• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಲಿಕೆಯವರಿಗೆ ಕಟ್ಟಡ ಬಾಡಿಗೆ, ನೀರಿನ ಬಿಲ್ ಸರಿಯಾಗಿ ವಸೂಲಿ ಮಾಡಲು ಏನು ಸಂಕಟ!!

Tulunadu News Posted On January 7, 2019
0


0
Shares
  • Share On Facebook
  • Tweet It

ನಾನು ನೀವು ಚಿಕ್ಕವರಿದ್ದಾಗ ಅಥವಾ ಶಾಲೆಗೆ ಹೋಗುತ್ತಿದ್ದಾಗ ನಮಗೆ ತಂದೆ ದಿನದ ಖರ್ಚಿಗೆಂದು ಐದು ರೂಪಾಯಿ ಕೊಡುತ್ತಿದ್ದರು ಎಂದು ಇಟ್ಟುಕೊಳ್ಳೋಣ. ನಾವು ಅದರಲ್ಲಿ ಎರಡು ರೂಪಾಯಿ ಮಾತ್ರ ಖರ್ಚು ಮಾಡಿ ಉಳಿದ ಹಣವನ್ನು ಹಾಗೆ ತಂದೆಗೆ ತಂದುಕೊಟ್ಟರೆ ನಮ್ಮನ್ನು ಬುದ್ಧಿವಂತ ಮಗು ಎಂದೇ ಎಲ್ಲರೂ ಹೊಗಳುತ್ತಿದ್ದರು. ನಮ್ಮ ಮಂಗಳೂರು ಮಹಾನಗರ ಪಾಲಿಕೆ ಕೂಡ ಇದೇ ಲಾಜಿಕ್ ಬಳಸಿ ತನ್ನನ್ನು ತಾನು ಬುದ್ಧಿವಂತ ಎಂದು ತೋರಿಸಿಕೊಡುವ ಉಮ್ಮೇದಿನಲ್ಲಿದ್ದಂತೆ ಕಾಣುತ್ತದೆ. ಆದರೆ ಅದಕ್ಕೆ ಗೊತ್ತಿಲ್ಲ, ಅದನ್ನು ಜನರು ಬುದ್ಧಿವಂತ ಅಲ್ಲ ಬುದ್ಧಿ”ವಂತೆ” ಎನ್ನುತ್ತಿದ್ದಾರೆ ಅಂತ. ವಿಷಯ ಏನೆಂದರೆ ಕೇಂದ್ರ ಸರಕಾರದ ಹದಿನಾಲ್ಕನೇ ಹಣಕಾಸು ಆಯೋಗದಿಂದ ಪಾಲಿಕೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಹಣ ಬರುತ್ತದೆ. ಹಾಗಂತ ಪಾಲಿಕೆಯಲ್ಲಿ ಮೇಯರ್ ಆಗಲೀ, ಕಮೀಷನರ್ ಆಗಲಿ ತಮ್ಮ ಚೇಂಬರ್ ನಲ್ಲಿ ಕುಳಿತು ದೆಹಲಿಗೆ ಫೋನ್ ಮಾಡಿ ” ಸ್ವಲ್ಪ ಹಣ ಬೇಕಿತ್ತು ಮಾರಾಯ್ರೆ, ಬೇಗ ಕಳುಹಿಸಿಕೊಡಿ, ಸದ್ಯ ನಿಮ್ಮಲ್ಲಿ ಇದ್ದಷ್ಟು ಕಳುಹಿಸಿಕೊಡಿ. ಇಲ್ಲಿ ಜನ ಫುಟ್ ಪಾತ್, ಡ್ರೈನೇಜ್, ನೀರು ಎಂದು ಬೊಬ್ಬೆ ಹೊಡೆಯುತ್ತಾರೆ, ಹಾಗೆ ಹಣ ಬೇಕು ಅಂತ ಫೋನ್ ಮಾಡಿದ್ದು” ಎಂದು