• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊಂಕಣಿ ಭವನಕ್ಕೆ 5 ಕೋಟಿ ಮಂಜೂರು

Tulunadu News Posted On December 11, 2019
0


0
Shares
  • Share On Facebook
  • Tweet It

ಹಲವಾರು ವರ್ಷಗಳಿಂದ ಕೊಂಕಣಿ ಭವನ ನಿರ್ಮಾಣವಾಗಬೇಕೆಂದು ಹಿಂದಿನ ಅವಧಿಗಳ ಅಧ್ಯಕ್ಷರು ಸೇರಿದಂತೆ ಅನೇಕರು ಪ್ರಯತ್ನಿಸಿದ್ದಾರೆ.ನಾನು ಅಧ್ಯಕ್ಷನಾದ ಕೂಡಲೇ ಈ ಬಗ್ಗೆ ನನ್ನ ಗಮನಕ್ಕೂ ತರಲಾಗಿತ್ತು.ಮೊದಲ ಆದ್ಯತೆ ಎಂಬಂತೆ ಈ ನಿಟ್ಟಿನಲ್ಲಿ ಕಾರ್ಯಪೃವತ್ತನಾಗಿ ನಾನು ಕನ್ನಡ ಸಂಸ್ಕೃತಿ ಇಲಾಖೆ ಮಂತ್ರಿಗಳಾದ ಶ್ರೀ ಸಿ.ಟಿ ರವಿಯವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಕೊಂಕಣಿ ಭವನದ ಬಗ್ಗೆ ಒತ್ತಾಯಿಸಿದ್ದೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರನ್ನೂ ಭೇಟಿಯಾಗಿ ಕೆಲವು ದಾಖಲೆಗಳನ್ನು ಡಿ ಸಿ ಯವರ ಬಳಿ ತೋರಿಸಿ ಸಹಕಾರ ನೀಡಬೇಕೆಂದು ವಿನಂತಿಸಿದ್ದೆ.ಸನ್ಮಾನ್ಯ ಸಿ ಟಿ ರವಿಯವರಿಗೆ ಆಗಾಗ ಕರೆ ಮಾಡಿ ಈ ಬಗ್ಗೆ ಫೊಲೊ ಅಪ್ ಮಾಡಲಾಗಿತ್ತು.ನಿನ್ನೆ ಅಂದರೆ ಡಿಸೆಂಬರ್ 10 ರಂದು ನಮ್ಮ ಕೊಂಕಣಿ ಭವನಕ್ಕೆ 5 ಕೋಟಿ ಮಂಜೂರಾಗಿದ್ದು ತಕ್ಷಣಕ್ಕೆ 3 ಕೋಟಿ ಈಗಾಗಲೇ ಬಿಡುಗಡೆಯಾಗಿದೆ ಎಂದು ಹೇಳಲು ಸಂತೋಷವಾಗುತ್ತಿದೆ.

ಕೊಂಕಣಿ ಭವನದ ಕನಸು ಕಂಡಿದ್ದ ಹಲವರ ಕನಸು ಈಗ ನನಸಾಗುತ್ತಿದೆ.ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರೂಪಾ, ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ಅವರು ಸೂಕ್ತ ನಿವೇಶನ ಹುಡುಕುವಲ್ಲಿ ಶ್ರಮ ವಹಿಸುತ್ತಿದ್ದಾರೆ.ಇವರಿಗೂ ನಾನು ಆಭಾರಿಯಾಗಿದ್ದೇನೆ.ಇದು ನಮ್ಮ ರಾಜ್ಯ ಸರಕಾರ ಕೊಂಕಣಿ ಭಾಷಿಗರಿಗೆ ಕೊಟ್ಟ ದೊಡ್ಡ ಉಡುಗೊರೆ ಎಂದು ನಾನು ಭಾವಿಸುತ್ತೇನೆ. ಈ ಒಂದು ಹೋರಾಟದಲ್ಲಿ ಹಿಂದೆ ಶ್ರಮಿಸಿದ್ದ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ.ಆದಷ್ಟು ಬೇಗ ಮಂಗಳೂರಿನಲ್ಲಿಯೇ ಭವ್ಯ ಕೊಂಕಣಿ ಭವನ ನಿರ್ಮಾಣವಾಗಲಿದೆ ಎಂದು ಡಾ ಜಗದೀಶ ಪೈ, ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search