• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೀರು ಪೋಲಾಗುತ್ತಿರುವ ಶಕ್ತಿನಗರದ ಪ್ರದೇಶಕ್ಕೆ ಶಾಸಕ ಕಾಮತ್ ಧೀಡಿರ್ ಭೇಟಿ!

Tulunadu News Posted On April 24, 2019
0


0
Shares
  • Share On Facebook
  • Tweet It

ಮಂಗಳೂರಿನ ಶಕ್ತಿನಗರದ ನೀತಿನಗರದ ಮೂಲಕ ರಾಜೀವನಗರಕ್ಕೆ ಹೋಗುವ ದಾರಿಯಲ್ಲಿ ಪಾಲಿಕೆಯಿಂದ ನಿರ್ಮಿಸಲ್ಪಟ್ಟಿರುವ ಬೃಹತ್ ನೀರಿನ ಟಾಂಕಿಯಿಂದ ದಿನಕ್ಕೆ ಅಸಂಖ್ಯಾತ ಲೀಟರ್ ನೀರು ಪೋಲಾಗುತ್ತಿದ್ದು ಜಿಲ್ಲಾಡಳಿತ ಮತ್ತು ಪಾಲಿಕೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕಾದ ಅವಶ್ಯಕತೆ ಇದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಅವರು ನೀರು ಪೋಲಾಗಿ ಹೋಗುತ್ತಿರುವ ಬಗ್ಗೆ ಸ್ಥಳೀಯರಿಂದ ಮಾಹಿತಿ ಸಿಕ್ಕಿದಾಗ ತಕ್ಷಣ ಆ ಪ್ರದೇಶಗಳಿಗೆ ಭೇಟಿಯಾಗಿ ಈ ಬಗ್ಗೆ ಜಿಲ್ಲಾಡಳಿತ ಮತ್ತು ಪಾಲಿಕೆ ಅಧಿಕಾರಿಗಳಿಗೆ ಜಾಗೃತಿ ಮೂಡಿಸಿದ್ದಾರೆ. ಒಂದೂವರೆಯಿಂದ ಎರಡು ಮೀಟರ್ ನಷ್ಟು ನೀರು ನಿತ್ಯ ವೇಸ್ಟ್ ಆಗುತ್ತಿದ್ದು ಇದರಿಂದ ಕನಿಷ್ಟ ಐನೂರರಿಂದ ಒಂದು ಸಾವಿರ ಮನೆಗಳ ಅವಶ್ಯಕತೆಗೆ ನಿತ್ಯ ಈ ನೀರು ಸಾಕಾಗುತ್ತಿತ್ತು. ಮರೋಳಿ, ಶಕ್ತಿನಗರ ಬೋಂದೇಲ್, ಪಚ್ಚನಾಡಿ, ಕುಂಜತ್ತಬೈಲ್ ತನಕ ಈ ನೀರು ಪೂರೈಕೆಯಾಗುತ್ತದೆ. ಆದರೆ ಇಲ್ಲಿಯೇ ದೊಡ್ಡ ಪ್ರಮಾಣದಲ್ಲಿ ನೀರು ಪೋಲಾಗುತ್ತಿರುವುದು ಎರಡು ತಿಂಗಳ ಹಿಂದೆ ಅಧಿಕಾರಿಗಳ ಗಮನಕ್ಕೆ ತಂದರೂ ಏನೂ ಕ್ರಮ ಕೈಗೊಳ್ಳದಿರುವುದು ಸರಿಯಲ್ಲ ಎಂದು ಶಾಸಕ ಕಾಮತ್ ಅಭಿಪ್ರಾಯಪಟ್ಟಿದ್ದಾರೆ.

https://www.facebook.com/vedavyasbjp/videos/1319914824839395/

ಈ ಬಗ್ಗೆ ಮಾತನಾಡಿದ ಶಾಸಕ ಕಾಮತ್ ಕಳೆದ ಏಳೆಂಟು ದಿನಗಳಿಂದ ನೀರಿನ ಸಮಸ್ಯೆ ಇದೆ. ಈ ಬಾರಿ ನಿತ್ಯ ಜನರು ನೀರಿಗಾಗಿ ಪರದಾಡುತ್ತಿರುವ ಈ ಸಂದರ್ಭದಲ್ಲಿ ಅಧಿಕಾರಿಗಳ ಕರ್ತವ್ಯ ಮುಖ್ಯ. ಅವರು ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಕಾರಣ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ, ರೇಶನಿಂಗ್ ಮುಖಾಂತರ ಕುಡಿಯಲು ನೀರು ಕೊಡಲಾಗುವುದು ಎನ್ನುವ ಕಾರಣಕ್ಕೆ ನಾಲ್ಕು ದಿನಗಳಿಗೊಮ್ಮೆ ನೀರು ಬಿಡಲಾಗುತ್ತದೆ. ಇದರಿಂದ ಜನ ಒಂದು ಕೊಡಪಾನ ನೀರಿಗಾಗಿ ಬೇರೆ ಕಡೆ ಹೋಗುತ್ತಿದ್ದಾರೆ. ಆದರೆ ಇಲ್ಲಿ ಟಾಂಕಿ, ಗೇಟ್ ವಾಲ್ ಎಲ್ಲವೂ ಸೋರಿಕೆಯಾಗಿ ಲಕ್ಷಗಟ್ಟಲೆ ಲೀಟರ್ ನೀರು ಹರಿದು ಚರಂಡಿ ಸೇರುತ್ತಿದೆ ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search