• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಊಟಕ್ಕಿಲ್ಲದ ಉಪ್ಪಿನಕಾಯಿಯಾದ ಪ್ರಾಪರ್ಟಿ ಕಾರ್ಡ್ ಕಡ್ಡಾಯ ಇಲ್ಲ ಎನ್ನುವ ಆದೇಶ!!

Hanumantha Kamath Posted On October 16, 2019
0


0
Shares
  • Share On Facebook
  • Tweet It

ಮಂಗಳೂರಿನಲ್ಲಿ ಆಸ್ತಿ ನೊಂದಾವಣಿಗೆ ಸದ್ಯಕ್ಕೆ ಪ್ರಾಪರ್ಟಿ ಕಾರ್ಡ್ ಕಡ್ಡಾಯ ಇಲ್ಲ ಎಂದು ರಾಜ್ಯ ಸರಕಾರ ಘೋಷಣೆ ಮಾಡಿರುವುದು ನಿಮಗೆ ಗೊತ್ತಿರಬಹುದು. ಮಂಗಳೂರು ನಗರ ದಕ್ಷಿಣ ಮತ್ತು ಉತ್ತರ ಶಾಸಕರ ಪ್ರಯತ್ನದಿಂದ ಜನರಿಗೆ ಬಹುಕಾಲದಿಂದ ತಲೆನೋವಾದ ಪ್ರಾಪರ್ಟಿ ಕಾರ್ಡ್ ಆಸ್ತಿ ನೊಂದಾವಣೆಯ ಸಮಯ ಮುಂದಿನ ಆದೇಶದ ತನಕ ಕಡ್ಡಾಯ ಇಲ್ಲ ಎಂದು ಪ್ರಚಾರವಾಗಿತ್ತು. ಓಕೆ, ಪರವಾಗಿಲ್ಲ, ಶಾಸಕರುಗಳು ಅವರ ಕೆಲಸ ಮಾಡಿರಬಹುದು. ಆದರೆ ಅದು ಊಟಕ್ಕಿಲ್ಲದ ಉಪ್ಪಿನಕಾಯಿ ಆಗಿರುವುದು ಮಾತ್ರ ಸತ್ಯ. ಅದು ಹೇಗೆ ಎನ್ನುವುದನ್ನು ಇವತ್ತು ವಿವರಿಸುತ್ತೇನೆ.

