• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಂಸದ ನಳಿನ್ ಹಾಗೂ ಶಾಸಕ ಕಾಮತ್ ಪ್ರಯತ್ನದ ಫಲವಾಗಿ ಲೇಡಿಗೋಶನ್ ಗೆ 5.7 ಕೋಟಿ ಮಂಜೂರು

Tulunadu News Posted On December 5, 2018


  • Share On Facebook
  • Tweet It

ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಎಂಆರ್ ಪಿಎಲ್-ಒಎನ್ ಜಿಸಿ ಕಂಪೆನಿಗೆ ಲಿಖಿತವಾಗಿ ಮನವಿ ಮಾಡಿ ಆ ಬಗ್ಗೆ ಸತತ ಪ್ರಯತ್ನ ಮಾಡಿದ್ದರ ಫಲವಾಗಿ ಮಂಗಳೂರಿನ ಸರಕಾರಿ ಲೇಡಿಗೋಶನ್ ಆಸ್ಪತ್ರೆಗೆ ಹೆಚ್ಚುವರಿ ಆರ್ಥಿಕ ಸಹಾಯ ಸಿಕ್ಕಿದೆ.

ಎಂಆರ್ ಪಿಎಲ್- ಒನ್ ಜಿಸಿ ಕಂಪೆನಿಯು ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯ ಹೊಸ ಕಟ್ಟಡಕ್ಕೆ ತನ್ನ ಸಾಮಾಜಿಕ ಬದ್ಧತಾ ನಿಧಿಯ ಅಡಿಯಲ್ಲಿ ಹಣ ನೀಡಿತ್ತು. ಆ ಮೂಲಕ ಲೇಡಿಗೋಶನ್ ಆಸ್ಪತ್ರೆಯ ಹೊಸ ಕಟ್ಟಡದ ನಿರ್ಮಾಣವಾಗಿದೆ. ಆದರೆ ಅಲ್ಲಿ ಮೂಲಭೂತ ಅಗತ್ಯಗಳಾದ ಯಂತ್ರೋಪಕರಣಗಳು ಮತ್ತು ಪೀಠೋಪಕರಣಗಳ ಖರೀದಿಗೆ ಆರ್ಥಿಕ ಸಂಪನ್ಮೂಲದ ಅವಶ್ಯಕತೆ ಇತ್ತು. ಅದರಿಂದ ವೈದ್ಯಾಧಿಕಾರಿಗಳು ಮತ್ತು ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದರು. ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ವೇದವ್ಯಾಸ ಕಾಮತ್ ಅವರು ಶಾಸಕರಾಗಿ ಆಯ್ಕೆಯಾದ ತಕ್ಷಣ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅದಕ್ಕೆ ಆಗಬೇಕಾದ ಕಾರ್ಯಗಳ ಬಗ್ಗೆ ಆದ್ಯತೆಯಲ್ಲಿ ಕ್ರಮ ಕೈಗೊಂಡರು. ಎಂಆರ್ ಪಿಎಲ್-ಒಎನ್ ಜಿಸಿಯ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿ, ಮಂಗಳೂರು ಮಾತ್ರವಲ್ಲ ನಮ್ಮ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಅಕ್ಕಪಕ್ಕದ ಜಿಲ್ಲೆಗಳ ಬಡ, ಮಧ್ಯಮ ವರ್ಗದ ಮಹಿಳೆಯರ ಆಶಾಕಿರಣವಾಗಿರುವ ಲೇಡಿಗೋಶನ್ ಸರಕಾರಿ ಹೆರಿಗೆ ಆಸ್ಪತ್ರೆಗೆ ಅಗತ್ಯವಿರುವ ಯಂತ್ರೋಪಕರಣಗಳು ಮತ್ತು ಪೀಠೋಪಕರಣಗಳಿಗಾಗಿ ಬೇಕಾಗಿರುವ ಹಣದ ಅವಶ್ಯಕತೆಯನ್ನು ಮನಗಾಣಿಸಿದರು. ಅದರಂತೆ ಸಂಸದರ ಹಾಗೂ ಶಾಸಕರ ಬೇಡಿಕೆಯನ್ನು ಸ್ವೀಕರಿಸಿದ ಕಂಪೆನಿ 5.7 ಕೋಟಿ ರೂಪಾಯಿಯನ್ನು ಮಂಜೂರು ಮಾಡಿದೆ. ಈ ಹಣ ಮುಂದಿನ ದಿನಗಳಲ್ಲಿ ಲೇಡಿಗೋಶನ್ ಆಸ್ಪತ್ರೆಯ ಸರ್ವಾಂಗಿಣ ಅಭಿವೃದ್ಧಿಗೆ ಸಹಾಯವಾಗಲಿದೆ.

