• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಡಾ|ಕಲ್ಲಡ್ಕ ಭಟ್ ಹೆಸರು ದುರುಪಯೋಗ ಮಾಡಿ ಗೆಲ್ಲುವ ಪ್ರಯತ್ನ ಯಾಕೆ ಸಣ್ಣ ರೈ!!

Tulunadu News Posted On April 2, 2019
0


0
Shares
  • Share On Facebook
  • Tweet It

ಪ್ರಭಾಕರ ಭಟ್ಟ ನೀನು ಗಂಡು ಮಗ ಆದರೆ ಇಲ್ಲಿ ಬಾ ಎಂದು ಮಿಥುನ್ ರೈ ಹಿಂದೆ ಕಾಂಗ್ರೆಸ್ ನ ಕಾರ್ಯಕ್ರಮವೊಂದರಲ್ಲಿ ಗುಡುಗಿದ್ದರು. ಅದು ಕೈಕಂಬದ ಸಮಾವೇಶ ಇರಬೇಕು. ತುಳುವಿನಲ್ಲಿ ಏಕವಚನದಲ್ಲಿ ಕರೆದಿದ್ದರು. ಭಟ್ಟ ಬರುವುದಿಲ್ಲ, ಬಿಜೆಪಿಯ ಯಾವ ಕಾರ್ಯಕರ್ತ ಕೂಡ ಬರುವುದಿಲ್ಲ ಎಂದು ವಿಕಟ ನಗೆ ನಗುತ್ತಾ ಮಿಥುನ್ ರೈ ಹೇಳುತ್ತಿದ್ದರೆ ಯುವ ಕಾಂಗ್ರೆಸ್ಸಿಗರಲ್ಲಿ ಅದೇನೋ ಹುರುಪು. ಅದೆಲ್ಲ ಆಗಿ ಸುಮಾರು ಸಮಯವಾಗಿದೆ. ಆವತ್ತು ವೇದಿಕೆಯಲ್ಲಿದ್ದ ಮೊಯ್ದೀನ್ ಬಾವ ಈಗ ಮಾಜಿಯಾಗಿದ್ದಾರೆ. ಆವತ್ತು ತಮ್ಮ ತಂದೆ ವಯಸ್ಸಿನವರಾದ ಡಾ|ಪ್ರಭಾಕರ ಭಟ್ ಕಲ್ಲಡ್ಕ ಅವರನ್ನು ಬೈದ ಮಿಥುನ್ ರೈ ಈಗ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ. ವಿಷಯ ಇರುವುದು ಆವತ್ತು ಪ್ರಭಾಕರ ಭಟ್ಟರನ್ನು ಏಕವಚನದಲ್ಲಿ ಬೈದ ಸಣ್ಣ ರೈ ತಮ್ಮ ಗೆಲುವಿನ ತಂತ್ರವಾಗಿ ಪ್ರಭಾಕರ ಭಟ್ ಅವರ ಮೊರೆ ಹೋಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟರ್ ಹರಿಯಲು ಬಿಟ್ಟ ಮಿಥೂನ್ ರೈ ಬಳಗ ಅದರಿಂದ ಸಂಘಪರಿವಾರದ ಒಳಗೆ ವಿಷದ ಬೀಜ ಬಿತ್ತುವ ಕೆಲಸ ಮಾಡಿದೆ. ಪೋಸ್ಟರ್ ನಲ್ಲಿ ಡಾ|ಪ್ರಭಾಕರ ಭಟ್ ಅವರ ಫೋಟೋ ಹಾಕಿ ಈ ಚುನಾವಣೆಯಲ್ಲಿ ಸೋಲೋ, ಗೆಲುವೋ, ಸೋಮಾರಿ ಕೆಲಸ ಮಾಡದ ಸಂಸದನನ್ನು ನಿದ್ದೆ ಇಲ್ಲದ ಹಾಗೆ ಮಾಡಿದೆ ಈ ಮಿಥುನ್ ರೈ ಅಲೆ ಎಂದು ಬರೆದು ಅದರ ಕೆಳಗೆ ಕಲ್ಲಡ್ಕ ಪ್ರಭಾಕರ್ ಭಟ್ ಎಂದು ಬರೆಯಲಾಗಿದೆ. ಇದರ ಅಗತ್ಯ ಮಿಥುನ್ ರೈಗೆ ಇದೆ ಎಂದಾದರೆ ಅವರು ಮುಳುಗುತ್ತಿರುವ ದೋಣೆಯ ಒಳಗೆ ನಿಂತು ದಡದ ಮೇಲಿರುವವರನ್ನು ಉಳಿಸಿ ಬನ್ನಿ ಎಂದು ಗೋಗರೆಯುತ್ತಿದ್ದಾರೆ ಎಂದೇ ಅರ್ಥ. ಈ ಬಗ್ಗೆ ಈಗಾಗಲೇ ಡಾ|ಭಟ್ ಬಂಟ್ವಾಳ ನಗರ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದಾರೆ. ಈ ಮೂಲಕ ಸಣ್ಣ ರೈಗೆ ನಿರಾಸೆ ತಂದಿದ್ದಾರೆ. ಇಂತಹ ಕನಿಷ್ಟ ಮಟ್ಟದ ಗಿಮಿಕ್ ಅನ್ನು ಮಿಥುನ್ ಮಾಡಲು ಹೋಗಲೇಬಾರದು. ಯಾಕೆಂದರೆ ಹೀಗೆ ಮಾಡಿಯೂ ಸೋತರೆ ಅದು ರೈಗೆ ಆತ್ಮವಂಚನೆ ಮಾಡಿಯೂ ಸೋತ ಹಾಗೆ ಆಗುತ್ತದೆ. ಒಂದು ವೇಳೆ ಕಲ್ಲಡ್ಕ ಪ್ರಭಾಕರ್ ಭಟ್ ಅವರು ನಳಿನ್ ವಿರುದ್ಧ ಬಹಿರಂಗವಾಗಿ ಹೀಗೆ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟರೆ ಆವಾಗ ಬೇಕಾದರೆ ಮಿಥುನ್ ರೈ ಬಳಗ ಅದನ್ನು ಪ್ರಸರಿಸಿದರೆ ಅದು ಬೇರೆ ವಿಷಯ. ಆದರೆ ಹೇಳದೇ ಇರುವ ವಿಷಯವನ್ನು ಸುಳ್ಳು ಸುದ್ದಿ ಮಾಡುವುದು ಯಾಕೆ ರೈ?

