• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶೇವ್ ಮಾಡಲು ಗಡ್ಡ ಬೆಳೆದಿರಬೇಕು, ನೀರು ಉಳಿಸಲು ತಲೆಯ ಒಳಗೆ ಮೆದುಳು ಬೆಳೆದಿರಬೇಕು!!!

Hanumantha Kamath Posted On April 25, 2019
0


0
Shares
  • Share On Facebook
  • Tweet It

ನೀರಿನ ಬೆಲೆ ನಮಗೆ ಗೊತ್ತಾಗುವುದು ಒಂದು ಲೀಟರ್ ಬಿಸ್ಲೆರಿ ಅಥವಾ ಅಂತಹುದೇ ಯಾವುದಾದರೂ ನೀರಿನ ಬಾಟಲಿ ಕೊಂಡು ಕೊಂಡಾಗ. ಆಗ ಮಾತ್ರ ನಾವು ಛೇ, ನೀರಿಗೆ ಎಷ್ಟು ಬೆಲೆಯಲ್ವಾ? ಎನ್ನುವ ಉದ್ಘಾರವನ್ನು ತೆಗೆಯುತ್ತೇವೆ. ಅದು ಬಿಟ್ಟು ಉಳಿದ ಎಲ್ಲಾ ಸಮಯದಲ್ಲಿ ನಮಗೆ ನೀರು ಒಂದು ಅಮೂಲ್ಯ ದ್ರವ ಪದಾರ್ಥ ಎನ್ನುವುದು ಗೊತ್ತೆ ಆಗುವುದಿಲ್ಲ. ಅದರಲ್ಲಿಯೂ ಕೆಲವು ವ್ಯಕ್ತಿಗಳು ತಲೆಯಲ್ಲಿ ದೊಡ್ಡ ದೊಡ್ಡ ಡಿಗ್ರಿಗಳನ್ನು ಹೊಂದಿರುತ್ತಾರೆ ಆದರೆ ನೀರಿನ ವಿಷಯ ಬಂದಾಗ ಪರಮ ಮೂರ್ಖರಂತೆ ವರ್ತಿಸುತ್ತಾರೆ. ಬೇಕಾದರೆ ನೀವೆ ನೋಡಿರಬಹುದು. ಶೇವಿಂಗ್ ಮಾಡಲು ವಾಶ್ ಬೇಸಿನ್ ಹತ್ತಿರ ನಿಂತಿರುತ್ತಾರೆ. ಕನ್ನಡಿ ನೋಡುತ್ತಾ ಶೇವ್ ಮಾಡುತ್ತಾ ಇರುತ್ತಾರೆ. ಆದರೆ ಕೆಳಗೆ ಪೈಪಿನಲ್ಲಿ ನೀರು ಹೋಗ್ತಾ ಇರುತ್ತದೆ. ಇವರು ಶೇವ್ ಮಾಡಿ ನಾಲ್ಕು ಸಲ ಮುಖವನ್ನು ಒರೆಕೋರೆ ನೋಡಿ ಕೊನೆಗೆ ಪೈಪ್ ಬಂದ್ ಮಾಡುವಾಗ ಇಪ್ಪತ್ತು ಲೀಟರ್ ನೀರು ವೇಸ್ಟ್ ಆಗಿರುತ್ತದೆ. ಅದರ ಬದಲು ಒಂದು ಮಗ್ ನಲ್ಲಿ ಅರ್ಧ ಲೀಟರ್ ನೀರಿನಲ್ಲಿ ಶೇವ್ ಮುಗಿಸಬಾರದಾ? ಗಡ್ಡ ಎಲ್ಲರಿಗೂ ಬೆಳೆಯುತ್ತದೆ. ಆದರೆ ಅದನ್ನು ತೆಗೆಯುವವರಿಗೆ ತಲೆಯ ಒಳಗೆ ಮೆದುಳು ಎಷ್ಟು ಬೆಳೆದಿದೆ ಎನ್ನುವುದು ಕೂಡ ಬಹಳ ಮುಖ್ಯ.
ಇನ್ನು ಕೆಲವರಿಗೆ ತಮಷ್ಟೇ ತಮ್ಮ ಕಾರು ಮುಖ್ಯ. ಅದು ಫಳಫಳ ಹೊಳೆದರೆ ಅವರಿಗೆ ಹೆಮ್ಮೆ. ಅದಕ್ಕಾಗಿ ಕಾರು ನಾಲ್ಕು ದಿನ ಓಡಾಡಿದರೆ ಕಾರುಗೆನೆ ಮುಜುಗರ ಆಗಬೇಕು. ಆ ರೀತಿಯಲ್ಲಿ ಸ್ನಾನ ಮಾಡಿಸುತ್ತಾರೆ. ಇವರು ಅರ್ಧ ಬಕೆಟ್ ನೀರು ತೆಗೆದುಕೊಂಡು ಕಾರು ತೊಳೆಯುವುದಾದರೆ ಯಾರ ಅಭ್ಯಂತರ ಇಲ್ಲ. ಆದರೆ ಮಹಾನುಭಾವರು ಕೈಯಲ್ಲಿ ನೀರಿನ ರಬ್ಬರ್ ಪೈಪ್ ಹಿಡಿದು ಕಾರಿನ ಮುಂದೆ ನಿಲ್ಲುತ್ತಾರೆ. ನೀರು ಆನ್ ಮಾಡುತ್ತಾರೆ. ಇವರು ಕಾರು ತೊಳೆದು ಮುಗಿಯುವಾಗ ಮುಗಿಯುವ ನೀರಿನ ಲೆಕ್ಕ ಇಲ್ಲ. ಅದೇ ವಿಧಾನವನ್ನು ಹಲವರು ಬೈಕ್, ಸ್ಕೂಟರ್ ತೊಳೆಯುವಾಗಲೂ ಮಾಡುತ್ತಾರೆ. ಕಾರು, ಬೈಕ್ ತೊಳೆಯಲು ಕಿಸೆಯಲ್ಲಿ ಹಣ ಇದ್ದರೆ ಸಾಕಾಗುವುದಿಲ್ಲ. ತಲೆಯಲ್ಲಿ ಮೆದುಳು ಈ ವಿಷಯದಲ್ಲಿಯೂ ಬೆಳೆದಿರಬೇಕು.

