• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಲಿಕೆಗೆ ಹಣ ವಸೂಲಿ ಮಾಡುವ ಧೈರ್ಯ ಇರುವುದು ಗೂಡಂಗಡಿಯವರದ್ದು ಮಾತ್ರ!!

Hanumantha Kamath Posted On November 4, 2019
0


0
Shares
  • Share On Facebook
  • Tweet It

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಧಿಕಾರವನ್ನು ಮುಗಿಸಿ ಇಳಿದು ಹೋಗುವಾಗ ಗುತ್ತಿಗೆದಾರರಿಗೆ ಕೊಡಬೇಕಾಗಿದ್ದ ಸುಮಾರು 70 ಕೋಟಿ ರೂಪಾಯಿಗಳಷ್ಟು ಹಣವನ್ನು ಕೊಡದೇ ಹಾಗೆ ಬಾಕಿ ಇರಿಸಿ ಹೋಗಿದೆ. ಇನ್ನು ಕಟ್ಟಡ ತೆರಿಗೆ ಸುಮಾರು 29 ಕೋಟಿಯಷ್ಟು ವಸೂಲಾಗಬೇಕಿದೆ. ಅದನ್ನು ಪಾಲಿಕೆ ವಸೂಲಿ ಮಾಡಿಲ್ಲ. ಹಾಗೆ ಬಿಟ್ಟಿದೆ. ಇನ್ನು ಹೋರ್ಡಿಂಗ್ ನವರಿಂದ ಸುಮಾರು ಒಂದೂವರೆ ಕೋಟಿ ರೂಪಾಯಿ ಬರಬೇಕಿದೆ. ಅದು ಕೂಡ ಹಾಗೆ ಇದೆ. ಪಾರ್ಕಿಂಗ್ ಜಾಗವನ್ನು ಗುತ್ತಿಗೆ ತೆಗೆದುಕೊಂಡವರು ಕೂಡ ಬಾಕಿ ಇರಿಸಿದ್ದಾರೆ. ರಸ್ತೆಯ ಕೆಳಗೆ ಟೆಲಿಕಾಂ ಕಂಪೆನಿಗಳ ಕೇಬಲ್ ಗೆ ನೆಲದ ಬಾಡಿಗೆ ವಸೂಲಿ ಮಾಡುವ ಕ್ರಮವೇ ಇಲ್ಲ. ಈ ಎಲ್ಲಾ ಬಾಕಿ ಇರಿಸಿಕೊಂಡ ಮಂಗಳೂರು ಮಹಾನಗರ ಪಾಲಿಕೆ ಯಾರಿಂದ ಒಂದು ಚೂರು ಬಿಡದೆ ವಸೂಲಿ ಮಾಡುವುದು ಗೊತ್ತಾ. ಅದೇ ರಸ್ತೆ ಬದಿ ಚಿಕ್ಕ ಗೂಡಂಗಡಿ ಇಟ್ಟುಕೊಂಡು ಹೊಟ್ಟೆಪಾಡಿಗೆ ವ್ಯಾಪಾರ ಮಾಡುತ್ತಾರಲ್ಲ, ವಿಕಲಚೇತನರು. ಅವರಿಂದ ತಪ್ಪದೆ ಬಾಡಿಗೆ ವಸೂಲಿಯಾಗುತ್ತದೆ.
