• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮುಗ್ರೋಡಿಯಲ್ಲಿ ಜೀರ್ಣಾವಸ್ಥೆಯಲ್ಲಿರುವ ಮನೆ ವೀಕ್ಷಿಸಿದ ಶಾಸಕ ಕಾಮತ್

Tulunadu News Posted On May 18, 2019
0


0
Shares
  • Share On Facebook
  • Tweet It

ಮಂಗಳೂರು ಮಹಾನಗರ ಪಾಲಿಕೆಯ ಪದವು ಶಕ್ತಿನಗರ ವಾರ್ಡ್ ನಿವಾಸಿ ಶಾಂಭವಿಯವರ ಮನೆ ಜೀರ್ಣಾವಸ್ಥೆಯಲ್ಲಿ ಇದ್ದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಭೇಟಿ ನೀಡಿ ಪರಿಶೀಲಿಸಿದರು.

ಮುಗ್ರೋಡಿ ನಿವಾಸಿಯಾಗಿರುವ ಮದರ ಎಂಬುವವರ ಮಗಳು ಶಾಂಭವಿ ತಮ್ಮ ಸಹೋದರಿಯೊಂದಿಗೆ ವಾಸವಾಗಿರುವ ಮನೆ ಕುಸಿದು ಬೀಳುವ ಹಂತದಲ್ಲಿದ್ದು ಆ ಕುಟುಂಬ ಸಂಕಷ್ಟದಲ್ಲಿದೆ ಎಂದು ಇತ್ತೀಚೆಗೆ ಮಾಧ್ಯಮಗಳು ವರದಿ ಮಾಡಿದ್ದವು. ಅದು ಶಾಸಕರ ಗಮನಕ್ಕೆ ಬಂದ ಕೂಡಲೇ ಅಲ್ಲಿಗೆ ಭೇಟಿ ನೀಡಿದ ಶಾಸಕ ಕಾಮತ್ ಮನೆಯನ್ನು ವೀಕ್ಷಿಸಿದ್ದಾರೆ. ಆ ನಂತರ ಮಾತನಾಡಿದ ಶಾಸಕರು ಮನೆ ಸಂಪೂರ್ಣ ಕುಸಿಯುವ ಹಂತದಲ್ಲಿದ್ದು ಇಬ್ಬರು ಹೆಣ್ಣುಮಕ್ಕಳು ಸಂಕಷ್ಟದಲ್ಲಿ ದಿನದೂಡುತ್ತಿದ್ದಾರೆ.

ಈ ಮನೆಯನ್ನು ಸರಿ ಮಾಡಬೇಕಾದ ಅವಶ್ಯಕತೆ ಇದ್ದು ಮನೆಯಿರುವ ಜಾಗದ ದಾಖಲೆಗಳು ಸರಿಯಾದ ಕೂಡಲೇ ಇದೇ ಜಾಗದಲ್ಲಿ ಮನೆಯನ್ನು ನೂತನವಾಗಿ ನಿರ್ಮಿಸುವ ಪ್ರಯತ್ನ ಮಾಡಲಾಗುವುದು. ಅದಕ್ಕೆ ಕೇಂದ್ರ ಸರಕಾರದ ಅಟಲ್ ಆವಾಸ್ ಯೋಜನೆ ಅನುದಾನ ಮತ್ತು ರಾಜ್ಯ ಮತ್ತು ಪಾಲಿಕೆಯ ಸಹಕಾರದೊಂದಿಗೆ ಮತ್ತು ಸ್ಥಳೀಯ ಬಿಜೆಪಿ ಮುಖಂಡರ, ಕಾರ್ಯಕರ್ತರು ಕೂಡ ಕೈಜೋಡಿಸಲಿದ್ದಾರೆ ಎಂದು ತಿಳಿಸಿದರು. ಶಾಂಭವಿ ಕುಟುಂಬದ ಕಣ್ಣೀರನ್ನು ಒರೆಸುವ ಕೆಲಸವನ್ನು ಮಾಧ್ಯಮಗಳು ಮಾಡಿದ್ದು ಸಮಾಜಮುಖಿ ಚಿಂತನೆಗಳ ವರದಿಗಾರಿಕೆಯಿಂದ ಜನಪ್ರತಿನಿಧಿಗಳ ಕಣ್ಣು ತೆರೆಯುತ್ತದೆ. ನಾವು ಅಭಿವೃದ್ಧಿ ಕಾರ್ಯಗಳನ್ನು ಮಾಡುವಾಗ ಮಾಧ್ಯಮಗಳು ನಮಗೆ ದಾರಿದೀಪವಾಗುತ್ತದೆ ಎಂದು ತಿಳಿಸಿದರು. ಶಾಸಕರೊಂದಿಗೆ ಮಾಜಿ ಉಪಮೇಯರ್ ಶಕಿಲಾಕಾವ, ಬಿಜೆಪಿ ಮುಖಂಡರಾದ ಪ್ರಸಾದ್, ರವಿಚಂದ್ರ, ಅಶೋಕ್ ನಾಯಕ್, ಗೋಪಾಲ್, ಪದ್ಮನಾಭ ಮತ್ತಿತ್ತರರು ಉಪಸ್ಥಿತರಿದ್ದರು .

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search