• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೀರು ಪೋಲಾಗುತ್ತಿರುವ ಶಕ್ತಿನಗರದ ಪ್ರದೇಶಕ್ಕೆ ಶಾಸಕ ಕಾಮತ್ ಧೀಡಿರ್ ಭೇಟಿ!

Tulunadu News Posted On April 24, 2019
0


0
Shares
  • Share On Facebook
  • Tweet It

ಮಂಗಳೂರಿನ ಶಕ್ತಿನಗರದ ನೀತಿನಗರದ ಮೂಲಕ ರಾಜೀವನಗರಕ್ಕೆ ಹೋಗುವ ದಾರಿಯಲ್ಲಿ ಪಾಲಿಕೆಯಿಂದ ನಿರ್ಮಿಸಲ್ಪಟ್ಟಿರುವ ಬೃಹತ್ ನೀರಿನ ಟಾಂಕಿಯಿಂದ ದಿನಕ್ಕೆ ಅಸಂಖ್ಯಾತ ಲೀಟರ್ ನೀರು ಪೋಲಾಗುತ್ತಿದ್ದು ಜಿಲ್ಲಾಡಳಿತ ಮತ್ತು ಪಾಲಿಕೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕಾದ ಅವಶ್ಯಕತೆ ಇದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಅವರು ನೀರು ಪೋಲಾಗಿ ಹೋಗುತ್ತಿರುವ ಬಗ್ಗೆ ಸ್ಥಳೀಯರಿಂದ ಮಾಹಿತಿ ಸಿಕ್ಕಿದಾಗ ತಕ್ಷಣ ಆ ಪ್ರದೇಶಗಳಿಗೆ ಭೇಟಿಯಾಗಿ ಈ ಬಗ್ಗೆ ಜಿಲ್ಲಾಡಳಿತ ಮತ್ತು ಪಾಲಿಕೆ ಅಧಿಕಾರಿಗಳಿಗೆ ಜಾಗೃತಿ ಮೂಡಿಸಿದ್ದಾರೆ. ಒಂದೂವರೆಯಿಂದ ಎರಡು ಮೀಟರ್ ನಷ್ಟು ನೀರು ನಿತ್ಯ ವೇಸ್ಟ್ ಆಗುತ್ತಿದ್ದು ಇದರಿಂದ ಕನಿಷ್ಟ ಐನೂರರಿಂದ ಒಂದು ಸಾವಿರ ಮನೆಗಳ ಅವಶ್ಯಕತೆಗೆ ನಿತ್ಯ ಈ ನೀರು ಸಾಕಾಗುತ್ತಿತ್ತು. ಮರೋಳಿ, ಶಕ್ತಿನಗರ ಬೋಂದೇಲ್, ಪಚ್ಚನಾಡಿ, ಕುಂಜತ್ತಬೈಲ್ ತನಕ ಈ ನೀರು ಪೂರೈಕೆಯಾಗುತ್ತದೆ. ಆದರೆ ಇಲ್ಲಿಯೇ ದೊಡ್ಡ ಪ್ರಮಾಣದಲ್ಲಿ ನೀರು ಪೋಲಾಗುತ್ತಿರುವುದು ಎರಡು ತಿಂಗಳ ಹಿಂದೆ ಅಧಿಕಾರಿಗಳ ಗಮನಕ್ಕೆ ತಂದರೂ ಏನೂ ಕ್ರಮ ಕೈಗೊಳ್ಳದಿರುವುದು ಸರಿಯಲ್ಲ ಎಂದು ಶಾಸಕ ಕಾಮತ್ ಅಭಿಪ್ರಾಯಪಟ್ಟಿದ್ದಾರೆ.

https://www.facebook.com/vedavyasbjp/videos/1319914824839395/

ಈ ಬಗ್ಗೆ ಮಾತನಾಡಿದ ಶಾಸಕ ಕಾಮತ್ ಕಳೆದ ಏಳೆಂಟು ದಿನಗಳಿಂದ ನೀರಿನ ಸಮಸ್ಯೆ ಇದೆ. ಈ ಬಾರಿ ನಿತ್ಯ ಜನರು ನೀರಿಗಾಗಿ ಪರದಾಡುತ್ತಿರುವ ಈ ಸಂದರ್ಭದಲ್ಲಿ ಅಧಿಕಾರಿಗಳ ಕರ್ತವ್ಯ ಮುಖ್ಯ. ಅವರು ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಕಾರಣ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ, ರೇಶನಿಂಗ್ ಮುಖಾಂತರ ಕುಡಿಯಲು ನೀರು ಕೊಡಲಾಗುವುದು ಎನ್ನುವ ಕಾರಣಕ್ಕೆ ನಾಲ್ಕು ದಿನಗಳಿಗೊಮ್ಮೆ ನೀರು ಬಿಡಲಾಗುತ್ತದೆ. ಇದರಿಂದ ಜನ ಒಂದು ಕೊಡಪಾನ ನೀರಿಗಾಗಿ ಬೇರೆ ಕಡೆ ಹೋಗುತ್ತಿದ್ದಾರೆ. ಆದರೆ ಇಲ್ಲಿ ಟಾಂಕಿ, ಗೇಟ್ ವಾಲ್ ಎಲ್ಲವೂ ಸೋರಿಕೆಯಾಗಿ ಲಕ್ಷಗಟ್ಟಲೆ ಲೀಟರ್ ನೀರು ಹರಿದು ಚರಂಡಿ ಸೇರುತ್ತಿದೆ ಎಂದು ಹೇಳಿದರು.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search