ಇನ್ನು ಕೆಲವರು ಇದ್ದಾರೆ. ಮನೆಯ ಅಂಗಳದಲ್ಲಿ ನಾಲ್ಕು ತೆಂಗಿನಮರ ಸಹಿತ ಒಂದಿಷ್ಟು ಹೂವಿನ ಗಿಡಗಳು ಇರುತ್ತವೆ. ನೀರಿನ ಪೈಪನ್ನು ತೆಂಗಿನಮರದ ಕೆಳಗೆ ಹೇಗೆ ಬಿಡುತ್ತಾರೆ ಎಂದರೆ ಮರಕ್ಕೆ ಶೀತ ಆಗಬೇಕು. ಅಷ್ಟರಮಟ್ಟಿಗೆ ನೀರು ಕುಡಿಸುತ್ತಾರೆ. ಅದರ ಬದಲು ನೀರು ಕಡಿಮೆ ಇರುವಾಗ ಲೆಕ್ಕದ ಎರಡು ಬಕೆಟ್ ಸುರಿದರೆ ಸಾಕಲ್ವ? ಇಂತಹ ಹಲವು ಸೂಕ್ಷ್ಮಗಳು ನೀರಿನ ವಿಷಯದಲ್ಲಿ ಇವೆ. ನೀವು ಕೂಡ ಇಂತಹ ಯಾವುದಾದರೂ ವಿಧಾನದ ಮೂಲಕ ನೀರು ಪೋಲು ಮಾಡುತ್ತಾ ಇದ್ದರೆ ದಯವಿಟ್ಟು ಅದನ್ನು ಕೈಬಿಡಿ. ಯಾರಾದರೂ ನಿಮ್ಮ ಆತ್ಮೀಯರು ಹೀಗೆ ನೀರು ಪೋಲು ಮಾಡುತ್ತಾ ಇದ್ದರೆ ಅವರಿಗೆ ಬುದ್ಧಿ ಹೇಳಿ. ಸುಧಾರಿಸುವುದಾದರೆ ಆಗಲಿ.

ಇನ್ನು ನೀರು ಉಳಿಯಬೇಕಾದರೆ ಅಂತರ್ಜಲ ಹೆಚ್ಚಾಗಬೇಕು. ಈಗಾಗಲೇ ಮಂಗಳೂರಿನ ಬಿಲ್ಡರ್ಸ್ ಸಿಕ್ಕಿದ ಕಡೆ ಬೋರ್ ವೆಲ್ ಕೊರೆದು ತಮ್ಮ ಕಟ್ಟಡಗಳ ಗೋಡೆಗಳ ಮೇಲೆ ಸುರಿದು ಗೋಡೆ ಕಟ್ಟಿ ಮಾಡಿಕೊಂಡಿದ್ದಾರೆ. ಆದರೆ ಒಳಗಿನಿಂದಲೇ ಭೂಮಿಯಲ್ಲಿ ಅಂತರ್ಜಲ ಕುಸಿತ ಕಾಣುತ್ತಾ ಇದೆ. ಇದು ಭವಿಷ್ಯಕ್ಕೆ ದೊಡ್ಡ ಎಚ್ಚರಿಕೆ ಘಂಟೆ. ಇನ್ನು ಎಲ್ಲಿಯಾದರೂ ಬೋರ್ ವೆಲ್ ಕೊರೆಯಲಾಗುತ್ತಿರುವ ದೃಶ್ಯ ನಿಮ್ಮ ಕಣ್ಣಿಗೆ ಬಿದ್ದರೆ ಆ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತನ್ನಿ. ಯಾಕೆಂದರೆ ಬೋರ್ ವೆಲ್ ಕೊರೆಯಬೇಕಾದರೆ ಕಡ್ಡಾಯವಾಗಿ ಜಿಲ್ಲಾಧಿಕಾರಿಗಳ ಅನುಮತಿ ಬೇಕು. ಅನುಮತಿ ತೆಗೆದುಕೊಳ್ಳದೆ ಯಾರಾದರೂ ಕೊರೆಯುತ್ತಿದ್ದರೆ ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ನಿಮ್ಮ ಜವಾಬ್ದಾರಿ ಸಾಕಷ್ಟಿದೆ. ಕೊನೆಯದಾಗಿ ಏನೆಂದರೆ ಎಲ್ಲಿಯಾದರೂ ನೀರು ಲಿಕೇಜ್ ಆಗಿ ಹೋಗುತ್ತಿದ್ದರೆ ನಾನು ಕೊಡುವ ಈ ಎರಡು ಸಂಖ್ಯೆಗಳಿಗೆ ಕರೆ ಮಾಡಲು ಮರೆಯಬೇಡಿ.
0824 2220306, 2220319. ಮಾಡುತ್ತಿರಲ್ಲ!!!

0
Shares
  • Share On Facebook
  • Tweet It




Trending Now
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Hanumantha Kamath January 3, 2026
ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
Hanumantha Kamath January 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
  • Popular Posts

    • 1
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 2
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 3
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search