ಈ ಬಗ್ಗೆ ಹರ್ಷ ವ್ಯಕ್ತಪಡಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು ಲೇಡಿಗೋಶನ್ ಆಸ್ಪತ್ರೆ ಮುಂದಿನ ದಿನಗಳಲ್ಲಿ ಬಡ, ಮಧ್ಯಮ ವರ್ಗದ ಮಹಿಳೆಯರಿಗೆ ಯಾವುದೇ ಖಾಸಗಿ ಆಸ್ಪತ್ರೆಗೆ ಕಡಿಮೆಯಿಲ್ಲದಂತೆ ಸೇವೆ ಸಲ್ಲಿಸಲು ಕೆಲವು ತೊಂದರೆ ಇತ್ತು. ಅದನ್ನು ನಿವಾರಿಸುವುದಕ್ಕಾಗಿ ಎಂಆರ್ ಪಿಎಲ್-ಒನ್ ಜಿಸಿ ಅಧಿಕಾರಿಗಳನ್ನು ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ನಾನು ಪ್ರಯತ್ನಿಸಿದರ ಕಾರಣದಿಂದ ಈಗ ಫಲ ಸಿಕ್ಕಿದೆ. ಅವರು ನಮ್ಮ ಮನವಿಯನ್ನು ಪರಿಗಣಿಸಿ 5.7 ಕೋಟಿ ರೂಪಾಯಿಯನ್ನು ಲೇಡಿಗೋಶನ್ ಆಸ್ಪತ್ರೆಗೆ ನೀಡಿದ್ದಕ್ಕೆ ಸಂಸದರ ಪರವಾಗಿ ಮತ್ತು ಶಾಾಸಕನ ನೆಲೆಯಲ್ಲಿ ಮತ್ತು ಬಡಜನರ ಪರವಾಗಿ ಅನಂತ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದರು.

 

  • Share On Facebook
  • Tweet It


- Advertisement -
vedavyas kamath


Trending Now
ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
Tulunadu News May 27, 2023
ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
Tulunadu News May 25, 2023
You may also like
ರಾಷ್ಟ್ರೀಯ ಕ್ರೀಡಾಪಟುವಿಗೆ 2 ಲಕ್ಷ ರೂ ಧನ ಸಹಾಯ ನೀಡಿದ ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಶನ್!
October 9, 2018
ಮುಸ್ಲಿಮರು ನಮಗೆ ಓಟ್ ಹಾಕಲ್ಲ ಎಂದು ಒಪ್ಪಿಕೊಂಡ ಎಐಸಿಸಿ ಸದಸ್ಯೆ ಕವಿತಾ ಸನಿಲ್!
March 23, 2018
ಮೊಯಿಲಿ ಪುತ್ರವಾತ್ಸಲ್ಯ ಕಾಂಗ್ರೆಸ್ ಜಾತಕ ಬಯಲಿಗೆ ತಂದು ಸಿದ್ದು ಕ್ಯಾಪೆಸಿಟಿ ತೋರಿಸಿತು!
March 21, 2018
Leave A Reply

  • Recent Posts

    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
    • ಕಾಶ್ಮೀರಿ ಫೈಲ್ಸ್ ಚರಿತ್ರೆ, ಕೇರಳ ಸ್ಟೋರಿ ವರ್ತಮಾನ!!
    • ಕಾಂಗ್ರೆಸ್ ಬಾಯಿಗೆ ಬಂದ ತುತ್ತನ್ನು ಮೈಮೇಲೆ ಚೆಲ್ಲಿಕೊಂಡಿದೆ!!
    • ಕಾಂಗ್ರೆಸ್ಸಿಗರೇ ಕ್ಯಾಲ್ಕುಲೇಟರ್ ನಲ್ಲಿ ಲೆಕ್ಕ ಹಾಕಿ ಘೋಷಣೆ ಕೂಗಿ!!
  • Popular Posts

    • 1
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 2
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search