• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಸಂಸದ ನಳಿನ್ ಹಾಗೂ ಶಾಸಕ ಕಾಮತ್ ಪ್ರಯತ್ನದ ಫಲವಾಗಿ ಲೇಡಿಗೋಶನ್ ಗೆ 5.7 ಕೋಟಿ ಮಂಜೂರು

Tulunadu News Posted On December 5, 2018
0


0
Shares
  • Share On Facebook
  • Tweet It

ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಎಂಆರ್ ಪಿಎಲ್-ಒಎನ್ ಜಿಸಿ ಕಂಪೆನಿಗೆ ಲಿಖಿತವಾಗಿ ಮನವಿ ಮಾಡಿ ಆ ಬಗ್ಗೆ ಸತತ ಪ್ರಯತ್ನ ಮಾಡಿದ್ದರ ಫಲವಾಗಿ ಮಂಗಳೂರಿನ ಸರಕಾರಿ ಲೇಡಿಗೋಶನ್ ಆಸ್ಪತ್ರೆಗೆ ಹೆಚ್ಚುವರಿ ಆರ್ಥಿಕ ಸಹಾಯ ಸಿಕ್ಕಿದೆ.

ಎಂಆರ್ ಪಿಎಲ್- ಒನ್ ಜಿಸಿ ಕಂಪೆನಿಯು ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯ ಹೊಸ ಕಟ್ಟಡಕ್ಕೆ ತನ್ನ ಸಾಮಾಜಿಕ ಬದ್ಧತಾ ನಿಧಿಯ ಅಡಿಯಲ್ಲಿ ಹಣ ನೀಡಿತ್ತು. ಆ ಮೂಲಕ ಲೇಡಿಗೋಶನ್ ಆಸ್ಪತ್ರೆಯ ಹೊಸ ಕಟ್ಟಡದ ನಿರ್ಮಾಣವಾಗಿದೆ. ಆದರೆ ಅಲ್ಲಿ ಮೂಲಭೂತ ಅಗತ್ಯಗಳಾದ ಯಂತ್ರೋಪಕರಣಗಳು ಮತ್ತು ಪೀಠೋಪಕರಣಗಳ ಖರೀದಿಗೆ ಆರ್ಥಿಕ ಸಂಪನ್ಮೂಲದ ಅವಶ್ಯಕತೆ ಇತ್ತು. ಅದರಿಂದ ವೈದ್ಯಾಧಿಕಾರಿಗಳು ಮತ್ತು ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದರು. ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ವೇದವ್ಯಾಸ ಕಾಮತ್ ಅವರು ಶಾಸಕರಾಗಿ ಆಯ್ಕೆಯಾದ ತಕ್ಷಣ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅದಕ್ಕೆ ಆಗಬೇಕಾದ ಕಾರ್ಯಗಳ ಬಗ್ಗೆ ಆದ್ಯತೆಯಲ್ಲಿ ಕ್ರಮ ಕೈಗೊಂಡರು. ಎಂಆರ್ ಪಿಎಲ್-ಒಎನ್ ಜಿಸಿಯ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿ, ಮಂಗಳೂರು ಮಾತ್ರವಲ್ಲ ನಮ್ಮ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಅಕ್ಕಪಕ್ಕದ ಜಿಲ್ಲೆಗಳ ಬಡ, ಮಧ್ಯಮ ವರ್ಗದ ಮಹಿಳೆಯರ ಆಶಾಕಿರಣವಾಗಿರುವ ಲೇಡಿಗೋಶನ್ ಸರಕಾರಿ ಹೆರಿಗೆ ಆಸ್ಪತ್ರೆಗೆ ಅಗತ್ಯವಿರುವ ಯಂತ್ರೋಪಕರಣಗಳು ಮತ್ತು ಪೀಠೋಪಕರಣಗಳಿಗಾಗಿ ಬೇಕಾಗಿರುವ ಹಣದ ಅವಶ್ಯಕತೆಯನ್ನು ಮನಗಾಣಿಸಿದರು. ಅದರಂತೆ ಸಂಸದರ ಹಾಗೂ ಶಾಸಕರ ಬೇಡಿಕೆಯನ್ನು ಸ್ವೀಕರಿಸಿದ ಕಂಪೆನಿ 5.7 ಕೋಟಿ ರೂಪಾಯಿಯನ್ನು ಮಂಜೂರು ಮಾಡಿದೆ. ಈ ಹಣ ಮುಂದಿನ ದಿನಗಳಲ್ಲಿ ಲೇಡಿಗೋಶನ್ ಆಸ್ಪತ್ರೆಯ ಸರ್ವಾಂಗಿಣ ಅಭಿವೃದ್ಧಿಗೆ ಸಹಾಯವಾಗಲಿದೆ.

ಈ ಬಗ್ಗೆ ಹರ್ಷ ವ್ಯಕ್ತಪಡಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು ಲೇಡಿಗೋಶನ್ ಆಸ್ಪತ್ರೆ ಮುಂದಿನ ದಿನಗಳಲ್ಲಿ ಬಡ, ಮಧ್ಯಮ ವರ್ಗದ ಮಹಿಳೆಯರಿಗೆ ಯಾವುದೇ ಖಾಸಗಿ ಆಸ್ಪತ್ರೆಗೆ ಕಡಿಮೆಯಿಲ್ಲದಂತೆ ಸೇವೆ ಸಲ್ಲಿಸಲು ಕೆಲವು ತೊಂದರೆ ಇತ್ತು. ಅದನ್ನು ನಿವಾರಿಸುವುದಕ್ಕಾಗಿ ಎಂಆರ್ ಪಿಎಲ್-ಒನ್ ಜಿಸಿ ಅಧಿಕಾರಿಗಳನ್ನು ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ನಾನು ಪ್ರಯತ್ನಿಸಿದರ ಕಾರಣದಿಂದ ಈಗ ಫಲ ಸಿಕ್ಕಿದೆ. ಅವರು ನಮ್ಮ ಮನವಿಯನ್ನು ಪರಿಗಣಿಸಿ 5.7 ಕೋಟಿ ರೂಪಾಯಿಯನ್ನು ಲೇಡಿಗೋಶನ್ ಆಸ್ಪತ್ರೆಗೆ ನೀಡಿದ್ದಕ್ಕೆ ಸಂಸದರ ಪರವಾಗಿ ಮತ್ತು ಶಾಾಸಕನ ನೆಲೆಯಲ್ಲಿ ಮತ್ತು ಬಡಜನರ ಪರವಾಗಿ ಅನಂತ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದರು.

 

0
Shares
  • Share On Facebook
  • Tweet It


- Advertisement -
vedavyas kamath


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
You may also like
ರಾಷ್ಟ್ರೀಯ ಕ್ರೀಡಾಪಟುವಿಗೆ 2 ಲಕ್ಷ ರೂ ಧನ ಸಹಾಯ ನೀಡಿದ ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಶನ್!
October 9, 2018
ಮುಸ್ಲಿಮರು ನಮಗೆ ಓಟ್ ಹಾಕಲ್ಲ ಎಂದು ಒಪ್ಪಿಕೊಂಡ ಎಐಸಿಸಿ ಸದಸ್ಯೆ ಕವಿತಾ ಸನಿಲ್!
March 23, 2018
ಮೊಯಿಲಿ ಪುತ್ರವಾತ್ಸಲ್ಯ ಕಾಂಗ್ರೆಸ್ ಜಾತಕ ಬಯಲಿಗೆ ತಂದು ಸಿದ್ದು ಕ್ಯಾಪೆಸಿಟಿ ತೋರಿಸಿತು!
March 21, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search