• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಪ್ರಾಪರ್ಟಿ ಕಾರ್ಡ್ ಸಮಸ್ಯೆ ಬಗೆಹರಿಬೇಕಾ? ಈ ಸೂತ್ರ ಅನುಸರಿಸಿ!!

Hanumantha Kamath Posted On June 14, 2019
0


0
Shares
  • Share On Facebook
  • Tweet It

ಪ್ರಾಪರ್ಟಿ ಕಾರ್ಡ್ ಅವ್ಯವಸ್ಥೆ ಎಷ್ಟರಮಟ್ಟಿಗೆ ಇದೆ ಎನ್ನುವುದು ಎಲ್ಲರಿಗೂ ಗೊತ್ತೆ ಇದೆ. ಅದನ್ನು ಸರಿಪಡಿಸಬೇಕು ಎಂದು ಎಲ್ಲರೂ ಹೇಳುತ್ತಾರೆ ವಿನ: ಏನು ಮಾಡಿದರೆ ಸರಿ ಮಾಡಬಹುದು ಎನ್ನುವುದನ್ನು ಯಾರೂ ಹೇಳುವುದಿಲ್ಲ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹಾಗೂ ಅಧಿಕಾರಿಗಳು ಇಚ್ಚಾಶಕ್ತಿ ತೋರಿಸಿದರೆ ಇದೊಂದು ಬೆಟ್ಟದಂತಹ ಸಮಸ್ಯೆ ಎಂದು ಏನು ಅನಿಸುತ್ತಿದೆ ಅದನ್ನು ಮಂಜಿನಂತೆ ಕರಗಿಸಬಹುದು. ಅದು ಹೇಗೆನ್ನುವುದನ್ನು ನಾನು ಈಗ ವಿವರಿಸುತ್ತೇನೆ.

ಮೊದಲನೇಯದಾಗಿ ಯಾವ ವರ್ಷದ ಅರ್ಜಿಗಳು ಬಂದಿವೆ ಎನ್ನುವುದನ್ನು ಮೊದಲು ಹೊರಗೆ ತೆಗೆದು ಅದನ್ನು ವರ್ಷಗಳ ಆಧಾರದಲ್ಲಿ ವರ್ಗಿಕರಿಸಬೇಕು. ಉದಾಹರಣೆಗೆ ಒಬ್ಬ ವ್ಯಕ್ತಿ 2012 ರಲ್ಲಿ ಅರ್ಜಿ ಕೊಟ್ಟರೆ ಅವರದ್ದು ಮೊದಲು ಮಾಡಿ ಕೊಡಬೇಕು. ಹಾಗೆ 2012, 2013, 2014 ರಿಂದ ಇಲ್ಲಿಯ ತನಕ ಯಾವ ವರ್ಷ ಎಷ್ಟು ಜನ ಅರ್ಜಿ ಹಾಕಿದ್ದಾರೆ ಎನ್ನುವುದನ್ನು ನೋಡಿ ಅದನ್ನು ವಿಂಗಡಿಸಬೇಕು. ನಂತರ ಅರ್ಜಿಗಳು ಬಂದ ವರ್ಷದ ಸಿನಿಯಾರಿಟಿ ಪ್ರಕಾರ ಅರ್ಜಿದಾರರಿಗೆ ಮೇಸೆಜ್ ಕಳುಹಿಸಬೇಕು. ಆ ಮೇಸೆಜ್ ನಲ್ಲಿ ಸರ್ವೆಯರ್ ಗಳು ಯಾವ ದಿನಾಂಕದಂದು, ಎಷ್ಟು ಹೊತ್ತಿಗೆ ನಕ್ಷೆ ತಯಾರಿಸಲು ಅರ್ಜಿದಾರರಿದ್ದಲ್ಲಿಗೆ ಬರುತ್ತಾರೆ ಎನ್ನುವುದನ್ನು ನಮೂದಿಸಬೇಕು. ಈ ಮೂಲಕ ಮೊದಲ ಹಂತ ಪೂರ್ಣಗೊಂಡಂತೆ ಆಗುತ್ತದೆ. ಇನ್ನು ಅರ್ಜಿದಾರರು ಪ್ರಾಪರ್ಟಿ ಕಾರ್ಡ್ ಮಾಡಿಸುವಾಗ ಯಾವ ದಾಖಲೆಗಳನ್ನು ಸಲ್ಲಿಸಬೇಕು ಎನ್ನುವುದನ್ನು ಅದೇ ಮೇಸೆಜ್ ನಲ್ಲಿ ಹೇಳಬೇಕು. ಉದಾಹರಣೆಗೆ ಸೇಲ್ ಡೀಡ್, ಸ್ಕೆಚ್, ಖಾತಾ ತಂದುಕೊಡಲು ಬಾಕಿ ಇದ್ದರೆ ಅದನ್ನು ಮೇಸೆಜ್ ಮಾಡಿ ಅರ್ಜಿದಾರರಿಗೆ ತಿಳಿಸಿಬಿಡಬೇಕು. ಒಂದೇ ಮೇಸೆಜ್ ನಲ್ಲಿ ಲಿಖಿತವಾಗಿ ಪೂರ್ಣ ಮಾಹಿತಿ ಕೊಟ್ಟಾಗ ಅರ್ಜಿದಾರರು ಆಗಾಗ ಕಚೇರಿಗೆ ಬಂದು ಅಲೆದಾಡುವುದು ತಪ್ಪುತ್ತದೆ. ಇನ್ನು ಸರ್ವೆಯರ್ ಸ್ಕೆಚ್ ರೆಡಿ ಮಾಡಿ ಕಚೇರಿಗೆ ತಂದು ಕೊಟ್ಟ ನಂತರ ಇಂತಿಂತಹ ದಿನ ಇಂತಿಂತಿಹ ಘಂಟೆಗೆ ಇಂತಹ ಟೇಬಲ್ ಗೆ ಬಂದು ನಿಮ್ಮ ಡ್ರಾಫ್ಟ್ ಸರಿ ಇದೆಯಾ ಪರಿಶೀಲಿಸಿ ಎಂದು ಮತ್ತೊಂದು ಮೇಸೆಜ್ ಕಳುಹಿಸಬೇಕು. ಹಾಗೆ ಅರ್ಜಿದಾರರು ತಮಗೆ ಹೇಳಿದ ದಿನಾಂಕ, ಹೇಳಿದ ಸಮಯ, ಹೇಳಿದ ಟೇಬಲಿಗೆ ಹೋಗಿ ಡ್ರಾಫ್ಟ್ ಪರಿಶೀಲಿಸಬೇಕು. ಅದರಲ್ಲಿ ಏನಾದರೂ ತಪ್ಪಿದ್ದರೆ ಅದನ್ನು ಲಿಖಿತ ಮನವಿ ಕೂಡ ಕೊಡಬೇಕು. ನಂತರ ಅದು ಕರೆಕ್ಷನ್ ಆದ ನಂತರ ಇನ್ನೊಂದು ಮೇಸೆಜ್ ಹಾಕಿ ಬರುವಾಗ ಅರ್ಜಿದಾರರು ಆಧಾರ್ ಕಾರ್ಡ್ ಮತ್ತು ಎಷ್ಟು ಹಣ ಕಟ್ಟಬೇಕು ಎನ್ನುವುದನ್ನು ಕೂಡ ನಮೂದಿಸಿ ಫೋಟೋ ತೆಗೆಯಲು ಬರಬೇಕಾದ ದಿನಾಂಕ, ಸಮಯ ಬರೆದು ಕಳುಹಿಸಿದರೆ ಅರ್ಜಿದಾರರು ಅದನ್ನು ಅನುಸರಿಸುತ್ತಾರೆ.

