• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಬೀರನಿಗೆ ಕಾಂಗ್ರೆಸ್ ಹತ್ತು ಲಕ್ಷ ಕೊಟ್ಟಾಗ ವಿರೋಧಿಸಿದ ಇದೇ ಬಿಜೆಪಿ ಈಗ ಮಾಡುತ್ತಿರುವುದೇನು?

Hanumantha Kamath Posted On December 23, 2019
0


0
Shares
  • Share On Facebook
  • Tweet It

ಗೋಲಿಬಾರ್ ನಲ್ಲಿ ಮೃತರಾದ ಇಬ್ಬರಿಗೆ ಭಾರತೀಯ ಜನತಾ ಪಕ್ಷದ ರಾಜ್ಯ ಸರಕಾರ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಈ ವಾಕ್ಯದ ವಿಶ್ಲೇಷಣೆಯನ್ನು ಮಾಡುವ ಮೊದಲು ಒಂದು ಫ್ಲಾಶ್ ಬ್ಯಾಕ್ ಗೆ ಹೋಗಿ ಬರೋಣ. ನಾವು ಒಂದು ವೇಳೆ ಫೈರಿಂಗ್ ಮಾಡದಿದ್ದರೆ ಉದ್ರಿಕ್ತ ಗುಂಪು ಪೊಲೀಸ್ ಠಾಣೆಯ ಒಳಗೆ ನುಗ್ಗಿ, ದಾಂಧಲೆ ಮಾಡುವ ಸಾಧ್ಯತೆ ಇತ್ತು. ಶಸ್ತ್ರಾಸ್ತಗಳು ಠಾಣೆಯಲ್ಲಿ ಸಂಗ್ರಹ ಇದ್ದ ಕಾರಣ ಪರಿಸ್ಥಿತಿ ವಿಕೋಪಕ್ಕೆ ಹೋಗಲಿತ್ತು. ಆದ್ದರಿಂದ ಅದನ್ನು ತಡೆಯಲು ನಾವು ಅನಿವಾರ್ಯವಾಗಿ ಫೈರಿಂಗ್ ಮಾಡಬೇಕಾಯಿತು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಆ ಬಗ್ಗೆ ತನಿಖೆ ನಡೆಯಲಿದೆ. ಆದರೆ ಅದಕ್ಕಿಂತ ಮೊದಲೇ ಕಾಂಗ್ರೆಸ್, ಜೆಡಿಎಸ್ ಪೊಲೀಸರನ್ನು ಕಟಕಟೆಯಲ್ಲಿ ನಿಲ್ಲಿಸುತ್ತಿವೆ. ಫೈರಿಂಗ್ ಮಾಡುವ ಅವಶ್ಯಕತೆ ಇರಲಿಲ್ಲ ಎನ್ನುವ ವಾದವನ್ನು ಮಂಡಿಸಿವೆ. ಇಲ್ಲಿ ಫೈರಿಂಗ್ ಬೇಕಿತ್ತಾ, ಬೇಡವಾಗಿತ್ತಾ ಎನ್ನುವುದು ಕೊನೆಯಲ್ಲಿ ಬರುತ್ತದೆ. ಅದಕ್ಕಿಂತ ಮೊದಲು ಸೆಕ್ಷನ್ 144 ಇದ್ದಾಗ ನೂರಾರು ಜನ ಗುಂಪು ಕೂಡಿ ಪ್ರತಿಭಟನೆಗೆ ಇಳಿದಿರಲ್ಲ, ಅದು ತಪ್ಪಲ್ಲವೇ? ಅದನ್ನು ಯಾಕೆ ಯಾವ ವಿಪಕ್ಷ ಮುಖಂಡರೂ ಮಾತನಾಡುವುದಿಲ್ಲ. ಸೆಕ್ಷನ್ 144 ಇದ್ದಾಗ ಪ್ರತಿಭಟನೆ ಬಿಡಿ, ಗುಂಪು ಗುಂಪಾಗಿ ಒಂದೇ ಉದ್ದೇಶ ಇಟ್ಟುಕೊಂಡು ಸೇರುವುದು ಕೂಡ ಕಾನೂನು ಪ್ರಕಾರ ತಪ್ಪು.
ಇಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಜನ ದೊಡ್ಡ ಸಂಖ್ಯೆಯಲ್ಲಿ ಸೇರಿ ಘೋಷಣೆಗಳನ್ನು ಕೂಗುತ್ತಿದ್ದಾರೆ. ಪೊಲೀಸರು ಹೋಗಿ ಎಂದರೂ ಕೇಳುವುದಿಲ್ಲ. ಯಾವಾಗ ಒಳ್ಳೆಯ ಮಾತಿಗೆ ಪ್ರತಿಭಟನಾಕಾರರು ಬಗ್ಗಲಿಲ್ಲವೋ ಪೊಲೀಸರು ಪ್ರತಿಭಟನೆಗೆ ನಿಂತವರ ಮೇಲೆ ಲಾಠಿ ಬೀಸಿದ್ದಾರೆ. ಆಗಲಾದರೂ ಹೋದರಾ? ಇಲ್ಲ. ಪೊಲೀಸರು ಲಾಠಿ ಬೀಸಿದರೆ ನಾವು ಕಲ್ಲು ಬಿಸಾಡೋಣ ಎಂದು ಮೊದಲೇ ಸಿದ್ಧತೆ ಮಾಡಿಕೊಂಡಿದ್ದರೋ ಎನ್ನುವಂತೆ ಕಲ್ಲು ಬಿಸಾಡಲು ಶುರು ಮಾಡಿದ್ದಾರೆ. ಕಾಶ್ಮೀರದ ಪ್ರಭಾವವೋ ಎನ್ನುವಂತೆ ಮುಖಕ್ಕೆ ಬಟ್ಟೆ ಕಟ್ಟಿ ಕಲ್ಲು ಬಿಸಾಡಿದ್ದಾರೆ. ಮೊದಲಿಗೆ ಆಶ್ರುವಾಯು ಸಿಡಿಸಿದ ಪೊಲೀಸರು ಗುಂಪು ಅದಕ್ಕೂ ಬಗ್ಗದಿದ್ದಾಗ ಕೊನೆಗೆ ಫೈರಿಂಗ್ ಮಾಡಿದ್ದಾರೆ. ಅದರ ನಂತರ ಪ್ರತಿಭಟನೆ ನಿಂತಿದೆ. ಮರುದಿನ ಪ್ರತಿಭಟನೆ ಮಾಡುವುದು ಬಿಡಿ, ಮನೆಯ ಹೊರಗೆ ಬರಲು ಯಾರೂ ಸಿದ್ಧರಿರಲಿಲ್ಲ. ಈ ನಡುವೆ ಸುದ್ದಿಗೋಷ್ಟಿ ಮಾಡಿದ ಕಾಂಗ್ರೆಸ್ ಮುಖಂಡರು ಖಾಸಗಿ ಆಸ್ಪತ್ರೆಯೊಂದಕ್ಕೆ ನುಗ್ಗಿದ ಪೊಲೀಸರು ಅಲ್ಲಿ ಐಸಿಯು ಬಾಗಿಲು ಒಡೆದು ಒಳಗೆ ನುಗ್ಗಿದ್ದಾರೆ ಎಂದು ಹೇಳಿದ್ದಾರೆ. ಪೊಲೀಸರತ್ತ ಕಲ್ಲು ಬಿಸಾಡಲು ಪ್ರತಿಭಟನಾಕಾರರು ಅಡಗಿ ಕುಳಿತದ್ದೇ ಒಂದು ಖಾಸಗಿ ಆಸ್ಪತ್ರೆಯೊಳಗೆ. ಅವರನ್ನು ಅಲ್ಲಿಂದ ಹೊರಗೆ ತರಲು ಪೊಲೀಸರು ಅಲ್ಲಿ ಪ್ರವೇಶ ಮಾಡಬೇಕಾಯಿತು. ಒಟ್ಟಿನಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ ಪ್ರತಿಭಟನಾಕಾರರಲ್ಲಿ ಇಬ್ಬರು ಸತ್ತಿದ್ದಾರೆ. ಅವರಿಗೆ ಬಿಜೆಪಿ ಸರಕಾರ ತಲಾ ಹತ್ತು ಲಕ್ಷ ರೂಪಾಯಿ ನೀಡಿದೆ.
ಇಲ್ಲಿ ಬಿಜೆಪಿ ಸರಕಾರ ಅಲ್ಪಸಂಖ್ಯಾತರನ್ನು ಒಲೈಸಲು ಇಟ್ಟ ಹೆಜ್ಜೆ ಎಂದು ಬಿಜೆಪಿ ಕಾರ್ಯಕರ್ತರು ಮನಸ್ಸು ಗಟ್ಟಿ ಮಾಡಿ ಒಪ್ಪಿಕೊಳ್ಳಬೇಕು. ಯಾಕೆಂದರೆ ಇದೇ ಬಿಜೆಪಿ ಕಳೆದ ಬಾರಿ ಕಾಂಗ್ರೆಸ್ ಸರಕಾರ ಇದ್ದಾಗ ಕಬೀರ್ ಎನ್ನುವ ವ್ಯಕ್ತಿ ಅಕ್ರಮ ದನಸಾಗಾಟ ಮಾಡುವಾಗ ಪೊಲೀಸರ ಮೇಲೆ ಕಲ್ಲು ಬಿಸಾಡಲು ಹೋಗಿ ಆತ್ಮರಕ್ಷಣೆಗೆ ಪೊಲೀಸರು ಶೂಟೌಟ್ ಮಾಡಿದಾಗ ಮೃತಪಟ್ಟಿದ್ದ. ಆವತ್ತು ಕಾಂಗ್ರೆಸ್ ಸರಕಾರ ಕಬೀರನಿಗೆ ಹತ್ತು ಲಕ್ಷ ಪರಿಹಾರ ನೀಡಿತ್ತು. ಅದನ್ನು ಬಿಜೆಪಿ ವಿರೋಧಿಸಿತ್ತು. ಯಾಕೆ ಕೊಟ್ಟಿದ್ದೀರಿ ನಮ್ಮ ತೆರಿಗೆಯ ಹಣ ಒಬ್ಬ ದನಕಳ್ಳನಿಗೆ ಎಂದು ಪ್ರಚಾರ ಮಾಡಲಾಗಿತ್ತು. ಆದರೆ ಈಗ? ಮುಖ್ಯಮಂತ್ರಿ ಯಡಿಯೂರಪ್ಪನವರೇ, ನಿಮಗೆ ಬಹುಮತ ಇದೆಯಲ್ಲ, ಯಾರು ಸಾರ್ವಜನಿಕ ಸೊತ್ತುಗಳನ್ನು ನಾಶ ಮಾಡಿದ್ದಾರೆ, ನೋಡಿ ಅವರಿಂದಲೇ ಅದನ್ನು ವಸೂಲಿ ಮಾಡಿಕೊಳ್ಳಿ. ಇದೇನು ವಿಚಿತ್ರವಲ್ಲ. ನಿಮ್ಮ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅದನ್ನೇ ಮಾಡುತ್ತಿದ್ದಾರೆ. ಬೆಂಕಿ ಕೊಟ್ಟವರಿಂದಲೇ ಆ ನಾಶವಾದ ವಸ್ತುಗಳ ಹಣವನ್ನು ವಸೂಲಿ ಮಾಡುತ್ತಿದ್ದಾರೆ. ಯಡಿಯೂರಪ್ಪನವರೇ, ಪೊಲೀಸರಿಗೆ ಫೈರಿಂಗ್ ಮಾಡಬೇಕಾದ ಪರಿಸ್ಥಿತಿ ಬಂತು ಎಂದರೆ ಅದಕ್ಕೆ ಅವರ ಬಳಿ ಕಾರಣಗಳಿರುತ್ತವೆ. ನೀವು ಸತ್ತವರಿಗೆ ಹತ್ತು ಲಕ್ಷ ಕೊಟ್ಟರೆ ಆಗ ಪೊಲೀಸರು ಮಾಡಿದ್ದು ಅಪರಾಧ ಎಂದು ಒಪ್ಪಿಕೊಂಡಂತೆ ಆಗುತ್ತದೆ. ಇದರಿಂದ ಪ್ರತಿಭಟನಾಕಾರರಿಗೆ ಇನ್ನಷ್ಟು ಧೈರ್ಯ ಬರುತ್ತದೆ. ಅದರಿಂದ ಪೊಲೀಸರ ಮೇಲೆ ಮಾನಸಿಕ ಒತ್ತಡ ಬಿದ್ದಂತೆ ಆಗುತ್ತದೆ. ಅವರು ಮುಂದಿನ ಬಾರಿ ಪ್ರತಿಭಟನೆ ಕೈ ಮೀರಿ ಹೋದರೂ, ತಮ್ಮ ಮೇಲೆ ನಿರಂತರ ಕಲ್ಲು ಬಿದ್ದರೂ ಕೈಕಟ್ಟಿ ಕುಳಿತುಕೊಳ್ಳುತ್ತಾರೆ. ಇದರಿಂದ ಅಪಾಯ ಯಾರಿಗೆ? ಯಾಕೋ, ಯಡಿಯೂರಪ್ಪನವರು ನಾವು ಎಲ್ಲ ಪಕ್ಷದವರು ಒಂದೇ ಲೆಕ್ಕ ಎಂದು ಹೇಳಿಕೊಂಡ ಹಾಗೆ ಆಗಿದೆ!
0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Hanumantha Kamath January 10, 2026
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Hanumantha Kamath January 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
  • Popular Posts

    • 1
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • 2
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 3
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 4
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?

  • Privacy Policy
  • Contact
© Tulunadu Infomedia.

Press enter/return to begin your search