊಳಗೊಂಡ ಸರ್ಜಿಕಲ್ ಸ್ಟ್ರೈಕ್ ತಂಡವನ್ನು ಅಸ್ಥಿತ್ವಕ್ಕೆ ತರವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ಎನ್ ಡಿ ಟಿವಿ ವರದಿ ಪ್ರಕಟಿಸಿದ್ದು, ಸರ್ಕಾರ ಅಸ್ಥಿತ್ವಕ್ಕೆ ತರಲು ಯೋಜನೆ ರೂಪಿಸಿರುವ ಸೇನಾ ತಂಡ 2016 ರ ಸರ್ಜಿಕಲ್ ಸ್ಟ್ರೈಕ್ ಮಾದರಿಯಲ್ಲಿ ಅನಿರೀಕ್ಷಿತವಾಗಿ ಶತ್ರುಗಳ ಪ್ರದೇಶಕ್ಕೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ನಡೆಸಿ ಅತಿ ಹೆಚ್ಚು ಹಾನಿಯುಂಟುಮಾಡಿ ಕಡಿಮೆ ಸಮಯದಲ್ಲಿ ವಾಪಸ್ಸಾಗಲಿದೆ ಎಂದು ಹೇಳಲಾಗುತ್ತಿದೆ.

ಈ ಯೋಜನೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಯೋಜನೆಯಾಗಿದೆ. ತಂಡದಲ್ಲಿ ವಾಯುಪಡೆ, ನೌಕಾ ಪಡೆ, ಸೇನಾ ಪಡೆಗಳ ಗರುಡ, ಮಾರ್ಕೋ, ಪಾರಾಗಳಿಂದ ಯೋಧರನ್ನೊಳಗೊಂಡಿರಲಿದ್ದು ಅಮೆರಿಕದ ನೇವಿ ಸೀಲ್ಸ್  ಯೋಧರಿಗೆ ನೀಡುವ ಮಾದರಿಯಲ್ಲಿ ತರಬೇತಿ ನೀಡಲಾಗುತ್ತದೆ.
ಪಾಕಿಸ್ತಾನದಿಂದ ನಿರಂತರವಾಗಿ ಕದನ ವಿರಾಮ ಉಲ್ಲಂಘನೆ ಹಾಗೂ ಒಳನುಸುಳುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶತ್ರು ದೇಶವನ್ನು ಒತ್ತಡದಲ್ಲಿ ಸಿಲುಕಿಸಲು ಈ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ, ಬಜೆಟ್ ನಲ್ಲಿ ಈ ತಂಡದ ಕಾರ್ಯನಿರ್ವಹಣೆಗಾಗಿಯೇ ಪ್ರತ್ಯೇಕ ಅನುದಾನವೂ ಇರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
0
Shares
  • Share On Facebook
  • Tweet It


#modi #indianarmy


Trending Now
Fortune Clock Casino No Deposit Bonus Codes
Tulunadu News May 19, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • Fortune Clock Casino No Deposit Bonus Codes
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • Fortune Clock Casino No Deposit Bonus Codes

  • Privacy Policy
  • Contact
© Tulunadu Infomedia.

Press enter/return to begin your search