• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೀರು ಪೋಲಾಗುತ್ತಿರುವ ಶಕ್ತಿನಗರದ ಪ್ರದೇಶಕ್ಕೆ ಶಾಸಕ ಕಾಮತ್ ಧೀಡಿರ್ ಭೇಟಿ!

Tulunadu News Posted On April 24, 2019
0


0
Shares
  • Share On Facebook
  • Tweet It

ಮಂಗಳೂರಿನ ಶಕ್ತಿನಗರದ ನೀತಿನಗರದ ಮೂಲಕ ರಾಜೀವನಗರಕ್ಕೆ ಹೋಗುವ ದಾರಿಯಲ್ಲಿ ಪಾಲಿಕೆಯಿಂದ ನಿರ್ಮಿಸಲ್ಪಟ್ಟಿರುವ ಬೃಹತ್ ನೀರಿನ ಟಾಂಕಿಯಿಂದ ದಿನಕ್ಕೆ ಅಸಂಖ್ಯಾತ ಲೀಟರ್ ನೀರು ಪೋಲಾಗುತ್ತಿದ್ದು ಜಿಲ್ಲಾಡಳಿತ ಮತ್ತು ಪಾಲಿಕೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕಾದ ಅವಶ್ಯಕತೆ ಇದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಅವರು ನೀರು ಪೋಲಾಗಿ ಹೋಗುತ್ತಿರುವ ಬಗ್ಗೆ ಸ್ಥಳೀಯರಿಂದ ಮಾಹಿತಿ ಸಿಕ್ಕಿದಾಗ ತಕ್ಷಣ ಆ ಪ್ರದೇಶಗಳಿಗೆ ಭೇಟಿಯಾಗಿ ಈ ಬಗ್ಗೆ ಜಿಲ್ಲಾಡಳಿತ ಮತ್ತು ಪಾಲಿಕೆ ಅಧಿಕಾರಿಗಳಿಗೆ ಜಾಗೃತಿ ಮೂಡಿಸಿದ್ದಾರೆ. ಒಂದೂವರೆಯಿಂದ ಎರಡು ಮೀಟರ್ ನಷ್ಟು ನೀರು ನಿತ್ಯ ವೇಸ್ಟ್ ಆಗುತ್ತಿದ್ದು ಇದರಿಂದ ಕನಿಷ್ಟ ಐನೂರರಿಂದ ಒಂದು ಸಾವಿರ ಮನೆಗಳ ಅವಶ್ಯಕತೆಗೆ ನಿತ್ಯ ಈ ನೀರು ಸಾಕಾಗುತ್ತಿತ್ತು. ಮರೋಳಿ, ಶಕ್ತಿನಗರ ಬೋಂದೇಲ್, ಪಚ್ಚನಾಡಿ, ಕುಂಜತ್ತಬೈಲ್ ತನಕ ಈ ನೀರು ಪೂರೈಕೆಯಾಗುತ್ತದೆ. ಆದರೆ ಇಲ್ಲಿಯೇ ದೊಡ್ಡ ಪ್ರಮಾಣದಲ್ಲಿ ನೀರು ಪೋಲಾಗುತ್ತಿರುವುದು ಎರಡು ತಿಂಗಳ ಹಿಂದೆ ಅಧಿಕಾರಿಗಳ ಗಮನಕ್ಕೆ ತಂದರೂ ಏನೂ ಕ್ರಮ ಕೈಗೊಳ್ಳದಿರುವುದು ಸರಿಯಲ್ಲ ಎಂದು ಶಾಸಕ ಕಾಮತ್ ಅಭಿಪ್ರಾಯಪಟ್ಟಿದ್ದಾರೆ.

https://www.facebook.com/vedavyasbjp/videos/1319914824839395/

ಈ ಬಗ್ಗೆ ಮಾತನಾಡಿದ ಶಾಸಕ ಕಾಮತ್ ಕಳೆದ ಏಳೆಂಟು ದಿನಗಳಿಂದ ನೀರಿನ ಸಮಸ್ಯೆ ಇದೆ. ಈ ಬಾರಿ ನಿತ್ಯ ಜನರು ನೀರಿಗಾಗಿ ಪರದಾಡುತ್ತಿರುವ ಈ ಸಂದರ್ಭದಲ್ಲಿ ಅಧಿಕಾರಿಗಳ ಕರ್ತವ್ಯ ಮುಖ್ಯ. ಅವರು ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಕಾರಣ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ, ರೇಶನಿಂಗ್ ಮುಖಾಂತರ ಕುಡಿಯಲು ನೀರು ಕೊಡಲಾಗುವುದು ಎನ್ನುವ ಕಾರಣಕ್ಕೆ ನಾಲ್ಕು ದಿನಗಳಿಗೊಮ್ಮೆ ನೀರು ಬಿಡಲಾಗುತ್ತದೆ. ಇದರಿಂದ ಜನ ಒಂದು ಕೊಡಪಾನ ನೀರಿಗಾಗಿ ಬೇರೆ ಕಡೆ ಹೋಗುತ್ತಿದ್ದಾರೆ. ಆದರೆ ಇಲ್ಲಿ ಟಾಂಕಿ, ಗೇಟ್ ವಾಲ್ ಎಲ್ಲವೂ ಸೋರಿಕೆಯಾಗಿ ಲಕ್ಷಗಟ್ಟಲೆ ಲೀಟರ್ ನೀರು ಹರಿದು ಚರಂಡಿ ಸೇರುತ್ತಿದೆ ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search