• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಮುಗ್ರೋಡಿಯಲ್ಲಿ ಜೀರ್ಣಾವಸ್ಥೆಯಲ್ಲಿರುವ ಮನೆ ವೀಕ್ಷಿಸಿದ ಶಾಸಕ ಕಾಮತ್

Tulunadu News Posted On May 18, 2019
0


0
Shares
  • Share On Facebook
  • Tweet It

ಮಂಗಳೂರು ಮಹಾನಗರ ಪಾಲಿಕೆಯ ಪದವು ಶಕ್ತಿನಗರ ವಾರ್ಡ್ ನಿವಾಸಿ ಶಾಂಭವಿಯವರ ಮನೆ ಜೀರ್ಣಾವಸ್ಥೆಯಲ್ಲಿ ಇದ್ದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಭೇಟಿ ನೀಡಿ ಪರಿಶೀಲಿಸಿದರು.

ಮುಗ್ರೋಡಿ ನಿವಾಸಿಯಾಗಿರುವ ಮದರ ಎಂಬುವವರ ಮಗಳು ಶಾಂಭವಿ ತಮ್ಮ ಸಹೋದರಿಯೊಂದಿಗೆ ವಾಸವಾಗಿರುವ ಮನೆ ಕುಸಿದು ಬೀಳುವ ಹಂತದಲ್ಲಿದ್ದು ಆ ಕುಟುಂಬ ಸಂಕಷ್ಟದಲ್ಲಿದೆ ಎಂದು ಇತ್ತೀಚೆಗೆ ಮಾಧ್ಯಮಗಳು ವರದಿ ಮಾಡಿದ್ದವು. ಅದು ಶಾಸಕರ ಗಮನಕ್ಕೆ ಬಂದ ಕೂಡಲೇ ಅಲ್ಲಿಗೆ ಭೇಟಿ ನೀಡಿದ ಶಾಸಕ ಕಾಮತ್ ಮನೆಯನ್ನು ವೀಕ್ಷಿಸಿದ್ದಾರೆ. ಆ ನಂತರ ಮಾತನಾಡಿದ ಶಾಸಕರು ಮನೆ ಸಂಪೂರ್ಣ ಕುಸಿಯುವ ಹಂತದಲ್ಲಿದ್ದು ಇಬ್ಬರು ಹೆಣ್ಣುಮಕ್ಕಳು ಸಂಕಷ್ಟದಲ್ಲಿ ದಿನದೂಡುತ್ತಿದ್ದಾರೆ.

ಈ ಮನೆಯನ್ನು ಸರಿ ಮಾಡಬೇಕಾದ ಅವಶ್ಯಕತೆ ಇದ್ದು ಮನೆಯಿರುವ ಜಾಗದ ದಾಖಲೆಗಳು ಸರಿಯಾದ ಕೂಡಲೇ ಇದೇ ಜಾಗದಲ್ಲಿ ಮನೆಯನ್ನು ನೂತನವಾಗಿ ನಿರ್ಮಿಸುವ ಪ್ರಯತ್ನ ಮಾಡಲಾಗುವುದು. ಅದಕ್ಕೆ ಕೇಂದ್ರ ಸರಕಾರದ ಅಟಲ್ ಆವಾಸ್ ಯೋಜನೆ ಅನುದಾನ ಮತ್ತು ರಾಜ್ಯ ಮತ್ತು ಪಾಲಿಕೆಯ ಸಹಕಾರದೊಂದಿಗೆ ಮತ್ತು ಸ್ಥಳೀಯ ಬಿಜೆಪಿ ಮುಖಂಡರ, ಕಾರ್ಯಕರ್ತರು ಕೂಡ ಕೈಜೋಡಿಸಲಿದ್ದಾರೆ ಎಂದು ತಿಳಿಸಿದರು. ಶಾಂಭವಿ ಕುಟುಂಬದ ಕಣ್ಣೀರನ್ನು ಒರೆಸುವ ಕೆಲಸವನ್ನು ಮಾಧ್ಯಮಗಳು ಮಾಡಿದ್ದು ಸಮಾಜಮುಖಿ ಚಿಂತನೆಗಳ ವರದಿಗಾರಿಕೆಯಿಂದ ಜನಪ್ರತಿನಿಧಿಗಳ ಕಣ್ಣು ತೆರೆಯುತ್ತದೆ. ನಾವು ಅಭಿವೃದ್ಧಿ ಕಾರ್ಯಗಳನ್ನು ಮಾಡುವಾಗ ಮಾಧ್ಯಮಗಳು ನಮಗೆ ದಾರಿದೀಪವಾಗುತ್ತದೆ ಎಂದು ತಿಳಿಸಿದರು. ಶಾಸಕರೊಂದಿಗೆ ಮಾಜಿ ಉಪಮೇಯರ್ ಶಕಿಲಾಕಾವ, ಬಿಜೆಪಿ ಮುಖಂಡರಾದ ಪ್ರಸಾದ್, ರವಿಚಂದ್ರ, ಅಶೋಕ್ ನಾಯಕ್, ಗೋಪಾಲ್, ಪದ್ಮನಾಭ ಮತ್ತಿತ್ತರರು ಉಪಸ್ಥಿತರಿದ್ದರು .

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search