ಪೂಜಾರಿಯವರನ್ನು ಏನು ಮಾಡಲಾಗದೇ ಭಟ್ ಹೆಸರು ಬಳಕೆ…

ಕಾಂಗ್ರೆಸ್ಸಿಗರಿಗೆ ಮುಖ್ಯವಾಗಿ ಇರುವ ಕೋಪ ಏನೆಂದರೆ ಜನಾರ್ಧನ ಪೂಜಾರಿಯವರ ಹೇಳಿಕೆ ಬಗ್ಗೆ. ತಮ್ಮಲ್ಲಿ ಜನಾರ್ಧನ ಪೂಜಾರಿ ಇದ್ದ ಹಾಗೆ ಅತ್ತ ಕಡೆ ಪ್ರಭಾಕರ್ ಭಟ್ ಇದ್ದಾರೆ. ಇಲ್ಲಿ ಬಿಜೆಪಿಯವರು ಜನಾರ್ಧನ ಪೂಜಾರಿಯವರ ಹೇಳಿಕೆಗಳನ್ನು ತೆಗೆದು ಪ್ರಚಾರ ಮಾಡುವುದರಿಂದ ಕಾಂಗ್ರೆಸ್ಸಿಗೆ ಡ್ಯಾಮೇಜ್ ಆಗುತ್ತಿದೆ. ಹಾಗೆ ತಾವು ಪ್ರಭಾಕರ್ ಭಟ್ ಅವರು ಹೇಳಿದ್ದಾರೆ ಎಂದು ಬರೆದು ಅಪಪ್ರಚಾರ ಮಾಡೋಣ ಎಂದು ಅಂದುಕೊಂಡಿದ್ದಾರೆ. ಆದರೆ ವ್ಯತ್ಯಾಸ ಏನೆಂದರೆ ಜನಾರ್ಧನ ಪೂಜಾರಿಯವರು ಬಹಿರಂಗವಾಗಿ ಮಾಧ್ಯಮಗಳಿಗೆ ಹೇಳಿಕೆಗಳನ್ನು ಕೊಡುತ್ತಾರೆ. ಆದ್ದರಿಂದ ಪೂಜಾರಿಯವರ ಹೆಸರನ್ನು ಮಿಸ್ ಯೂಸ್ ಮಾಡುವ ಪ್ರಸಂಗ ಬಿಜೆಪಿಗೆ ಬರುವುದೇ ಇಲ್ಲ. ಅವರು ಹೇಳಿದ್ದನ್ನೇ ಬಿಜೆಪಿಯವರು ಮಾಧ್ಯಮಗಳಿಂದ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಬಿಟ್ಟಿರಬಹುದು. ಅದರಲ್ಲಿ ತಪ್ಪಿಲ್ಲ. ಆದರೆ ಇಲ್ಲಿ ಮಿಥುನ್ ಮಾಡಿರುವುದು ಏನೆಂದರೆ ಪ್ರಭಾಕರ್ ಭಟ್ ಅವರು ಹೇಳದೇ ಇದ್ದ ಮಾತುಗಳನ್ನೇ ಹೇಳಿದ್ದಾರೆ ಎಂದು ಬಿಂಬಿಸಿ ಹರಡಿಸುತ್ತಿರುವುದು.