ಈಗ ಹಾಗೇ ಆಗುತ್ತಿಲ್ಲ. ಅಲ್ಲಿ ಬಂದ ಮೇಲೆ ಆಧಾರ್ ಕಾರ್ಡ್ ತನ್ನಿ, ಮೂಲಪ್ರತಿ ತನ್ನಿ, ಹಣ ಇಷ್ಟು ಕಟ್ಟಲು ಇದೆ. ಪಾವತಿಸಿ ಹೀಗೆ ಹೇಳಲಾಗುತ್ತಿದೆ. ಇದು ಮತ್ತೊಂದು ಗೊಂದಲಕ್ಕೆ ಕಾರಣವಾಗುತ್ತಿದೆ. ಅದು ಬಿಟ್ಟು ನಾನು ಹೇಳಿದ ಮೂರ್ನಾಕು ಹಂತಗಳನ್ನು ಚಾಚುತಪ್ಪದೆ ಅನುಸರಿಸಿದರೆ ಸಮಸ್ಯೆ ಉದ್ಭವವಾಗುವುದಿಲ್ಲ. ಆಗ ಎಲ್ಲವೂ ಸರಿಯಾಗುತ್ತದೆ. ಈಗ ಏನು ಆಗುತ್ತಿದೆ ಎಂದರೆ 2012 ರಲ್ಲಿ ಅರ್ಜಿ ಕೊಟ್ಟವರು ಅಲ್ಲೇ ಬಾಕಿ ಆಗಿದ್ದಾರೆ. ಸರ್ವೆಯರ್ ಗಳು ತಮ್ಮ ಜೇಬು ತುಂಬಿಸುವ ಬಿಲ್ಡರ್ ಗಳನ್ನು ಹುಡುಕಿಕೊಂಡು ಹೋಗುತ್ತಿದ್ದಾರೆ. ಆದ್ದರಿಂದ ಕೇವಲ 30% ದಷ್ಟು ಮಾತ್ರ ಪ್ರಾಪರ್ಟಿ ಕಾರ್ಡ್ ಆಗಿದೆ. ಉಳಿದವರು ಸರ್ವೆಯರ್ ಗಳಿಗೆ ಕಾಯುತ್ತಾ ಇದ್ದಾರೆ!

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Hanumantha Kamath June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Hanumantha Kamath June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search