• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಭವ್ಯ ಮಂದಿರಕ್ಕೆ ಜಾಗ ಸಾಲದಿದ್ದರೆ ಪಕ್ಕದಲ್ಲಿಯೇ 67 ಏಕರೆ ಜಾಗ ಇದೆ!!

Hanumantha Kamath Posted On November 10, 2019
0


0
Shares
  • Share On Facebook
  • Tweet It

ಕೊನೆಗೂ ಶತಮಾನದ ಹಿಂದಿನ ಪ್ರಕರಣವೊಂದು ಇವತ್ತು ಬಗೆಹರಿಯುವುದರೊಂದಿಗೆ ಎಲ್ಲಾ ಆಸ್ತಿಕರ ಕಂಗಳಲ್ಲಿ ಕನಸು ಮತ್ತೆ ಗರಿಗೆದರಿದೆ. ಅಯೋಧ್ಯೆಯ ರಾಮಜನ್ಮಭೂಮಿಯ 2.77 ಏಕರೆ ಜಾಗದ ಮೇಲೆ ರಾಮಲಲ್ಲಾ ಸಂಘಟನೆಗೆ ಹಕ್ಕಿದೆ ಎಂದು ಸುಪ್ರೀಂಕೋರ್ಟ್ ಹೇಳುವುದರೊಂದಿಗೆ ಪ್ರಕರಣಕ್ಕೆ ಕೊನೆ ಹಾಡಿದೆ. ಅದರೊಂದಿಗೆ ಅಯೋಧ್ಯೆಯ ಬೇರೆ ಯಾವುದಾದರೂ ಭಾಗದಲ್ಲಿ ಐದು ಏಕರೆ ಜಾಗವನ್ನು ಮಸೀದಿ ಕಟ್ಟಲು ಸುನ್ನಿ ವಕ್ಫ್ ಬೋರ್ಡಿಗೆ ನೀಡಬೇಕು ಎಂದು ಸೂಚಿಸುವುದರೊಂದಿಗೆ ಪ್ರಕರಣ ಸೌಹಾರ್ದ ಅಂತ್ಯ ಕಂಡಿದೆ. ಇನ್ನು ರಾಮ ಮಂದಿರ ಕಟ್ಟುವ ಜವಾಬ್ದಾರಿ ಕೇಂದ್ರ ಸರಕಾರಕ್ಕೆ ನೀಡಲಾಗಿದೆ. ಅದಕ್ಕಾಗಿ ಒಂದು ಟ್ರಸ್ಟ್ ಮಾಡಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಆ ಟ್ರಸ್ಟ್ ಮುಂದಿನ ಮೂರು ತಿಂಗಳೊಳಗೆ ರಚನೆಯಾಗಿದೆ. ಅದರ ಬೈಲಾ ಸಹಿತ ನೀತಿ ನಿಯಮಾವಳಿಗಳು ಕೂಡ ಬರುವ ದಿನಗಳಲ್ಲಿ ಫಿಕ್ಸ್ ಆಗಲಿದೆ. ಆ ಟ್ರಸ್ಟ್ ನಲ್ಲಿ ನಿರ್ಮೋಹಿ ಆಖಾಡದ ಒಬ್ಬರನ್ನು ಸದಸ್ಯರನ್ನಾಗಿ ಮಾಡಲು ಕೂಡ ಸುಪ್ರೀಂ ಹೇಳಿದೆ.