ಅಷ್ಟಕ್ಕೂ ಹೋರ್ಡಿಂಗ್ ನವರು ಸಮಾಜಸೇವೆಗಾಗಿ ಹೋರ್ಡಿಂಗ್ ನಿಲ್ಲಿಸಿರುವುದಿಲ್ಲ. ಅವರು ಅದರಿಂದ ಕೋಟಿಗಟ್ಟಲೆ ಹಣವನ್ನು ಸಂಪಾದಿಸುತ್ತಾರೆ. ಆದರೆ ಅವರು ಹಣ ಬಾಕಿ ಇಟ್ಟರೆ ಪಾಲಿಕೆ ಆಡಳಿತ ಕೇಳುವುದಿಲ್ಲ. ಅಷ್ಟಕ್ಕೂ ಹೋರ್ಡಿಂಗ್ ನವರು ಸರಕಾರಿ ಜಾಗವನ್ನು ಬಳಸಿ ಹೋರ್ಡಿಂಗ್ ನಿಲ್ಲಿಸಿರುತ್ತಾರೆ. ಆದರೆ ಅವರು ಹಣ ಬಾಕಿ ಇಟ್ಟರೆ ಅದೊಂದು ವಿಷಯವೇ ಅಲ್ಲದಂತೆ ಪಾಲಿಕೆ ಆಡಳಿತ ವರ್ತಿಸುತ್ತದೆ. ಅವರಿಗೆ ಶುಲ್ಕ ಹೆಚ್ಚಿಸುವುದೂ ಇಲ್ಲ. ಆದರೆ ನಮ್ಮದೇ ಜಾಗದಲ್ಲಿ ನಾವು ಮನೆ ಕಟ್ಟಿದರೆ ಪಾಲಿಕೆಯವರು ಮನೆ ತೆರಿಗೆ ಕಟ್ಟುವುದು ತಡ ಮಾಡಿದರೆ ದಂಡ ವಸೂಲಿ ಮಾಡುತ್ತಾರೆ. ಅದೇ ಹೋರ್ಡಿಂಗ್ ನವರು ಎಷ್ಟೇ ತಡ ಮಾಡಿದರೂ ದಂಡ ಬಿಡಿ ಅವರ ವಿರುದ್ಧ ಒಂದು ಸಣ್ಣ ಕೆಮ್ಮು ಕೂಡ ತೆಗೆಯುವುದಿಲ್ಲ. ಅದೇ ಮನೆ ತೆರಿಗೆ ಕಟ್ಟುವುದು ತಡವಾದರೆ ಪಾಲಿಕೆ ಏನು ಮಾಡುತ್ತದೆ, ಗೊತ್ತಾ?
ಮನೆ ತೆರಿಗೆ ಕಟ್ಟದವರ ಒಂದು ಲಿಸ್ಟ್ ಮಾಡಿ ಪ್ರತಿ ಜೂನ್ ನಲ್ಲಿ ಒಂದು ರಿಕ್ಷಾದಲ್ಲಿ ಸ್ಪೀಕರ್ ಕಟ್ಟಿ ಅನೌನ್ಸ್ ಮಾಡುತ್ತಾ ಹೋಗುವ ವ್ಯವಸ್ಥೆ ಮಾಡುತ್ತಾರೆ. ಆದಷ್ಟು ಬೇಗ ಮನೆ ತೆರಿಗೆ ಕಟ್ಟದಿದ್ದರೆ ಅದು ಮಾಡುತ್ತೇವೆ, ಇದು ಮಾಡುತ್ತೇವೆ ಎಂದು ಪರೋಕ್ಷ ಬೆದರಿಕೆ ಹಾಕುತ್ತಾರೆ. ಹೋರ್ಡಿಂಗ್ ನವರು ಹಣ ಕಟ್ಟದಿದ್ದರೆ ನೋಟಿಸು ಕೂಡ ಪಾಲಿಕೆ ಅದೇ ಮನೆ ತೆರಿಗೆ ಕಟ್ಟದಿದ್ದರೆ ಹೆದರಿಸುವ ರೀತಿಯಲ್ಲಿಯೇ ಗೊತ್ತಾಗುತ್ತದೆ. ಪಾಲಿಕೆ ಕಳೆದ ಅವಧಿಯಲ್ಲಿ ಯಾರ ಪರವಾಗಿ ಇತ್ತು ಅಂತ!
0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Hanumantha Kamath January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Hanumantha Kamath January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search