ಡಾ|ಭಟ್ ಹಿಂದೆ ಕೂಡ ಹೀಗೆ ಮಾಡಬಹುದಿತ್ತು..

ಹಾಗಂತ ಪ್ರಭಾಕರ ಭಟ್ ಹಾಗೂ ನಳಿನ್ ಕುಮಾರ್ ಕಟೀಲ್ ಅವರ ಮಧ್ಯೆ ಎಲ್ಲವೂ ಸರಿಯಿದೆಯಾ, ಇಲ್ಲವಾ ಎನ್ನುವುದು ರಾಜಕೀಯ ಪಂಡಿತರಿಗೆ ಗೊತ್ತಿದೆ. ಅದನ್ನು ಎನ್ ಕ್ಯಾಶ್ ಮಾಡಲು ಕಾಂಗ್ರೆಸ್ ಹಿಂದಿನ ಬಾಗಿಲಿನಿಂದ ಪ್ರಯತ್ನ ಒಂದಿಷ್ಟು ಮಾಡುತ್ತಿದೆ. ಈ ಬಾರಿ ಡಾ|ಪ್ರಭಾಕರ ಭಟ್ ಅವರು ಪೊಲೀಸ್ ಠಾಣೆಯಲ್ಲಿ ತಮ್ಮ ಹೆಸರನ್ನು ದುರುಪಯೋಗ ಮಾಡುತ್ತಿದ್ದಾರೆ ಎಂದು ಹೇಳಿ ಹೇಗೆ ದೂರು ಕೊಟ್ಟರೋ ಹಾಗೆ ಹಿಂದೆ ಒಂದು ವೆಬ್ ಸೈಟ್ ಹೀಗೆ ಬರೆದಿತ್ತು. ಅದೇನೆಂದರೆ ದೇಶದ ಅಭಿವೃದ್ಧಿಗಾಗಿ ಕಳಪೆ ಸಂಸದನನ್ನು ಸಹಿಸಿಕೊಳ್ಳಬೇಕಾಗಿದೆ ಎಂದು ಪ್ರಭಾಕರ ಭಟ್ ಹೆಸರು ಹೇಳಿ ಸುದ್ದಿ ಮಾಡಿತ್ತು. ಒಂದು ವೇಳೆ ಪ್ರಭಾಕರ್ ಭಟ್ ಆ ವೆಬ್ ಸೈಟ್ ಗೆ ಹಾಗೆ ಹೇಳದಿದ್ದರೆ ಆ ವೆಬ್ ಸೈಟ್ ನವರು ಹಾಗೆ ಕಹಳೆ ಊದಿ ಕಾಂಗ್ರೆಸ್ಸಿಗೆ ಹೀಗೆ ಮಾಡಬಹುದು ಎನ್ನುವ ಅವಕಾಶ ಕೊಡಬಾರದಿತ್ತು. ಒಟ್ಟಿನಲ್ಲಿ ಸಂಘ ಪರಿವಾರ ಈ ಬಾರಿ ನಳಿನ್ ಅವರ ಜೊತೆಗೆ ಗಟ್ಟಿಯಾಗಿ ನಿಂತಿರುವುದು ನಳಿನ್ ಗೆಲುವಿಗೆ ಸುಲಭವಾಗಬಹುದು. ಆದರೆ ಎರಡು ಕಡೆ ಸಾಮಾಜಿಕ ಜಾಲತಾಣಗಳನ್ನು ಯಶಸ್ವಿಯಾಗಿ ಬಳಸುವ ಕೆಲಸ ನಡೆಯುತ್ತಿದೆ. ಬಿಜೆಪಿ ಭತ್ತಳಿಕೆಯಲ್ಲಿ ಪೂಜಾರಿ ಇದ್ದಾರೆ. ಕಾಂಗ್ರೆಸ್ಸ್ ಭತ್ತಳಿಕೆಯಲ್ಲಿ ಪ್ರಭಾಕರ್ ಭಟ್ ಹೆಸರು ದುರುಪಯೋಗಪಡಿಸುವ ಪ್ರಯತ್ನ ನಡೆಯುತ್ತಿದೆ. ಪೂಜಾರಿ ಬಿಜೆಪಿಗೆ ಲಾಭವಾಗುವ ಹಾಗೆ ಹೇಳಿಕೆ ಟಿವಿ ಕ್ಯಾಮೆರಾದೆದುರು ಕೊಡುತ್ತಾರೆ. ಡಾ|ಕಲ್ಲಡ್ಕ ಭಟ್ ಅವರು ಕೊಡುವುದಿಲ್ಲ. ಇಷ್ಟೇ ವ್ಯತ್ಯಾಸ!

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search