ಈಗ ಪ್ರಾಪರ್ಟಿ ಕಾರ್ಡ್ ಸದ್ಯ ಅಗತ್ಯ ಇಲ್ಲ ಎಂದು ಹೇಳುತ್ತಿರುವುದು ಆಸ್ತಿ ನೊಂದಾವಣೆಯ ಸಮಯದಲ್ಲಿ ಮಾತ್ರ.  ಆದರೆ ಭೂಪರಿವರ್ತನೆ ಮಾಡಲು ಮತ್ತು ಸಿಂಗಲ್ ಸೈಟ್ ಮಾಡಿಸಲು ಪ್ರಾಪರ್ಟಿ ಕಾರ್ಡ್ ಬೇಕೆ ಬೇಕು. ಅದನ್ನು ಸರಕಾರ ಕ್ಯಾನ್ಸಲ್ ಮಾಡಿಲ್ಲ. ಉದಾಹರಣೆಗೆ ನಿಮ್ಮ ಬಳಿ ಕೃಷಿ ಭೂಮಿ ಇದೆ ಎಂದು ಇಟ್ಟುಕೊಳ್ಳೋಣ. ನೀವು ಅದನ್ನು ಮಾರುವ ಸಂದರ್ಭದಲ್ಲಿ ಅತ್ಯವಶ್ಯಕವಾಗಿ ಭೂಪರಿವರ್ತನೆ ಮಾಡಲೇಬೇಕು. ಇಲ್ಲದೇ ಹೋದರೆ ಕೃಷಿ ಭೂಮಿಯನ್ನು ಭೂಪರಿವರ್ತನೆ ಮಾಡದೇ ಮಾರಬೇಕಾದರೆ ಅದನ್ನು ಖರೀದಿಸುವವರು ಕೂಡ ಕೃಷಿಕರೇ ಆಗಿರಬೇಕು. ಆದರೆ ಮಂಗಳೂರಿನಲ್ಲಿ ಹೆಚ್ಚಾಗಿ ಇರುವುದು ಕೃಷಿ ಭೂಮಿ ಮತ್ತು ಅದನ್ನು ಖರೀದಿಸುವವರು ಒಂದೋ ಮನೆ ಕಟ್ಟಲು ಅಥವಾ ವಾಣಿಜ್ಯ ಉದ್ದೇಶಕ್ಕೆ ಖರೀದಿಸುತ್ತಾರೆ. ಆಗ ಭೂಪರಿವರ್ತನೆ ಮಾಡುವಾಗ ಪ್ರಾಪರ್ಟಿ ಕಾರ್ಡ್ ಬೇಕಾಗುತ್ತದೆ. ಅದಕ್ಕೆ ವಿನಾಯಿತಿ ಸಿಕ್ಕಿಲ್ಲ. ಇನ್ನು ಅದರ ಮುಂದಿನ ಹೆಜ್ಜೆ ಸಿಂಗಲ್ ಸೈಟ್ ಮಾಡುವುದು. ಭೂಪರಿವರ್ತನೆ ತಾಲೂಕು ಕಚೇರಿಯಲ್ಲಿ ಮಾಡಬಹುದಾಗಿದ್ದರೆ ಸಿಂಗಲ್ ಸೈಟ್ ಮಾಡುವುದು ಮೂಡಾದಲ್ಲಿ. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನೀವು ಸಿಂಗಲ್ ಸೈಟ್ ಮಾಡಿಸುವಾಗ ಅಲ್ಲಿ ಪ್ರಾಪರ್ಟಿ ಕಾರ್ಡ್ ಬೇಕಾಗುತ್ತದೆ. ಕೊನೆಯದಾಗಿ ಮೂರನೇ ಹಂತ ನೊಂದಾವಣೆ. ಅದಕ್ಕೆ ಮಾತ್ರ ಪ್ರಾಪರ್ಟಿ ಕಾರ್ಡ್ ಸದ್ಯ ಬೇಡಾ. ಮತ್ತೆ ನೋಡೋಣ ಎನ್ನುವ ಆದೇಶ ಬಂದಿರುವುದು. ಹಾಗಾದರೆ ಏನು ಪ್ರಯೋಜನ? ಏನೂ ಪ್ರಯೋಜನವಿಲ್ಲವೇ? ಯಾರು ತಮ್ಮ ಭೂಮಿಯನ್ನು ಈಗಾಗಲೇ ಭೂಪರಿವರ್ತನೆ ಮಾಡಿ ನಂತರ ಅದು ಸಿಂಗಲ್ ಸೈಟ್ ಎಪ್ರೂವಲ್ ಆಗಿದ್ದಲ್ಲಿ ಆಗ ಅವರಿಗೆ ಭೂನೊಂದಾವಣಿ ಮಾಡುವಾಗ ಪ್ರಾಪರ್ಟಿ ಕಾರ್ಡ್ ಇಲ್ಲದಿದ್ದರೂ ಪರವಾಗಿಲ್ಲ ಎನ್ನುವ ವಾತಾವರಣ ಈಗ ಸದ್ಯ ಇರುವುದು. ಉಳಿದ ಎಲ್ಲರಿಗೂ ಕೈಗೆ ಬಂದ ತುತ್ತು ಬಾಯಿಯಿಂದ ಕೆಳಗೆ ಹೋಗಿ ಗಂಟಲಲ್ಲಿ ಸಿಕ್ಕಿಕೊಂಡಿರುವ ಪರಿಸ್ಥಿತಿ ಬಂದಿರುವುದು. ಹಾಗಾದರೆ ನಮ್ಮ ಶಾಸಕರು ಏನು ಮಾಡಬೇಕು?
ಮತ್ತೆ ಮುಖ್ಯಮಂತ್ರಿ ಯಡಿಯೂರಪ್ಪನವರ ಕೈಕಾಲು ಹಿಡಿದು ಮರು ಆದೇಶ ಹೊರಡಿಸಬೇಕು. ಮತ್ತೆ ಸಿಎಂ ಮತ್ತು ಕಂದಾಯ ಸಚಿವರಿಗೆ ಮನವರಿಕೆ ಮಾಡಿ ಹೊಸ ಆದೇಶ ತರಬೇಕು. ನೀವಿಗ ಜನಸಾಮಾನ್ಯರಿಗೆ ಉಪಯೋಗವಾಗಲಿ ಎಂದು ಮಾಡಿರುವ ವಿನಾಯಿತಿ ಏನೂ ಉಪಯೋಗವಾಗುತ್ತಿಲ್ಲ. ಕೇವಲ ಸಣ್ಣ ಪ್ರಮಾಣದಲ್ಲಿ ಮಾತ್ರ ಯೂಸ್ ಆಗಿದೆ. ಆದ್ದರಿಂದ ಭೂಪರಿವರ್ತನೆ, ಸಿಂಗಲ್ ಸೈಟ್ ಮಾಡುವಾಗಲೂ ಪ್ರಾಪರ್ಟಿ ಕಾರ್ಡ್ ಸದ್ಯ ಅಗತ್ಯ ಇಲ್ಲ ಎಂದು ಮನಸ್ಸಿಗೆ ಮುಟ್ಟುವ ಹಾಗೆ ಹೇಳಿ ಹೊಸ ಸೂಚನೆ ಹೊರಡಿಸಬೇಕು. ಅದಕ್ಕಾಗಿ ನಮ್ಮ ಇಬ್ಬರು ಶಾಸಕರು ಮತ್ತೆ ಸಿಎಂ ಎದುರು ಕೈಕಟ್ಟಿ ನಿಲ್ಲಬೇಕು. ಇಲ್ಲದಿದ್ದರೆ ಜನ ಹೊಗಳುವುದು ಬಿಡಿ, ಹಿಂದೆಯಿಂದ ಬೈಯುತ್ತಾ ತಿರುಗುತ್ತಾರೆ!

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Hanumantha Kamath September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Hanumantha Kamath September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search