• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತಂದೆಯ ಹೆಸರು ಗೊತ್ತಿಲ್ಲದೇ ಚುನಾವಣೆಗೆ ಹೇಗೆ ನಿಂತ್ರಿ ಸಿದ್ಧು, ಜಮೀರ್!!

Hanumantha Kamath Posted On January 12, 2020


  • Share On Facebook
  • Tweet It

ನನ್ನ ಮನೆಗೆ ಬರಬೇಡಿ, ನನ್ನ ತಂದೆಯ ಹೆಸರು ಕೇಳಬೇಡಿ, ನಾನು ಯಾವುದೇ ಮಾಹಿತಿ ಕೊಡುವುದಿಲ್ಲ ಎನ್ನುವ ಸ್ಟಿಕ್ಕರ್ ಗಳನ್ನು ಉಳ್ಳಾಲದ ಮನೆಗಳಲ್ಲಿ ಅಂಟಿಸಲಾಗುತ್ತಿದೆ. ಅನೇಕ ಕಡೆ ನಿಮ್ಮ ಮನೆಗೆ ಯಾರಾದರೂ ಸರಕಾರಿ ಅಧಿಕಾರಿಗಳು ಬಂದರೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿ ಎಂದು ಸೂಚನೆ ಕೊಡಲಾಗುತ್ತಿದೆ. ಈ ಮೂಲಕ ಜನರ ನಡುವೆ ಕಂದಕ ಸೃಷ್ಟಿಸುವ ಕೆಲಸವನ್ನು ಮಾಡಲಾಗುತ್ತಿದೆ. ಇದು ಒಂದು ರೀತಿಯಲ್ಲಿ ಸರಕಾರದ ವಿರುದ್ಧ ಮಾಡುತ್ತಿರುವ ಷಡ್ಯಂತ್ರ ಎನ್ನದೇ ಬೇರೆ ಏನು ಹೇಳುವುದು. ಮನೆಗೆ ಬರುವ ಅಧಿಕಾರಿಗಳ ಬಳಿ ಬೇಕಾದರೆ ಅವರು ಸರಕಾರಿ ಅಧಿಕಾರಿಗಳು ಹೌದಾ ಅಲ್ವಾ ಎಂದು ಪರಿಶೀಲಿಸಿ ನಂತರ ದಾಖಲೆ ಕೊಡಲಿ. ಯಾಕೆಂದರೆ ಸರಕಾರಿ ಅಧಿಕಾರಿಗಳ ಹೆಸರಿನಲ್ಲಿ ಯಾರಾದರೂ ಬಂದು ನಿಮ್ಮ ಬಳಿ ಯಾವುದೇ ಮಾಹಿತಿ ಕೇಳಿದರೆ ಆಗ ನಿಮಗೆ ಅದು ತೊಂದರೆ ಆಗಬಹುದು. ಆದರೆ ಸರಕಾರದ ಪರವಾಗಿ ನಿಯೋಜಿಸಲ್ಪಟ್ಟವರು ನಿಜವಾಗಿಯೂ ಮಾಹಿತಿ ಕೇಳಿದರೆ ಕೊಡಬೇಕಾದ್ದದ್ದು ನಮ್ಮ ಕರ್ತವ್ಯ. ಯಾಕೆಂದರೆ ಕೇವಲ ಒಂದು ಧರ್ಮದವರ ಬಳಿ ಮಾತ್ರ ದಾಖಲೆ ಕೇಳುವಂತಹ ಕ್ರಮ ಸರಕಾರ ಮಾಡುತ್ತಿಲ್ಲ.

