• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮುಗ್ರೋಡಿಯಲ್ಲಿ ಜೀರ್ಣಾವಸ್ಥೆಯಲ್ಲಿರುವ ಮನೆ ವೀಕ್ಷಿಸಿದ ಶಾಸಕ ಕಾಮತ್

Tulunadu News Posted On May 18, 2019
0


0
Shares
  • Share On Facebook
  • Tweet It

ಮಂಗಳೂರು ಮಹಾನಗರ ಪಾಲಿಕೆಯ ಪದವು ಶಕ್ತಿನಗರ ವಾರ್ಡ್ ನಿವಾಸಿ ಶಾಂಭವಿಯವರ ಮನೆ ಜೀರ್ಣಾವಸ್ಥೆಯಲ್ಲಿ ಇದ್ದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಭೇಟಿ ನೀಡಿ ಪರಿಶೀಲಿಸಿದರು.

ಮುಗ್ರೋಡಿ ನಿವಾಸಿಯಾಗಿರುವ ಮದರ ಎಂಬುವವರ ಮಗಳು ಶಾಂಭವಿ ತಮ್ಮ ಸಹೋದರಿಯೊಂದಿಗೆ ವಾಸವಾಗಿರುವ ಮನೆ ಕುಸಿದು ಬೀಳುವ ಹಂತದಲ್ಲಿದ್ದು ಆ ಕುಟುಂಬ ಸಂಕಷ್ಟದಲ್ಲಿದೆ ಎಂದು ಇತ್ತೀಚೆಗೆ ಮಾಧ್ಯಮಗಳು ವರದಿ ಮಾಡಿದ್ದವು. ಅದು ಶಾಸಕರ ಗಮನಕ್ಕೆ ಬಂದ ಕೂಡಲೇ ಅಲ್ಲಿಗೆ ಭೇಟಿ ನೀಡಿದ ಶಾಸಕ ಕಾಮತ್ ಮನೆಯನ್ನು ವೀಕ್ಷಿಸಿದ್ದಾರೆ. ಆ ನಂತರ ಮಾತನಾಡಿದ ಶಾಸಕರು ಮನೆ ಸಂಪೂರ್ಣ ಕುಸಿಯುವ ಹಂತದಲ್ಲಿದ್ದು ಇಬ್ಬರು ಹೆಣ್ಣುಮಕ್ಕಳು ಸಂಕಷ್ಟದಲ್ಲಿ ದಿನದೂಡುತ್ತಿದ್ದಾರೆ.

ಈ ಮನೆಯನ್ನು ಸರಿ ಮಾಡಬೇಕಾದ ಅವಶ್ಯಕತೆ ಇದ್ದು ಮನೆಯಿರುವ ಜಾಗದ ದಾಖಲೆಗಳು ಸರಿಯಾದ ಕೂಡಲೇ ಇದೇ ಜಾಗದಲ್ಲಿ ಮನೆಯನ್ನು ನೂತನವಾಗಿ ನಿರ್ಮಿಸುವ ಪ್ರಯತ್ನ ಮಾಡಲಾಗುವುದು. ಅದಕ್ಕೆ ಕೇಂದ್ರ ಸರಕಾರದ ಅಟಲ್ ಆವಾಸ್ ಯೋಜನೆ ಅನುದಾನ ಮತ್ತು ರಾಜ್ಯ ಮತ್ತು ಪಾಲಿಕೆಯ ಸಹಕಾರದೊಂದಿಗೆ ಮತ್ತು ಸ್ಥಳೀಯ ಬಿಜೆಪಿ ಮುಖಂಡರ, ಕಾರ್ಯಕರ್ತರು ಕೂಡ ಕೈಜೋಡಿಸಲಿದ್ದಾರೆ ಎಂದು ತಿಳಿಸಿದರು. ಶಾಂಭವಿ ಕುಟುಂಬದ ಕಣ್ಣೀರನ್ನು ಒರೆಸುವ ಕೆಲಸವನ್ನು ಮಾಧ್ಯಮಗಳು ಮಾಡಿದ್ದು ಸಮಾಜಮುಖಿ ಚಿಂತನೆಗಳ ವರದಿಗಾರಿಕೆಯಿಂದ ಜನಪ್ರತಿನಿಧಿಗಳ ಕಣ್ಣು ತೆರೆಯುತ್ತದೆ. ನಾವು ಅಭಿವೃದ್ಧಿ ಕಾರ್ಯಗಳನ್ನು ಮಾಡುವಾಗ ಮಾಧ್ಯಮಗಳು ನಮಗೆ ದಾರಿದೀಪವಾಗುತ್ತದೆ ಎಂದು ತಿಳಿಸಿದರು. ಶಾಸಕರೊಂದಿಗೆ ಮಾಜಿ ಉಪಮೇಯರ್ ಶಕಿಲಾಕಾವ, ಬಿಜೆಪಿ ಮುಖಂಡರಾದ ಪ್ರಸಾದ್, ರವಿಚಂದ್ರ, ಅಶೋಕ್ ನಾಯಕ್, ಗೋಪಾಲ್, ಪದ್ಮನಾಭ ಮತ್ತಿತ್ತರರು ಉಪಸ್ಥಿತರಿದ್ದರು .

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search