• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮುಗ್ರೋಡಿಯಲ್ಲಿ ಜೀರ್ಣಾವಸ್ಥೆಯಲ್ಲಿರುವ ಮನೆ ವೀಕ್ಷಿಸಿದ ಶಾಸಕ ಕಾಮತ್

Tulunadu News Posted On May 18, 2019
0


0
Shares
  • Share On Facebook
  • Tweet It

ಮಂಗಳೂರು ಮಹಾನಗರ ಪಾಲಿಕೆಯ ಪದವು ಶಕ್ತಿನಗರ ವಾರ್ಡ್ ನಿವಾಸಿ ಶಾಂಭವಿಯವರ ಮನೆ ಜೀರ್ಣಾವಸ್ಥೆಯಲ್ಲಿ ಇದ್ದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಭೇಟಿ ನೀಡಿ ಪರಿಶೀಲಿಸಿದರು.

ಮುಗ್ರೋಡಿ ನಿವಾಸಿಯಾಗಿರುವ ಮದರ ಎಂಬುವವರ ಮಗಳು ಶಾಂಭವಿ ತಮ್ಮ ಸಹೋದರಿಯೊಂದಿಗೆ ವಾಸವಾಗಿರುವ ಮನೆ ಕುಸಿದು ಬೀಳುವ ಹಂತದಲ್ಲಿದ್ದು ಆ ಕುಟುಂಬ ಸಂಕಷ್ಟದಲ್ಲಿದೆ ಎಂದು ಇತ್ತೀಚೆಗೆ ಮಾಧ್ಯಮಗಳು ವರದಿ ಮಾಡಿದ್ದವು. ಅದು ಶಾಸಕರ ಗಮನಕ್ಕೆ ಬಂದ ಕೂಡಲೇ ಅಲ್ಲಿಗೆ ಭೇಟಿ ನೀಡಿದ ಶಾಸಕ ಕಾಮತ್ ಮನೆಯನ್ನು ವೀಕ್ಷಿಸಿದ್ದಾರೆ. ಆ ನಂತರ ಮಾತನಾಡಿದ ಶಾಸಕರು ಮನೆ ಸಂಪೂರ್ಣ ಕುಸಿಯುವ ಹಂತದಲ್ಲಿದ್ದು ಇಬ್ಬರು ಹೆಣ್ಣುಮಕ್ಕಳು ಸಂಕಷ್ಟದಲ್ಲಿ ದಿನದೂಡುತ್ತಿದ್ದಾರೆ.

ಈ ಮನೆಯನ್ನು ಸರಿ ಮಾಡಬೇಕಾದ ಅವಶ್ಯಕತೆ ಇದ್ದು ಮನೆಯಿರುವ ಜಾಗದ ದಾಖಲೆಗಳು ಸರಿಯಾದ ಕೂಡಲೇ ಇದೇ ಜಾಗದಲ್ಲಿ ಮನೆಯನ್ನು ನೂತನವಾಗಿ ನಿರ್ಮಿಸುವ ಪ್ರಯತ್ನ ಮಾಡಲಾಗುವುದು. ಅದಕ್ಕೆ ಕೇಂದ್ರ ಸರಕಾರದ ಅಟಲ್ ಆವಾಸ್ ಯೋಜನೆ ಅನುದಾನ ಮತ್ತು ರಾಜ್ಯ ಮತ್ತು ಪಾಲಿಕೆಯ ಸಹಕಾರದೊಂದಿಗೆ ಮತ್ತು ಸ್ಥಳೀಯ ಬಿಜೆಪಿ ಮುಖಂಡರ, ಕಾರ್ಯಕರ್ತರು ಕೂಡ ಕೈಜೋಡಿಸಲಿದ್ದಾರೆ ಎಂದು ತಿಳಿಸಿದರು. ಶಾಂಭವಿ ಕುಟುಂಬದ ಕಣ್ಣೀರನ್ನು ಒರೆಸುವ ಕೆಲಸವನ್ನು ಮಾಧ್ಯಮಗಳು ಮಾಡಿದ್ದು ಸಮಾಜಮುಖಿ ಚಿಂತನೆಗಳ ವರದಿಗಾರಿಕೆಯಿಂದ ಜನಪ್ರತಿನಿಧಿಗಳ ಕಣ್ಣು ತೆರೆಯುತ್ತದೆ. ನಾವು ಅಭಿವೃದ್ಧಿ ಕಾರ್ಯಗಳನ್ನು ಮಾಡುವಾಗ ಮಾಧ್ಯಮಗಳು ನಮಗೆ ದಾರಿದೀಪವಾಗುತ್ತದೆ ಎಂದು ತಿಳಿಸಿದರು. ಶಾಸಕರೊಂದಿಗೆ ಮಾಜಿ ಉಪಮೇಯರ್ ಶಕಿಲಾಕಾವ, ಬಿಜೆಪಿ ಮುಖಂಡರಾದ ಪ್ರಸಾದ್, ರವಿಚಂದ್ರ, ಅಶೋಕ್ ನಾಯಕ್, ಗೋಪಾಲ್, ಪದ್ಮನಾಭ ಮತ್ತಿತ್ತರರು ಉಪಸ್ಥಿತರಿದ್ದರು .

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search