ಇಲ್ಲಿ ಅನೇಕರಿಗೆ ಒಂದು ವಿಷಯ ಅನಿಸಬಹುದು. ಅದೇನೆಂದರೆ 2.77 ಏಕರೆ ಜಾಗದಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆ ಜಾಗ ಸಾಲುವುದೇ ಎನ್ನುವುದು. ಇಲ್ಲಿ ಇನ್ನೊಂದು ವಿಷಯ ಇದೆ. ಅದೇನೆಂದರೆ ಇಲ್ಲಿ ತನಕ ನ್ಯಾಯಾಲಯದಲ್ಲಿದ್ದ 2.77 ಏಕರೆ ಜಾಗಕ್ಕೆ ತಾಗಿಕೊಂಡೇ 67 ಏಕರೆ ಬೇರೆ ಜಾಗ ಇದೆ. ಅದನ್ನು ಉತ್ತರ ಪ್ರದೇಶ ಸರಕಾರ ಬಹಳ ಸಮಯದ ಹಿಂದೆನೆ ಸ್ವಾಧೀನಪಡಿಸಿಕೊಂಡಿದೆ. ಈಗ ಆ ಜಾಗವನ್ನು ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಸೇರಿಕೊಂಡು ರಾಮಲಲ್ಲಾ ಟ್ರಸ್ಟ್ ಗೆ ನೀಡಬೇಕು. ಅದರ ನಂತರ ಒಟ್ಟು ಜಾಗದಲ್ಲಿ ಕೇಂದ್ರ ಸರಕಾರ ಭವ್ಯ ರಾಮನ ದೇವಾಲಯವನ್ನು ಕಟ್ಟುವ ಮೂಲಕ ಕೋಟ್ಯಾಂತರ ಭಕ್ತರ ಪಾಲಿಗೆ ಪುಣ್ಯಕ್ಷೇತ್ರವಾಗಿ ಮಾರ್ಪಡಿಸಬಹುದು. ಇನ್ನು ಸುಪ್ರೀಂ ಕೋರ್ಟ್ ಹೇಳಿದ ಪ್ರಕಾರ 1857 ರಿಂದಲೇ ಹಿಂದೂಗಳು ಅಲ್ಲಿ ಒಳಾಂಗಣದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. 1949 ರ ನಂತರ ಆ ಪ್ರಾರ್ಥನೆ ಹೊರಾಂಗಣದಲ್ಲಿ ಮಾತ್ರ ಮಾಡಬೇಕಾದ ಪರಿಸ್ಥಿತಿ ಬಂತು. ಮುಸ್ಲಿಮರು 1949 ರಿಂದ ಹೊರಗೆ ನಮಾಜ್ ಮಾಡುತ್ತಿದ್ದರು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಬಹಳ ಸಮಾಧಾನದ ವಿಷಯ ಎಂದರೆ ಅಲ್ಲೊಬ್ಬರು, ಇಲ್ಲೊಬ್ಬರು ಬಿಟ್ಟರೆ ಮುಸ್ಲಿಮರಿಂದ ಸುಪ್ರೀಂ ಕೋರ್ಟ್ ತೀರ್ಪಿಗೆ ಯಾವುದೇ ವಿರೋಧ ಬಂದಿಲ್ಲ. ತೀರ್ಪನ್ನು ಪ್ರಶ್ನೆ ಮಾಡಲು ಹೋಗಲ್ಲ ಎಂದು ಆಲ್ ಇಂಡಿಯಾ ಸುನ್ನಿ ಸೆಂಟ್ರಲ್ ಬೋರ್ಡ್ ಹೇಳಿದೆ. ಒಟ್ಟಿನಲ್ಲಿ ಈ ತೀರ್ಪು ಯಾರ ಪರ ಅಥವಾ ವಿರೋಧ ಅಲ್ಲ. ಇದು ದೇಶದ ಭವ್ಯ ಪರಂಪರೆಗೆ ನೀಡಿದ ತೀರ್ಪು ಎಂದು ಎಲ್ಲರೂ ಮುಕ್ತಕಂಠದಿಂದ ಸ್ವಾಗತಿಸಿದ್ದಾರೆ. ಭಾರತದ ಅಖಂಡತೆಗೆ ಇದು ಸಾಕ್ಷಿಯಾಗಿದೆ !!

0
Shares
  • Share On Facebook
  • Tweet It




Trending Now
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Hanumantha Kamath January 19, 2026
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Hanumantha Kamath January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
  • Popular Posts

    • 1
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 2
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 3
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search