• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮುಗ್ರೋಡಿಯಲ್ಲಿ ಜೀರ್ಣಾವಸ್ಥೆಯಲ್ಲಿರುವ ಮನೆ ವೀಕ್ಷಿಸಿದ ಶಾಸಕ ಕಾಮತ್

Tulunadu News Posted On May 18, 2019
0


0
Shares
  • Share On Facebook
  • Tweet It

ಮಂಗಳೂರು ಮಹಾನಗರ ಪಾಲಿಕೆಯ ಪದವು ಶಕ್ತಿನಗರ ವಾರ್ಡ್ ನಿವಾಸಿ ಶಾಂಭವಿಯವರ ಮನೆ ಜೀರ್ಣಾವಸ್ಥೆಯಲ್ಲಿ ಇದ್ದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಭೇಟಿ ನೀಡಿ ಪರಿಶೀಲಿಸಿದರು.

ಮುಗ್ರೋಡಿ ನಿವಾಸಿಯಾಗಿರುವ ಮದರ ಎಂಬುವವರ ಮಗಳು ಶಾಂಭವಿ ತಮ್ಮ ಸಹೋದರಿಯೊಂದಿಗೆ ವಾಸವಾಗಿರುವ ಮನೆ ಕುಸಿದು ಬೀಳುವ ಹಂತದಲ್ಲಿದ್ದು ಆ ಕುಟುಂಬ ಸಂಕಷ್ಟದಲ್ಲಿದೆ ಎಂದು ಇತ್ತೀಚೆಗೆ ಮಾಧ್ಯಮಗಳು ವರದಿ ಮಾಡಿದ್ದವು. ಅದು ಶಾಸಕರ ಗಮನಕ್ಕೆ ಬಂದ ಕೂಡಲೇ ಅಲ್ಲಿಗೆ ಭೇಟಿ ನೀಡಿದ ಶಾಸಕ ಕಾಮತ್ ಮನೆಯನ್ನು ವೀಕ್ಷಿಸಿದ್ದಾರೆ. ಆ ನಂತರ ಮಾತನಾಡಿದ ಶಾಸಕರು ಮನೆ ಸಂಪೂರ್ಣ ಕುಸಿಯುವ ಹಂತದಲ್ಲಿದ್ದು ಇಬ್ಬರು ಹೆಣ್ಣುಮಕ್ಕಳು ಸಂಕಷ್ಟದಲ್ಲಿ ದಿನದೂಡುತ್ತಿದ್ದಾರೆ.

ಈ ಮನೆಯನ್ನು ಸರಿ ಮಾಡಬೇಕಾದ ಅವಶ್ಯಕತೆ ಇದ್ದು ಮನೆಯಿರುವ ಜಾಗದ ದಾಖಲೆಗಳು ಸರಿಯಾದ ಕೂಡಲೇ ಇದೇ ಜಾಗದಲ್ಲಿ ಮನೆಯನ್ನು ನೂತನವಾಗಿ ನಿರ್ಮಿಸುವ ಪ್ರಯತ್ನ ಮಾಡಲಾಗುವುದು. ಅದಕ್ಕೆ ಕೇಂದ್ರ ಸರಕಾರದ ಅಟಲ್ ಆವಾಸ್ ಯೋಜನೆ ಅನುದಾನ ಮತ್ತು ರಾಜ್ಯ ಮತ್ತು ಪಾಲಿಕೆಯ ಸಹಕಾರದೊಂದಿಗೆ ಮತ್ತು ಸ್ಥಳೀಯ ಬಿಜೆಪಿ ಮುಖಂಡರ, ಕಾರ್ಯಕರ್ತರು ಕೂಡ ಕೈಜೋಡಿಸಲಿದ್ದಾರೆ ಎಂದು ತಿಳಿಸಿದರು. ಶಾಂಭವಿ ಕುಟುಂಬದ ಕಣ್ಣೀರನ್ನು ಒರೆಸುವ ಕೆಲಸವನ್ನು ಮಾಧ್ಯಮಗಳು ಮಾಡಿದ್ದು ಸಮಾಜಮುಖಿ ಚಿಂತನೆಗಳ ವರದಿಗಾರಿಕೆಯಿಂದ ಜನಪ್ರತಿನಿಧಿಗಳ ಕಣ್ಣು ತೆರೆಯುತ್ತದೆ. ನಾವು ಅಭಿವೃದ್ಧಿ ಕಾರ್ಯಗಳನ್ನು ಮಾಡುವಾಗ ಮಾಧ್ಯಮಗಳು ನಮಗೆ ದಾರಿದೀಪವಾಗುತ್ತದೆ ಎಂದು ತಿಳಿಸಿದರು. ಶಾಸಕರೊಂದಿಗೆ ಮಾಜಿ ಉಪಮೇಯರ್ ಶಕಿಲಾಕಾವ, ಬಿಜೆಪಿ ಮುಖಂಡರಾದ ಪ್ರಸಾದ್, ರವಿಚಂದ್ರ, ಅಶೋಕ್ ನಾಯಕ್, ಗೋಪಾಲ್, ಪದ್ಮನಾಭ ಮತ್ತಿತ್ತರರು ಉಪಸ್ಥಿತರಿದ್ದರು .

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search