ಫಾರಂ ಮಾಲ್ ನಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣದ ಆರೋಪಿಗಳ ಬಂಧನ!
Posted On September 25, 2019

ಮಂಗಳೂರು ನಗರದ ಫಾರಂ ಮಾಲ್ ನಲ್ಲಿ ಇಂದು ಸಂಜೆ (ಸೆ 25) ನಡೆದ ಮುಸ್ಲಿಂ ಯುವಕರ ಗುಂಪೊಂದು ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಡಾ. ಹರ್ಷ ತಿಳಿಸಿದ್ದಾರೆ.
ಆರೋಪಿಗಳಾದ ಅಬ್ದುಲ್ ರಹೀಂ, ಸಫ್ವಾನ್ ಹಾಗೂ ಮತ್ತೋರ್ವ ಬಾಲಾಪರಾಧಿಯನ್ನು ಬಂಧಿಸಲಾಗಿದೆ.
ಮಂಗಳೂರಿನ ಫಾರಂ ಮಾಲ್ ನಲ್ಲಿ ಯುವತಿಯೋರ್ವಳನ್ನು ಚುಡಾಯಿಸುತ್ತಿದ್ದ ಗುಂಪನ್ನು ತಡೆದು ಪ್ರಶ್ನಿಸಿದ ಬಂಟ್ವಾಳದ ಮಂಜುನಾಥ್ ಮೇಲೆ ಹಲ್ಲೆ ಮಾಡಿದ್ದಾರೆ. ಇದಲ್ಲದೆ ಹಲ್ಲೆ ಸಂದರ್ಭ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಕೆಟ್ಟ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿದ್ದು. ಕಾನೂನು ಸುವ್ಯವಸ್ತೆಗೆ ದಕ್ಕೆ ತಂದು ಕೋಮುಸೌಹಾರ್ದತೆ ಹಾಳುಗೆಡವಲು ಯತ್ನಿಸುತ್ತಿರುವ ಯುವಕರನ್ನ ಬಂಧಿಸುವಲ್ಲಿ ಮಂಗಳೂರು ಪೋಲಿಸರು ಸಫಲರಾಗಿದ್ದರೆ.
- Advertisement -
Trending Now
ಕಾಶಿಯಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರಿಂದ ಗಂಗಾಸ್ನಾನ
March 15, 2025
ಮಲ್ಟಿಪ್ಲೆಕ್ಸ್ ಟಿಕೆಟ್ ದರ ಗರಿಷ್ಟ 200 ರೂಗೆ ಫಿಕ್ಸ್ ಯಾವಾಗ?
March 14, 2025
Leave A Reply