ಹೇಳಲು ಆಗುವುದಿಲ್ಲ. 14ನೇ ಫೈನಾನ್ಸ್ ಕಮೀಷನ್ ನಲ್ಲಿ ಹಣ ಬರಲಿಕ್ಕೆ ಅದರದ್ದೇ ಆಗಿರುವ ನೀತಿನಿಯಮಾವಳಿಗಳಿವೆ. ಅದು ಏನು ಎಂದು ಮೊದಲು ನೋಡೋಣ. ಎಂತಹ ಯೂಸ್ ಲೆಸ್ ಜನ ಇದ್ದಾರೆ ಮಾರಾಯ್ರೆ… ಮೊದಲನೇಯದಾಗಿ ಪಾಲಿಕೆ ಕಡೆಯಿಂದ ಎರಡು ವರ್ಷಗಳ ಅಡಿಟ್ ವರದಿ ಕೇಂದ್ರಕ್ಕೆ ಕೊಡಬೇಕು. ಒಬ್ಬ ಸ್ಟ್ರಿಕ್ ಗಂಡ ತನ್ನ ಸಂಬಳವನ್ನು ಹೆಂಡತಿಯ ಕೈಯಲ್ಲಿ ಕೊಟ್ಟು ಯಾವುದ್ಯಾವುದಕ್ಕೆ ಎಷ್ಟೆಷ್ಟು ಖರ್ಚಾಗಿದೆ ಎಂದು ಲೆಕ್ಕ ಕೇಳುತ್ತಾನಲ್ಲ, ಅಷ್ಟು ಸುಲಭದ ಪ್ರಕ್ರಿಯೆ ಅಲ್ಲ ಇದು. ಪಾಲಿಕೆಯ ಅಡಿಟ್ ವರದಿಯಲ್ಲಿ ಮುಖ್ಯವಾಗಿ ಹಿಂದಿನ ವರ್ಷಕ್ಕಿಂತ ಈ ವರ್ಷ ಪಾಲಿಕೆಗೆ ಎಷ್ಟು ಹೆಚ್ಚು ಆದಾಯ ಬಂದಿದೆ ಎನ್ನುವುದನ್ನು ಅಡಿಟ್ ವರದಿಯಲ್ಲಿ ತೋರಿಸಬೇಕು. ಹಿಂದಿನ ವರ್ಷಕ್ಕಿಂತ ಈ ವರ್ಷ ಉತ್ತಮ ಆದಾಯ ಬಂದಿದೆ ಎಂದಾದರೆ ಮಾತ್ರ ಅನುದಾನ ಕೊಡುವ ನಿರ್ದಾರಕ್ಕೆ ಕೇಂದ್ರದಲ್ಲಿ ಕುಳಿತವರು ನಿಶ್ಚಯಿಸುತ್ತಾರೆ. ಉತ್ತಮವಾಗಿರುವ ಆದಾಯ ಗಳಿಕೆ ತೋರಿಸಿದ್ರೆ ಮಾತ್ರ ಅನುದಾನ, ಇಲ್ಲದಿದ್ದರೆ ಪಾಲಿಕೆಯವರೇ ತಟ್ಟೆ ಹಿಡಿದು ಹೊರಡಬೇಕು. ನಮ್ಮ ಪಾಲಿಕೆಯವರು ಎಂತಹ ಮಹಾನ್ ಆಲಸಿಗಳು ಎಂದರೆ 16-17 ಮತ್ತು 17-18 ರಂದು ಬರಿ ಕಂಬಳಿ ಹೊದ್ದು ಮಲಗಿದ್ದು ಮಾತ್ರ. ಎಲ್ಲಿಯ ತನಕ ಎಂದರೆ ಪಾಲಿಕೆಗೆ ಬರಬೇಕಾದ ಬಾಡಿಗೆಯ ಒಟ್ಟು ಸಂಗ್ರಹವಾದದ್ದೇ 66% ಮಾತ್ರ. ಇದು ಹೇಗೆ ಎಂದರೆ ನೀವು ಹತ್ತು ಮನೆ ಬಾಡಿಗೆ ಕೊಟ್ಟು ಆರರದ್ದು ಮಾತ್ರ ವಸೂಲಿ ಮಾಡಿದರೆ ನಿಮ್ಮನ್ನು ಚಾಣಾಕ್ಷ್ಯ ಎನ್ನುವುದಾ, ಆಲಸಿ ಎನ್ನುವುದಾ. ಇನ್ನು ನೀರಿನ ಬಿಲ್ ಸಂಗ್ರಹವಾದದ್ದೇ 56%. ಮನೆ ತೆರಿಗೆ ಮತ್ತು ಕಟ್ಟಡ ತೆರಿಗೆ 415 ಲಕ್ಷ ಬಾಕಿ ಬರಲು ಇದೆ. ಇಷ್ಟೆಲ್ಲ ಲೋಪದೋಷ ಇಟ್ಟುಕೊಂಡ ಮೇಲೆ ನಮಗೆ ಕೇಂದ್ರದ ಹದಿನಾಲ್ಕನೇ ಹಣಕಾಸು ಯೋಜನೆಯವರು ಹಣ ಕೊಡಬೇಕು ಎಂದರೆ ನಮ್ಮ ಪಾಲಿಕೆ ಕಮೀಷನರ್ ಮತ್ತು ಮೇಯರ್ ಕೇಂದ್ರದ ಅಳಿಯರಾ? ನಷ್ಟವಾದದ್ದು ಸಾಮಾನ್ಯ ಜನರಿಗೆ… ಹಾಗೆ ಇವರ ಈ ನೀರಸ ಕೆಲಸದಿಂದ ಪಾಲಿಕೆಗೆ ಬರಬೇಕಾದ ಅನುದಾನ ಕೇಂದ್ರದಿಂದ ಬಂದೇ ಇಲ್ಲ. ಇದರಲ್ಲಿ ಕಳೆದುಕೊಂಡದ್ದು ಯಾರು? ನಾವು, ನೀವು ಸಾಮಾನ್ಯ ಜನ. ನಾವೇನು ಪಾಲಿಕೆಯವರಿಗೆ ಎಲ್ಲರಿಂದಲೂ ಬಾಡಿಗೆಯನ್ನು ಸರಿಯಾಗಿ ತೆಗೆದುಕೊಳ್ಳಬೇಡಿ ಎಂದು ಹೇಳಿದ್ದೆವಾ? ನಾವು ನೀರಿನ ಬಿಲ್ ಸರಿಯಾಗಿ ವಸೂಲಿ ಮಾಡಬೇಡಿ ಎಂದಿದ್ದೇವಾ? ಇವರಿಗೆ ಸರಿಯಾಗಿ ವಸೂಲಿ ಮಾಡದೇ ಇರಲು ಪ್ರಭಾವಿಗಳ, ತಲೆತಲಾಂತರದಿಂದ ಇದ್ದಂತೆ ಇರುವ ಕಾಂಗ್ರೆಸ್ ಮನಪಾ ಸದಸ್ಯರ ಒತ್ತಡ ಇರಬಹುದು. ಅದರಿಂದ ಕಳೆದುಕೊಂಡದ್ದು ಮಾತ್ರ ನಾವು. ಹೀಗೆ ಅನುದಾನ ಬರದೇ ಇರುವುದರಿಂದ ನಮ್ಮ ರಸ್ತೆಯ ಕಾಂಕ್ರೀಟಿಕರಣ, ಡ್ರೈನೇಜ್, ಬೀದಿದೀಪ, ಕುಡಿಯುವ ನೀರು ಅವ್ಯವಸ್ಥೆ ಸರಿಯಾಗದೇ ಇದ್ದರೆ ಪಾಲಿಕೆಯಲ್ಲಿ ಕುಳಿತಿರುವ ಬಿಳಿ ಪ್ಯಾಂಟ್, ಬಿಳಿ ಶರ್ಟ್ ನ ಯಾವುದೇ ಹಿರಿಯ ಕಾರ್ಫೋರೇಟರ್ ಕೊಡುವುದಿಲ್ಲ. ಕಳೆದುಕೊಂಡದ್ದು ನಾವು. ಒಂದು ವೇಳೆ ಕಾಂಗ್ರೆಸ್ಸಿನವರಿಗೆ ಸರಿಯಾದ ಅಡಿಟ್ ವರದಿ ಕೊಟ್ಟು ಉತ್ತಮ ಆದಾಯ ಏರಿಕೆ ಆಗುವಂತೆ ಮಾಡಿ ಅದರಿಂದ ಅನುದಾನ ತರಲು ಆಗದೇ ಇದ್ದಲ್ಲಿ ಮುಂದಿನ ಬಾರಿ ನಾವು ಸ್ಪರ್ಧೆ ಮಾಡಲ್ಲ ಎಂದು ಹೇಳಲಿ.�

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search