• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊಂಕಣಿ ಭವನಕ್ಕೆ 5 ಕೋಟಿ ಮಂಜೂರು

Tulunadu News Posted On December 11, 2019
0


0
Shares
  • Share On Facebook
  • Tweet It

ಹಲವಾರು ವರ್ಷಗಳಿಂದ ಕೊಂಕಣಿ ಭವನ ನಿರ್ಮಾಣವಾಗಬೇಕೆಂದು ಹಿಂದಿನ ಅವಧಿಗಳ ಅಧ್ಯಕ್ಷರು ಸೇರಿದಂತೆ ಅನೇಕರು ಪ್ರಯತ್ನಿಸಿದ್ದಾರೆ.ನಾನು ಅಧ್ಯಕ್ಷನಾದ ಕೂಡಲೇ ಈ ಬಗ್ಗೆ ನನ್ನ ಗಮನಕ್ಕೂ ತರಲಾಗಿತ್ತು.ಮೊದಲ ಆದ್ಯತೆ ಎಂಬಂತೆ ಈ ನಿಟ್ಟಿನಲ್ಲಿ ಕಾರ್ಯಪೃವತ್ತನಾಗಿ ನಾನು ಕನ್ನಡ ಸಂಸ್ಕೃತಿ ಇಲಾಖೆ ಮಂತ್ರಿಗಳಾದ ಶ್ರೀ ಸಿ.ಟಿ ರವಿಯವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಕೊಂಕಣಿ ಭವನದ ಬಗ್ಗೆ ಒತ್ತಾಯಿಸಿದ್ದೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರನ್ನೂ ಭೇಟಿಯಾಗಿ ಕೆಲವು ದಾಖಲೆಗಳನ್ನು ಡಿ ಸಿ ಯವರ ಬಳಿ ತೋರಿಸಿ ಸಹಕಾರ ನೀಡಬೇಕೆಂದು ವಿನಂತಿಸಿದ್ದೆ.ಸನ್ಮಾನ್ಯ ಸಿ ಟಿ ರವಿಯವರಿಗೆ ಆಗಾಗ ಕರೆ ಮಾಡಿ ಈ ಬಗ್ಗೆ ಫೊಲೊ ಅಪ್ ಮಾಡಲಾಗಿತ್ತು.ನಿನ್ನೆ ಅಂದರೆ ಡಿಸೆಂಬರ್ 10 ರಂದು ನಮ್ಮ ಕೊಂಕಣಿ ಭವನಕ್ಕೆ 5 ಕೋಟಿ ಮಂಜೂರಾಗಿದ್ದು ತಕ್ಷಣಕ್ಕೆ 3 ಕೋಟಿ ಈಗಾಗಲೇ ಬಿಡುಗಡೆಯಾಗಿದೆ ಎಂದು ಹೇಳಲು ಸಂತೋಷವಾಗುತ್ತಿದೆ.

ಕೊಂಕಣಿ ಭವನದ ಕನಸು ಕಂಡಿದ್ದ ಹಲವರ ಕನಸು ಈಗ ನನಸಾಗುತ್ತಿದೆ.ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರೂಪಾ, ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ಅವರು ಸೂಕ್ತ ನಿವೇಶನ ಹುಡುಕುವಲ್ಲಿ ಶ್ರಮ ವಹಿಸುತ್ತಿದ್ದಾರೆ.ಇವರಿಗೂ ನಾನು ಆಭಾರಿಯಾಗಿದ್ದೇನೆ.ಇದು ನಮ್ಮ ರಾಜ್ಯ ಸರಕಾರ ಕೊಂಕಣಿ ಭಾಷಿಗರಿಗೆ ಕೊಟ್ಟ ದೊಡ್ಡ ಉಡುಗೊರೆ ಎಂದು ನಾನು ಭಾವಿಸುತ್ತೇನೆ. ಈ ಒಂದು ಹೋರಾಟದಲ್ಲಿ ಹಿಂದೆ ಶ್ರಮಿಸಿದ್ದ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ.ಆದಷ್ಟು ಬೇಗ ಮಂಗಳೂರಿನಲ್ಲಿಯೇ ಭವ್ಯ ಕೊಂಕಣಿ ಭವನ ನಿರ್ಮಾಣವಾಗಲಿದೆ ಎಂದು ಡಾ ಜಗದೀಶ ಪೈ, ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search