• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವ್ಹಾಟ್ಸ್ಆಪ್ ಮೂಲಕ ಬಂತು ಹದಿನಾಲ್ಕು ಲಕ್ಷದ ತೊಂಬತ್ತು ಸಾವಿರ ರೂಪಾಯಿಗಳ ಚಕ್..!

TNN Correspondent Posted On August 1, 2017
0


0
Shares
  • Share On Facebook
  • Tweet It

ಜನ ಎಲ್ಲಿಯವರೆಗೆ ಮೋಸ ಹೋಗುತ್ತಾರೋ ಅಲ್ಲಿಯವರೆಗೆ ಮೋಸ ಮಾಡುವವರು ಇರುತ್ತಾರೆ ಅನ್ನುವ ಮಾತು ನೀವೆಲ್ಲಾ ಕೇಳಿದ್ದಿರಿ. ಬದಲಾದ ಈ ಕಾಲದಲ್ಲೂ ಶಿಕ್ಷಣವಂತರನ್ನೂ ಬಿಡದೆ ವಂಚನೆ ಮಾಡಲಾಗುತ್ತಿದೆ. ನಗರದಲ್ಲಿ ಹೆಚ್ಚು ಶಿಕ್ಷಿತರು ಇರುವ ಕಾರಣದಿಂದಲೋ ಗೊತ್ತಿಲ್ಲ ಗ್ರಾಮೀಣ ಭಾಗದದಲ್ಲಿ ಆನ್ ಲೈನ್ ಮತ್ತು ಸಾಮಾಜಿಕ ಜಾಲತಾಣ ಬಳಸಿಕೊಂಡು ವಂಚನೆಗಳು ಈಗ ಹೆಚ್ಚಾಗಿ ನಡೆಯುತ್ತಿದೆ . ಇದಕ್ಕೆ ಜೀವಂತ ನಿದರ್ಶನ ಕಡಬ ತಾಲೂಕಿನ ನೆಲ್ಯಾಡಿಯ ಪ್ರಭ ಎನ್ನುವವರಿಗೆ ಕಳೆದ ಕೆಲವು ದಿನಗಳಿಂದ ಎರಡು ದೂರವಾಣಿ ಸಂಖ್ಯೆಗಳಿಂದ ಕರೆ ಬಂದಿದೆ. ನಿಮಗೆ  15 ಲಕ್ಷರೂಪಾಯಿ ಹಾಗೂ ಕಾರು ಬಹುಮಾನ ಬಂದಿದೆ ಎಂದು ಪದೆ ಪದೆ ಹೇಳುತ್ತಿದ್ದು, ಇದನ್ನು ಪಡೆಯಲು ನಿಗದಿತ ಖಾತೆಗೆ ಗೆ 25,000 ರೂಪಾಯಿ ಕಳುಹಿಸಿ ಎಂದಿದ್ದಾರೆ. ಈ ಸುದ್ದಿಯನ್ನು ನಿರಾಕರಿಸಿದ ಪ್ರಭಾ ಅವರಿಗೆ  ಮತ್ತೆ ನಂಬಿಕೆ ಹುಟ್ಟಿಸಲು ಪ್ರಭಾ ಹೆಸರಿನಲ್ಲಿ  14,90,000  ರುಪಾಯಿಯ ಚೆಕ್ ಮತ್ತು  ಕಾರಿನ ಮಾದರಿ ಚಿತ್ರವನ್ನು ಕಳುಹಿಸಿಕೊಟ್ಟಿದ್ದಾರೆ. ಪದೇ ಪದೇ ಕರೆ ಬಂದ ಕಾರಣ ಪ್ರಭ ಅವರು ಬಂದಿರುವ ಬಹುಮಾನ ಹಣದಲ್ಲಿಯೇ 25 ಸಾವಿರ ಕಡಿತಗೊಳಿಸಿ ಉಳಿದ ಹಣವನ್ನು ನೀಡುವಂತೆ ಮರು ಉತ್ತರಿಸಿದ್ದಾರೆ. ಕೋಟಕ್ ಮಹೇಂದ್ರ ಬ್ಯಾಂಕ್ ನಲ್ಲಿರುವ ಈ ಚಕ್ ನ್ನು ಪ್ರಭ ಅವರ ಕುಟುಂಬದ ಸದಸ್ಯರೋರ್ವರು ಪರಿಶೀಲನೆ ನಡೆಸಿದ್ದು, ನಕಲಿ ಖಾತೆಯೆಂದು ತಿಳಿದು ಬಂದಿದೆ. ಲಕ್ಷ್ಮಿ ಗ್ರೂಪ್ ಆಫ್ ಕಂಪೆನಿ ಎಂದು ಹೆಸರು ನಮೂದಾಗಿದ್ದು, ಲಕ್ಷ್ಮಿ ನಾರಾಯಣ ಶರ್ಮ ಈ ಕಂಪೆನಿಯ ಮುಖ್ಯಸ್ಥ ಎಂದು ಬರೆಯಲಾಗಿದೆ ಇದೊಂದು ಹೊಸ ರೂಪದ ವಂಚನೆಯಾಗಿರುವುದು ಗೊತ್ತಾಗಿದೆ. ಈ ವಿಚಾರವನ್ನು ಸಾಮಾಜಿಕ ಕಾರ್ಯಕರ್ತ  ಪ್ರಕಾಶ್ ಕೋಡಿಂಬಾಳ ಮಾಹಿತಿ ಕಳುಹಿಸಿದ್ದಾರೆ . ಇದು ನೆಲ್ಯಾಡಿ ಮಾತ್ರವಲ್ಲದೆ ಕಡಬ ತಾಲೂಕಿನ ಹಲವು ಕಡೆಗಳಲ್ಲಿನ ನಾಗರೀಕರಿಗೆ ಕರೆ ಬಂದಿದೆ.  ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಿವಂತೆ ನಮ್ಮ ಮನವಿ.

