• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತುಂಬೆಯಲ್ಲಿ 7 ಮೀಟರ್ ನೀರು ನಿಲ್ಲಬೇಕಾದರೆ ಬಿಜೆಪಿ ಇಲ್ಲಿ ದಡ ಸೇರಬೇಕು!!

Hanumantha Kamath Posted On November 9, 2019
0


0
Shares
  • Share On Facebook
  • Tweet It

ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ ಉತ್ತರ ಶಾಸಕ ಡಾ|ಭರತ್ ಶೆಟ್ಟಿಯವರಿಗೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಕೂಡಲೇ ತಲಾ 25 ಕೋಟಿಯನ್ನು ವಿಶೇಷ ಅನುದಾನವಾಗಿ ಕ್ಷೇತ್ರದ ಅಭಿವೃದ್ಧಿಗೆ ನೀಡಿದ್ದಾರೆ ಎನ್ನುವುದನ್ನು ಇಬ್ಬರು ಶಾಸಕರು ಹೇಳುತ್ತಿದ್ದಾರೆ. ಸಂತೋಷ, ಆ ಹಣವನ್ನು ಅವರು ಕ್ಷೇತ್ರದ ಅಭಿವೃದ್ಧಿಗೆ ಬಳಸಲಿ ಎನ್ನುವುದು ಹಾರೈಕೆ.

ಬಹುಶ: ಈ ಇಬ್ಬರು ಶಾಸಕರು ಇದೇ ವೇಗದಲ್ಲಿ ತುಂಬೆ ಡ್ಯಾಂನಲ್ಲಿ ಏಳು ಮೀಟರ್ ನೀರು ನಿಲ್ಲಿಸಿದರೆ ಮುಳುಗಡೆಯಾಗುವ ಭೂಮಾಲೀಕರ ಭೂಮಿಗೆ ಕೊಡಬೇಕಾದ ಪರಿಹಾರವನ್ನು ಕೂಡ ತರಿಸಬೇಕು. ಬಿಜೆಪಿಗೆ ಮತ ಕೊಡಲು ಹೊರಡುವ ಪ್ರತಿ ಮತದಾರನಿಗೂ ಮುಂದಿನ ವರ್ಷಗಳಲ್ಲಿ ನೀರಿನ ಸಮಸ್ಯೆ ಬರದಂತೆ ಬಿಜೆಪಿ ನೋಡಿಕೊಳ್ಳಬಹುದು ಎನ್ನುವ ಧೈರ್ಯ ಬರಬೇಕಾದರೆ ಶಾಸಕರಿಬ್ಬರು ಮತದಾರರಿಗೆ ಆ ನಂಬಿಕೆಯನ್ನು ತರಬೇಕು. ತುಂಬೆಯಲ್ಲಿ ಜಾಗ ಕಳೆದುಕೊಳ್ಳುವವರಿಗೆ ಅಂದಾಜು 120 ಕೋಟಿಯಷ್ಟು ಹಣ ಪರಿಹಾರವಾಗಿ ಕೊಡಬೇಕಿದೆ. ಒಮ್ಮೆಲ್ಲೆ ಒಂದು ಯೋಜನೆಗೆ ಅಷ್ಟು ಫಂಡ್ ಇಲ್ಲದಿದ್ದಲ್ಲಿ ನಾಲ್ಕೈದು ಹಂತಗಳಲ್ಲಿ ಬಿಡುಗಡೆ ಮಾಡಿಬಿಟ್ಟರೆ ಬರುವ 2026 ರ ತನಕ ನಾವು ಯಾವುದೇ ತೊಂದರೆ ಇಲ್ಲದೆ ಪ್ರತಿ ಬೇಸಿಗೆಯನ್ನು ಕಳೆಯಲು ಸಾಧ್ಯವಾಗುತ್ತದೆ. ಕಳೆದ ಐದು ವರ್ಷಗಳಲ್ಲಿ ಇದ್ದ ಸರಕಾರಗಳಲ್ಲಿ ಈ ಬಗ್ಗೆ ಯಾವುದೇ ಸುಧಾರಣೆ ಮಾಡಲೇ ಇಲ್ಲ. ಕಳೆದ ಬಾರಿ ರಾಜ್ಯದಲ್ಲಿ ಮತ್ತು ಪಾಲಿಕೆ ಎರಡರಲ್ಲಿಯೂ ಕಾಂಗ್ರೆಸ್ ಇದ್ದಾಗ ಸಹಜವಾಗಿ ನಿರೀಕ್ಷೆ ಇತ್ತು. ಅವರು ಮಾಡದೇ ಇದ್ದಾಗ ಮುಂದಿನ ಆಯ್ಕೆ ಯಾರು? ಬಿಜೆಪಿ. ಈಗ ಎರಡೂ ಕಡೆ ಬಿಜೆಪಿ ಬಂದರೆ ಯಾಕೆ ಈ ಕೆಲಸ ಮೊದಲಿಗೆ ಆಗುತ್ತೆ ಎನ್ನುವ ಭರವಸೆ ಇದೆ ಎಂದರೆ ಕಾಮತ್ ಮತ್ತು ಭರತ್ ಗೆ ಅಂತಹ ಒಂದು ಶಕ್ತಿ ಪಾಲಿಕೆ ಲೆವೆಲ್ಲಿನಲ್ಲಿ ಬಂದಿರುತ್ತದೆ. ಇಬ್ಬರೂ ತಮ್ಮ ತಮ್ಮ ನೆಟ್ ವರ್ಕ್ ಬಳಸಿ ಅನುದಾನ ತರುವಲ್ಲಿ ಸಮರ್ಥರಿದ್ದಾರೆ. ಅದು ಯಶಸ್ವಿಯಾದರೆ ಬಹುಶ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಅದು ಇವರಿಬ್ಬರಿಗೆ ಲಾಭವಾಗುತ್ತದೆ. ಹೇಗೂ ಸಿಎಂ ಆದ ವಾರದೊಳಗೆ 25 ಕೋಟಿ ಒಬ್ಬೊಬ್ಬ ಶಾಸಕರಿಗೆ ಯಡ್ಯೂರಪ್ಪ ಕೊಡುತ್ತಾರೆ ಎಂದರೆ ತುಂಬೆ ಡ್ಯಾಂ ಸಂತ್ರಸ್ತರು ಇನ್ನು ನಿರೀಕ್ಷೆ ಇಡುವುದು ತಪ್ಪಲ್ಲ. ಆಗಲಿ ಆದ್ಯತೆ ಮೇರೆ ಆಗಲಿ ಎನ್ನುವ ಅಪೇಕ್ಷೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವ ಎಲ್ಲರಿಗೂ ಇದೆ. ಬಹುಶ: ತುಂಬೆಯಲ್ಲಿ ಏಳು ಮೀಟರ್ ನೀರು ನಿಲ್ಲಬೇಕಾದರೆ ಇಲ್ಲಿ ಪಾಲಿಕೆಯಲ್ಲಿ ಬಿಜೆಪಿ ಸಲೀಸಾಗಿ ಬಹುಮತಕ್ಕೆ ಬರಬೇಕು. ಬರುತ್ತಾ? ನಮಗೆ ನೀರು ತೊಂದರೆ ಇಲ್ಲದೆ ಸಿಗುತ್ತಾ ?

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Hanumantha Kamath July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Hanumantha Kamath July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search