• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಾಕಿ ಇಟ್ಟಿರುವ ನೀರಿನ 40 ಕೋಟಿ ರೂ ಬಿಲ್ ವಸೂಲಿ ಮಾಡಲು ಪಾಲಿಕೆಯಲ್ಲಿ ಯಾರೂ ಗಂಡಸು ಇಲ್ವಾ?

Hanumantha Kamath Posted On December 4, 2019
0


0
Shares
  • Share On Facebook
  • Tweet It

ಬಗ್ಗಿದವನಿಗೆ ಗುದ್ದು ಜಾಸ್ತಿ ಎನ್ನುವ ಮಾತು ನೀವು ಚಿಕ್ಕ ವಯಸ್ಸಿನಿಂದಲೇ ಕೇಳುತ್ತಾ ಬಂದಿರುತ್ತೀರಿ. ಈ ವಾಕ್ಯವನ್ನು ಸರಕಾರಿ ಅಧಿಕಾರಿಗಳು ತಮ್ಮ ಚೆಂಬರಿನ ಗೋಡೆಯಲ್ಲಿ ಬರೆದಿರಬಹುದು. ಯಾಕೆಂದರೆ ಜನಸಾಮಾನ್ಯನ ಮೇಲೆ ಎಷ್ಟೇ ಒತ್ತಡ ಹಾಕಿದ್ರೂ ಆತ ಏನು ಮಾತನಾಡುವುದಿಲ್ಲ ಎನ್ನುವುದು ಅವರಿಗೆ ಗೊತ್ತಿದೆ. ಅದಕ್ಕಾಗಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವ ಜನರ ಕುಡಿಯುವ ನೀರಿನ ದರವನ್ನು ಒಮ್ಮಿಂದೊಮ್ಮೆಲೇ ಸುಮಾರು 170% ಹೆಚ್ಚಿಸಲಾಗಿದೆ. ನೀವು ಈ ಬಗ್ಗೆ ಪಾಲಿಕೆ ಅಧಿಕಾರಿಗಳ ಬಳಿ ಕೇಳಿದರೆ ಅವರು ಪಾಲಿಕೆಗೆ ಆದಾಯ ಬರಬೇಕಲ್ಲ, ಅದಕ್ಕಾಗಿ ಹೆಚ್ಚಿಸಲಾಗಿದೆ ಎನ್ನುವ ಸಮರ್ಥನೆ ನೀಡುತ್ತಿದ್ದಾರೆ. ಜನಸಾಮಾನ್ಯರಿಗೆ ಹೊರೆಯಾಗುವಷ್ಟು ನೀರಿನ ದರವನ್ನು ಹೆಚ್ಚಿಸುವ ಬದಲು ಎಷ್ಟೋ ಇತರ ದಾರಿಗಳ ಮೂಲಕ ಪಾಲಿಕೆಯ ಆದಾಯ ಅವರು ಹೆಚ್ಚಿಸಬಹುದಿತ್ತು ಎನ್ನುವುದು ನನ್ನ ವಾದ. ಅದು ಹೇಗೆ?

ಮೊದಲನೇಯದಾಗಿ ಕಟ್ಟಡ ತೆರಿಗೆ. ಕೊನೆಯ ಬಾರಿ ಕಟ್ಟಡ ತೆರಿಗೆ ಪರಿಷ್ಕರಣೆ ಮಾಡಿದ್ದು ಯಾವಾಗ ಗೊತ್ತಾ? 1992-93 ರಲ್ಲಿ. ಆವತ್ತಿನ ಬಳಿಕ ಇವತ್ತಿನ ತನಕ ಕಟ್ಟಡ ತೆರಿಗೆಯನ್ನು ಒಂದು ರೂಪಾಯಿ ಕೂಡ ಹೆಚ್ಚಿಸಿಲ್ಲ. ನಿಮಗೆ ಇನ್ನೊಂದು ಆಶ್ಚರ್ಯ ಆಗಬಹುದು. ಅದೇನೆಂದರೆ ನೀವು ಹತ್ತು ವರ್ಷಗಳ ಹಿಂದೆ ಚಲಾವಣೆಯಲ್ಲಿದ್ದ ಇಪ್ಪತ್ತು ಪೈಸೆಯ ಕಾಯಿನ್ ನೋಡಿರಬಹುದು. ಆ ಕಾಯಿನ್ ಚಲಾವಣೆಯಿಂದ ಹಿಂದೆ ಸರಿದಿದ್ದರೂ ಪಾಲಿಕೆಯ ಕಟ್ಟಡ ತೆರಿಗೆಗಳನ್ನು ಲೆಕ್ಕ ಹಾಕುವಾಗ 20 ಪೈಸೆ ಇನ್ನು ಇವರ ದಾಖಲೆ ಪತ್ರಗಳಲ್ಲಿ ಉಸಿರಾಡುತ್ತಿರುತ್ತಿದೆ. ಅಂದರೆ 27 ವರ್ಷಗಳ ಹಿಂದೆ ಹೆಚ್ಚಿಸಿದ್ದ ಕಟ್ಟಡ ತೆರಿಗೆಯ ದರವನ್ನು ಹೆಚ್ಚಿಸಲು ಇವರಿಗೆ ನೆನಪಿಲ್ಲ, ಆದರೆ ಜನಸಾಮಾನ್ಯರ ನೀರಿನ ದರವನ್ನು ಮರೆಯದೇ ಹೆಚ್ಚಿಸಿದ್ದಾರೆ.