ಇಷ್ಟು ವಿರೋಧ ಮಾಡುವುದು ಸಾಕಾಗುವುದಿಲ್ಲ ಎಂದು ಮುಂದಿನ ವಾರ ಅಡ್ಯಾರ್ ಬಳಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿ ಘೋಷಣೆ ಮಾಡಿದೆ. ಇದು ಇನ್ನೊಂದು ಗಲಭೆಗೆ ಕಾರಣವಾದರೆ ಮಂಗಳೂರನ್ನು ರಕ್ಷಿಸುವವರ್ಯಾರು? ಬೇಕಾದರೆ ಸಿಎಎ ಬಗ್ಗೆ, ಎನ್ ಆರ್ ಸಿ ಬಗ್ಗೆ ಸೂಕ್ತ ಮಾಹಿತಿ ಇದ್ದವರನ್ನು ಕರೆದು ಜನಜಾಗೃತಿ ಮಾಡಿಸುವ ಕೆಲಸವನ್ನು ಅಡ್ಯಾರ್ ನಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿಯವರು ಮಾಡಲಿ. ಅಲ್ಲಿ ಆರುಂಧತಿ ರಾಯ್ ಅಂತವರು ಬಂದು ಮನೆಯ ವಿಳಾಸ, ತಂದೆಯ ಹೆಸರು ಏನೇನೋ ತಪ್ಪು ಹೇಳಿ ಎಂದು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಿದರೆ ದೇಶ ಮತ್ತೊಂದು ಆಂತರಿಕ ಸಮರ ಎದುರಿಸಬೇಕಾಗುತ್ತದೆ. ಇತ್ತ ಸಿದ್ಧರಾಮಯ್ಯನವರು ತಮ್ಮ ಬಳಿ ತಂದೆ ಹೆಸರು ಕೇಳಿದರೆ ಗೊತ್ತಿಲ್ಲ ಎನ್ನುತ್ತೇನೆ ಎಂದು ಹೇಳಿ ಜನರಲ್ಲಿ ಉದ್ರೇಕಿಸುವ ಕೆಲಸ ಮಾಡುತ್ತಿದ್ದಾರೆ. ಅತ್ತ ಜಮೀರ್ ನನ್ನ ತಾಯಿಗೆ ನಾಲ್ಕು ಗಂಡಂದಿರು ತಲಾಕ್ ನೀಡಿದ್ದಾರೆ. ಆದ್ದರಿಂದ ನಾನು ಯಾರ ಮಗ ಎಂದು ಹೇಗೆ ಗೊತ್ತಾಗುವುದು ಎಂದಿದ್ದಾರೆ. ಹಾಗಾದರೆ ಇಲ್ಲಿ ಒಂದು ವಿಷಯ ಬರುತ್ತದೆ. ಅದೇನೆಂದರೆ ಚುನಾವಣೆಯ ಸಂದರ್ಭದಲ್ಲಿ ಸ್ಪರ್ಧಿಸುವಾಗ ಇವರು ತಮ್ಮ ತಂದೆಯ ಹೆಸರು ಹೇಳಲಿಲ್ಲವೇ. ಹಾಗಾದರೆ ಈಗ ಗೊತ್ತಿಲ್ಲ ಎನ್ನುವುದು ಯಾಕೆ?

ಇದರ ನಡುವೆ ಉರಿಯುವ ಬೆಂಕಿಗೆ ಸರಿಯಾಗಿ ತುಪ್ಪ ಸುರಿಯುವ ಕೆಲಸವನ್ನು ಕುಮಾರಸ್ವಾಮಿಯವರು ಮಾಡಿದ್ದಾರೆ. ಯಾವುದೋ ವಿಡಿಯೋ ತಂದು ತಾವೇನೋ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಹೇಳುತ್ತಿದ್ದಾರೆ. ಬಹುಶ: ದಕ್ಷಿಣ ಕನ್ನಡದಲ್ಲಿ ಅಕೌಂಟ್ ತೆರೆಯುವ ಮನಸ್ಸು ಇರಬಹುದು. ಆದರೆ ಕನಿಷ್ಟ ಗ್ರಾಮ ಪಂಚಾಯತ್ ನಲ್ಲಿಯಾದರೂ ಗೆಲ್ಲುವ ಪರಿಸ್ಥಿತಿಯನ್ನು ಜೆಡಿಎಸ್ ಕಳೆದು ಹಲವಾರು ವರ್ಷಗಳೇ ಆಗಿ ಹೋಗಿದೆ. ತಾವು ನಿರ್ಮಿಸಿದ ಮಗನ ಸಿನೆಮಾಗಳು ಫ್ಲಾಪ್ ಆಗುವಂತೆ ಈ ಸಿಡಿ ಕೂಡ ಫ್ಲಾಪ್ ಆಗಿದೆ!!

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Hanumantha Kamath May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Hanumantha Kamath May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search