• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನೀರು ಪೋಲಾಗುತ್ತಿರುವ ಶಕ್ತಿನಗರದ ಪ್ರದೇಶಕ್ಕೆ ಶಾಸಕ ಕಾಮತ್ ಧೀಡಿರ್ ಭೇಟಿ!

Tulunadu News Posted On April 24, 2019


  • Share On Facebook
  • Tweet It

ಮಂಗಳೂರಿನ ಶಕ್ತಿನಗರದ ನೀತಿನಗರದ ಮೂಲಕ ರಾಜೀವನಗರಕ್ಕೆ ಹೋಗುವ ದಾರಿಯಲ್ಲಿ ಪಾಲಿಕೆಯಿಂದ ನಿರ್ಮಿಸಲ್ಪಟ್ಟಿರುವ ಬೃಹತ್ ನೀರಿನ ಟಾಂಕಿಯಿಂದ ದಿನಕ್ಕೆ ಅಸಂಖ್ಯಾತ ಲೀಟರ್ ನೀರು ಪೋಲಾಗುತ್ತಿದ್ದು ಜಿಲ್ಲಾಡಳಿತ ಮತ್ತು ಪಾಲಿಕೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕಾದ ಅವಶ್ಯಕತೆ ಇದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಅವರು ನೀರು ಪೋಲಾಗಿ ಹೋಗುತ್ತಿರುವ ಬಗ್ಗೆ ಸ್ಥಳೀಯರಿಂದ ಮಾಹಿತಿ ಸಿಕ್ಕಿದಾಗ ತಕ್ಷಣ ಆ ಪ್ರದೇಶಗಳಿಗೆ ಭೇಟಿಯಾಗಿ ಈ ಬಗ್ಗೆ ಜಿಲ್ಲಾಡಳಿತ ಮತ್ತು ಪಾಲಿಕೆ ಅಧಿಕಾರಿಗಳಿಗೆ ಜಾಗೃತಿ ಮೂಡಿಸಿದ್ದಾರೆ. ಒಂದೂವರೆಯಿಂದ ಎರಡು ಮೀಟರ್ ನಷ್ಟು ನೀರು ನಿತ್ಯ ವೇಸ್ಟ್ ಆಗುತ್ತಿದ್ದು ಇದರಿಂದ ಕನಿಷ್ಟ ಐನೂರರಿಂದ ಒಂದು ಸಾವಿರ ಮನೆಗಳ ಅವಶ್ಯಕತೆಗೆ ನಿತ್ಯ ಈ ನೀರು ಸಾಕಾಗುತ್ತಿತ್ತು. ಮರೋಳಿ, ಶಕ್ತಿನಗರ ಬೋಂದೇಲ್, ಪಚ್ಚನಾಡಿ, ಕುಂಜತ್ತಬೈಲ್ ತನಕ ಈ ನೀರು ಪೂರೈಕೆಯಾಗುತ್ತದೆ. ಆದರೆ ಇಲ್ಲಿಯೇ ದೊಡ್ಡ ಪ್ರಮಾಣದಲ್ಲಿ ನೀರು ಪೋಲಾಗುತ್ತಿರುವುದು ಎರಡು ತಿಂಗಳ ಹಿಂದೆ ಅಧಿಕಾರಿಗಳ ಗಮನಕ್ಕೆ ತಂದರೂ ಏನೂ ಕ್ರಮ ಕೈಗೊಳ್ಳದಿರುವುದು ಸರಿಯಲ್ಲ ಎಂದು ಶಾಸಕ ಕಾಮತ್ ಅಭಿಪ್ರಾಯಪಟ್ಟಿದ್ದಾರೆ.

ಶಕ್ತಿನಗರದ ನೀತಿನಗರದ ಮೂಲಕ ರಾಜೀವನಗರಕ್ಕೆ ಹೋಗುವ ಹಾದಿಯಲ್ಲಿರುವ ಮನಪಾಲಿಕೆಗೆ ಸಂಬಂಧಪಟ್ಟ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಪೋಲಾಗುತ್ತಿರುವ ನೀರು‌‌..

Posted by Vedavyas Kamath on Wednesday, 24 April 2019

ಈ ಬಗ್ಗೆ ಮಾತನಾಡಿದ ಶಾಸಕ ಕಾಮತ್ ಕಳೆದ ಏಳೆಂಟು ದಿನಗಳಿಂದ ನೀರಿನ ಸಮಸ್ಯೆ ಇದೆ. ಈ ಬಾರಿ ನಿತ್ಯ ಜನರು ನೀರಿಗಾಗಿ ಪರದಾಡುತ್ತಿರುವ ಈ ಸಂದರ್ಭದಲ್ಲಿ ಅಧಿಕಾರಿಗಳ ಕರ್ತವ್ಯ ಮುಖ್ಯ. ಅವರು ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಕಾರಣ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ, ರೇಶನಿಂಗ್ ಮುಖಾಂತರ ಕುಡಿಯಲು ನೀರು ಕೊಡಲಾಗುವುದು ಎನ್ನುವ ಕಾರಣಕ್ಕೆ ನಾಲ್ಕು ದಿನಗಳಿಗೊಮ್ಮೆ ನೀರು ಬಿಡಲಾಗುತ್ತದೆ. ಇದರಿಂದ ಜನ ಒಂದು ಕೊಡಪಾನ ನೀರಿಗಾಗಿ ಬೇರೆ ಕಡೆ ಹೋಗುತ್ತಿದ್ದಾರೆ. ಆದರೆ ಇಲ್ಲಿ ಟಾಂಕಿ, ಗೇಟ್ ವಾಲ್ ಎಲ್ಲವೂ ಸೋರಿಕೆಯಾಗಿ ಲಕ್ಷಗಟ್ಟಲೆ ಲೀಟರ್ ನೀರು ಹರಿದು ಚರಂಡಿ ಸೇರುತ್ತಿದೆ ಎಂದು ಹೇಳಿದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search