ಇನ್ನು ಆರ್ ಟಿಒದಲ್ಲಿ ಪ್ರತಿ ನಿತ್ಯ ಎಷ್ಟೋ ವಾಹನಗಳನ್ನು ನೊಂದಾವಣೆ ಮಾಡಿಸಲಾಗುತ್ತದೆ. ಒಂದೊಂದು ವಾಹನ ನೊಂದಾವಣೆ ಆಗುವಾಗಲೂ ಪಾಲಿಕೆಗೆ ಸುಮಾರು 50 ರೂಪಾಯಿಯಷ್ಟು ಸಂದಾಯವಾಗುತ್ತದೆ. ಆದರೆ ಇಲ್ಲಿಯ ತನಕ ಆರ್ ಟಿಒದಿಂದ ಒಂದೇ ಒಂದು ರೂಪಾಯಿ ಪಾಲಿಕೆಗೆ ಹೋಗಿಲ್ಲ. ಅವರು ಕೊಟ್ಟಿಲ್ಲ, ಇವರು ಕೇಳಿಲ್ಲ. ಬಹುಶ: ಆ ಹಣವೇ ಎಷ್ಟು ಕೋಟಿ ಇರಬಹುದು ಎನ್ನುವ ಅಂದಾಜಾದರೂ ಪಾಲಿಕೆಯ ಅಧಿಕಾರಿಗಳಿಗೆ ಇದೆಯಾ? ಅದನ್ನು ಕೇಳಬಹುದಲ್ಲ? ಅದು ಪಾಲಿಕೆಗೆ ಆದಾಯ ಅಲ್ವಾ?

ಇನ್ನು ಶ್ರೀಮಂತ ಬಿಲ್ಡರ್ ಗಳು  ತಮ್ಮ ಕಟ್ಟಡ ನಿರ್ಮಾಣ ಸಮಯದಲ್ಲಿ ಪಾಲಿಕೆಯಿಂದ ಮತ್ತು ಇತರರು ಬಳಸಿದ ನೀರಿನ ಬಿಲ್ ಕೊಡಲು ಬಾಕಿ ಇಟ್ಟಿರುವ ಹಣ ಎಷ್ಟು ಗೊತ್ತಾ? ಅಂದಾಜು 40 ಕೋಟಿ. ಅದನ್ನು ವಸೂಲು ಮಾಡಲು ಪಾಲಿಕೆಯಲ್ಲಿ ಗಂಡಸರು ಇಲ್ವಾ? ಅದು ಮಾಡದೇ ಜನಸಾಮಾನ್ಯರು ಕುಡಿಯಲು ಬಳಸುವ ನೀರಿಗೆ ದರ ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿದ್ದಿರಲ್ಲ?

ಇನ್ನು ಮನೆ ತೆರಿಗೆ. ನೀವು ಮನೆ ತೆರಿಗೆ ಕಟ್ಟಲು ತಡ ಮಾಡಿದರೆ ನಿಮ್ಮಿಂದ ದಂಡ ವಸೂಲಿ ಮಾಡಲಾಗುತ್ತದೆ. ಉದಾಹರಣೆಗೆ 2019-20 ರ ಮನೆ ತೆರಿಗೆ ಜೂನ್ ಒಳಗೆ ಕಟ್ಟಬೇಕು. ಮರೆತರೆ ದಂಡ ಫಿಕ್ಸ್. ಅದೇ ಹೋರ್ಡಿಂಗ್ಸ್ ಗುತ್ತಿಗೆದಾರರು ತಾವು ಪ್ರತಿ ವರ್ಷ ಒಂದೊಂದು ಹೋರ್ಡಿಂಗ್ ಗೂ ಕಟ್ಟಬೇಕಾದ ಹದಿನೈದು ಸಾವಿರ ಕಟ್ಟಲು ಎಷ್ಟು ವರ್ಷ ತೆಗೆದುಕೊಂಡರೂ ಅವರಿಗೆ ಒಂದೇ ಒಂದು ರೂಪಾಯಿ ದಂಡ ಇಲ್ಲ. ನೀವು ನಿಮ್ಮದೇ ಮನೆಯಲ್ಲಿ ವಾಸಿಸುತ್ತಿದ್ದರೂ ತೆರಿಗೆ ಕಟ್ಟಲು ತಡ ಮಾಡಿದರೆ 25% ದಂಡ ಇದೆ. ಅದೇ ಸಾರ್ವಜನಿಕ ಜಾಗದಲ್ಲಿ ಹೋರ್ಡಿಂಗ್ಸ್ ನಿಲ್ಲಿಸಿ ಕೋಟಿ ಸಂಪಾದನೆ ಮಾಡುವ ಗುತ್ತಿಗೆದಾರ ತಡ ಮಾಡಿದಷ್ಟು ಅವನಿಗೆ ರಾಜ ಮರ್ಯಾದೆ ವಿನ: ದಂಡದ ಮಾತೇ ಇಲ್ಲ.
ಹೀಗೆ ಪಾಲಿಕೆಗೆ ಆದಾಯ ಬರಲು ನೂರು ಶ್ರೀಮಂತ ದಾರಿಗಳು ಇದ್ದರೂ ಬಡ ಜನಸಾಮಾನ್ಯರನ್ನು ದೋಚಲು ನಿಂತಿರುವ ಪಾಲಿಕೆಗೆ ಕಿವಿ ಹಿಂಡುವ ಕೆಲಸವನ್ನು ನಮ್ಮ ಜನಪ್ರತಿನಿಧಿಗಳು ಮಾಡಬಲ್ಲರಾ??

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Hanumantha Kamath December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Hanumantha Kamath December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!

  • Privacy Policy
  • Contact
© Tulunadu Infomedia.

Press enter/return to begin your search