• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೀರು ಪೋಲಾಗುತ್ತಿರುವ ಶಕ್ತಿನಗರದ ಪ್ರದೇಶಕ್ಕೆ ಶಾಸಕ ಕಾಮತ್ ಧೀಡಿರ್ ಭೇಟಿ!

Tulunadu News Posted On April 24, 2019
0


0
Shares
  • Share On Facebook
  • Tweet It

ಮಂಗಳೂರಿನ ಶಕ್ತಿನಗರದ ನೀತಿನಗರದ ಮೂಲಕ ರಾಜೀವನಗರಕ್ಕೆ ಹೋಗುವ ದಾರಿಯಲ್ಲಿ ಪಾಲಿಕೆಯಿಂದ ನಿರ್ಮಿಸಲ್ಪಟ್ಟಿರುವ ಬೃಹತ್ ನೀರಿನ ಟಾಂಕಿಯಿಂದ ದಿನಕ್ಕೆ ಅಸಂಖ್ಯಾತ ಲೀಟರ್ ನೀರು ಪೋಲಾಗುತ್ತಿದ್ದು ಜಿಲ್ಲಾಡಳಿತ ಮತ್ತು ಪಾಲಿಕೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕಾದ ಅವಶ್ಯಕತೆ ಇದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಅವರು ನೀರು ಪೋಲಾಗಿ ಹೋಗುತ್ತಿರುವ ಬಗ್ಗೆ ಸ್ಥಳೀಯರಿಂದ ಮಾಹಿತಿ ಸಿಕ್ಕಿದಾಗ ತಕ್ಷಣ ಆ ಪ್ರದೇಶಗಳಿಗೆ ಭೇಟಿಯಾಗಿ ಈ ಬಗ್ಗೆ ಜಿಲ್ಲಾಡಳಿತ ಮತ್ತು ಪಾಲಿಕೆ ಅಧಿಕಾರಿಗಳಿಗೆ ಜಾಗೃತಿ ಮೂಡಿಸಿದ್ದಾರೆ. ಒಂದೂವರೆಯಿಂದ ಎರಡು ಮೀಟರ್ ನಷ್ಟು ನೀರು ನಿತ್ಯ ವೇಸ್ಟ್ ಆಗುತ್ತಿದ್ದು ಇದರಿಂದ ಕನಿಷ್ಟ ಐನೂರರಿಂದ ಒಂದು ಸಾವಿರ ಮನೆಗಳ ಅವಶ್ಯಕತೆಗೆ ನಿತ್ಯ ಈ ನೀರು ಸಾಕಾಗುತ್ತಿತ್ತು. ಮರೋಳಿ, ಶಕ್ತಿನಗರ ಬೋಂದೇಲ್, ಪಚ್ಚನಾಡಿ, ಕುಂಜತ್ತಬೈಲ್ ತನಕ ಈ ನೀರು ಪೂರೈಕೆಯಾಗುತ್ತದೆ. ಆದರೆ ಇಲ್ಲಿಯೇ ದೊಡ್ಡ ಪ್ರಮಾಣದಲ್ಲಿ ನೀರು ಪೋಲಾಗುತ್ತಿರುವುದು ಎರಡು ತಿಂಗಳ ಹಿಂದೆ ಅಧಿಕಾರಿಗಳ ಗಮನಕ್ಕೆ ತಂದರೂ ಏನೂ ಕ್ರಮ ಕೈಗೊಳ್ಳದಿರುವುದು ಸರಿಯಲ್ಲ ಎಂದು ಶಾಸಕ ಕಾಮತ್ ಅಭಿಪ್ರಾಯಪಟ್ಟಿದ್ದಾರೆ.

https://www.facebook.com/vedavyasbjp/videos/1319914824839395/

ಈ ಬಗ್ಗೆ ಮಾತನಾಡಿದ ಶಾಸಕ ಕಾಮತ್ ಕಳೆದ ಏಳೆಂಟು ದಿನಗಳಿಂದ ನೀರಿನ ಸಮಸ್ಯೆ ಇದೆ. ಈ ಬಾರಿ ನಿತ್ಯ ಜನರು ನೀರಿಗಾಗಿ ಪರದಾಡುತ್ತಿರುವ ಈ ಸಂದರ್ಭದಲ್ಲಿ ಅಧಿಕಾರಿಗಳ ಕರ್ತವ್ಯ ಮುಖ್ಯ. ಅವರು ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಕಾರಣ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ, ರೇಶನಿಂಗ್ ಮುಖಾಂತರ ಕುಡಿಯಲು ನೀರು ಕೊಡಲಾಗುವುದು ಎನ್ನುವ ಕಾರಣಕ್ಕೆ ನಾಲ್ಕು ದಿನಗಳಿಗೊಮ್ಮೆ ನೀರು ಬಿಡಲಾಗುತ್ತದೆ. ಇದರಿಂದ ಜನ ಒಂದು ಕೊಡಪಾನ ನೀರಿಗಾಗಿ ಬೇರೆ ಕಡೆ ಹೋಗುತ್ತಿದ್ದಾರೆ. ಆದರೆ ಇಲ್ಲಿ ಟಾಂಕಿ, ಗೇಟ್ ವಾಲ್ ಎಲ್ಲವೂ ಸೋರಿಕೆಯಾಗಿ ಲಕ್ಷಗಟ್ಟಲೆ ಲೀಟರ್ ನೀರು ಹರಿದು ಚರಂಡಿ ಸೇರುತ್ತಿದೆ ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search