• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಗ್ರೋಡಿಯಲ್ಲಿ ಜೀರ್ಣಾವಸ್ಥೆಯಲ್ಲಿರುವ ಮನೆ ವೀಕ್ಷಿಸಿದ ಶಾಸಕ ಕಾಮತ್

Tulunadu News Posted On May 18, 2019


  • Share On Facebook
  • Tweet It

ಮಂಗಳೂರು ಮಹಾನಗರ ಪಾಲಿಕೆಯ ಪದವು ಶಕ್ತಿನಗರ ವಾರ್ಡ್ ನಿವಾಸಿ ಶಾಂಭವಿಯವರ ಮನೆ ಜೀರ್ಣಾವಸ್ಥೆಯಲ್ಲಿ ಇದ್ದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಭೇಟಿ ನೀಡಿ ಪರಿಶೀಲಿಸಿದರು.

ಮುಗ್ರೋಡಿ ನಿವಾಸಿಯಾಗಿರುವ ಮದರ ಎಂಬುವವರ ಮಗಳು ಶಾಂಭವಿ ತಮ್ಮ ಸಹೋದರಿಯೊಂದಿಗೆ ವಾಸವಾಗಿರುವ ಮನೆ ಕುಸಿದು ಬೀಳುವ ಹಂತದಲ್ಲಿದ್ದು ಆ ಕುಟುಂಬ ಸಂಕಷ್ಟದಲ್ಲಿದೆ ಎಂದು ಇತ್ತೀಚೆಗೆ ಮಾಧ್ಯಮಗಳು ವರದಿ ಮಾಡಿದ್ದವು. ಅದು ಶಾಸಕರ ಗಮನಕ್ಕೆ ಬಂದ ಕೂಡಲೇ ಅಲ್ಲಿಗೆ ಭೇಟಿ ನೀಡಿದ ಶಾಸಕ ಕಾಮತ್ ಮನೆಯನ್ನು ವೀಕ್ಷಿಸಿದ್ದಾರೆ. ಆ ನಂತರ ಮಾತನಾಡಿದ ಶಾಸಕರು ಮನೆ ಸಂಪೂರ್ಣ ಕುಸಿಯುವ ಹಂತದಲ್ಲಿದ್ದು ಇಬ್ಬರು ಹೆಣ್ಣುಮಕ್ಕಳು ಸಂಕಷ್ಟದಲ್ಲಿ ದಿನದೂಡುತ್ತಿದ್ದಾರೆ.

ಈ ಮನೆಯನ್ನು ಸರಿ ಮಾಡಬೇಕಾದ ಅವಶ್ಯಕತೆ ಇದ್ದು ಮನೆಯಿರುವ ಜಾಗದ ದಾಖಲೆಗಳು ಸರಿಯಾದ ಕೂಡಲೇ ಇದೇ ಜಾಗದಲ್ಲಿ ಮನೆಯನ್ನು ನೂತನವಾಗಿ ನಿರ್ಮಿಸುವ ಪ್ರಯತ್ನ ಮಾಡಲಾಗುವುದು. ಅದಕ್ಕೆ ಕೇಂದ್ರ ಸರಕಾರದ ಅಟಲ್ ಆವಾಸ್ ಯೋಜನೆ ಅನುದಾನ ಮತ್ತು ರಾಜ್ಯ ಮತ್ತು ಪಾಲಿಕೆಯ ಸಹಕಾರದೊಂದಿಗೆ ಮತ್ತು ಸ್ಥಳೀಯ ಬಿಜೆಪಿ ಮುಖಂಡರ, ಕಾರ್ಯಕರ್ತರು ಕೂಡ ಕೈಜೋಡಿಸಲಿದ್ದಾರೆ ಎಂದು ತಿಳಿಸಿದರು. ಶಾಂಭವಿ ಕುಟುಂಬದ ಕಣ್ಣೀರನ್ನು ಒರೆಸುವ ಕೆಲಸವನ್ನು ಮಾಧ್ಯಮಗಳು ಮಾಡಿದ್ದು ಸಮಾಜಮುಖಿ ಚಿಂತನೆಗಳ ವರದಿಗಾರಿಕೆಯಿಂದ ಜನಪ್ರತಿನಿಧಿಗಳ ಕಣ್ಣು ತೆರೆಯುತ್ತದೆ. ನಾವು ಅಭಿವೃದ್ಧಿ ಕಾರ್ಯಗಳನ್ನು ಮಾಡುವಾಗ ಮಾಧ್ಯಮಗಳು ನಮಗೆ ದಾರಿದೀಪವಾಗುತ್ತದೆ ಎಂದು ತಿಳಿಸಿದರು. ಶಾಸಕರೊಂದಿಗೆ ಮಾಜಿ ಉಪಮೇಯರ್ ಶಕಿಲಾಕಾವ, ಬಿಜೆಪಿ ಮುಖಂಡರಾದ ಪ್ರಸಾದ್, ರವಿಚಂದ್ರ, ಅಶೋಕ್ ನಾಯಕ್, ಗೋಪಾಲ್, ಪದ್ಮನಾಭ ಮತ್ತಿತ್ತರರು ಉಪಸ್ಥಿತರಿದ್ದರು .

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search