“ನನಗೆ ದಿನಾ ಕರೆ ಮಾಡಿ ಬಹುಮಾನ ಬಂದಿರುವುದರ ಬಗ್ಗೆ ಹೇಳಿದ್ದರು. ಜಮೆ ಮಾಡಲು ಒಪ್ಪದ ಕಾರಣ ವಾಟ್ಸಪ್ ಮೂಲಕ ಚಕ್ ಮತ್ತು ಕಾರಿನ ಮಾದರಿ ಚಿತ್ರವನ್ನು ಕಳುಹಿಸಿಕೊಟ್ಟಿದ್ದಾರೆ. ನಾನು ವಿದ್ಯಾವಂತೆಯಾಗಿದ್ದು ಮೋಸದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುತ್ತಿದ್ದೆನೆ”-ಪ್ರಭಾ ವಂಚನೆ ಕರೆ ಸ್ವೀಕರಿಸಿರುವ ಯುವತಿ

ಜಾಗದ ದಾಖಲೆ ಪತ್ರ, ಎಲ್ಲಾ ಗುರುತಿನ ಪುರಾವೆ ಇದ್ದರೂ ನಮ್ಮೂರಿನ ಬ್ಯಾಂಕೂಗಳೇ 10 ಸಾವಿರ ಸಾಲ ಕೊಡುವುದಿಲ್ಲ ಇನ್ನು ಅಪರಿಚಿತ ಸ್ಥಳದಿಂದ 25 ಲಕ್ಷ ಬಹುಮಾನ ಬರುವುದು ಮೋಸವಲ್ಲದೆ ಬೇರೆನೂ ಅಲ್ಲ. ಎಲ್ಲರಿಂದ ಮಾಹಿತಿ ಪಡೆದು ಪೊಲೀಸರಿಗೆ ದೂರು ಕೊಡಲು ತೀರ್ಮಾನಿಸಿದ್ದೆವೆ. ಶಂಕರ ನೆಲ್ಯಾಡಿ ,ಓರ್ವ ನಾಗರೀಕ.

0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search