• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆದಿತ್ಯನಿಗೆ ಬಾಂಬ್ ಇಡಲು ಮೈಂಡ್ ವಾಶ್ ಆಗಿರಲಿಲ್ಲ, ಆದ್ದರಿಂದ…!

Hanumantha Kamath Posted On January 22, 2020
0


0
Shares
  • Share On Facebook
  • Tweet It

ಕೊನೆಗೂ ಆದಿತ್ಯ ರಾವ್ ಎನ್ನುವ ವ್ಯಕ್ತಿ ಬೆಂಗಳೂರಿನ ಪೊಲೀಸರಿಗೆ ಶರಣಾಗುವುದರೊಂದಿಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಸಿಕ್ಕಿದ ಪ್ರಕರಣ ಸುಖಾಂತ್ಯ ಕಂಡಿದೆ. ಈಗ ಎದ್ದಿರುವ ಪ್ರಶ್ನೆ ಏನೆಂದರೆ ಅವನು ಹಿಂದೂ ಭಯೋತ್ಪಾದಕ ಎಂದು ಕೆಲವರು ಹೊಸ ವರಸೆಯೊಂದನ್ನು ಸೃಷ್ಟಿ ಮಾಡುತ್ತಿದ್ದಾರೆ. ಇನ್ನು ಕೆಲವರು ಬಿಜೆಪಿಯ ಸಾಮಾಜಿಕ ಜಾಲತಾಣದ ಯುವಕ ಸಂದೀಪ್ ಲೋಬೋ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾಗಿರುವ ಕಲ್ಲಡ್ಕ ಪ್ರಭಾಕರ ಭಟ್ ಅವರೊಂದಿಗೆ ಸಂದೀಪ್ ಇರುವ ಫೋಟೋ ವೈರಲ್ ಮಾಡಿ ಸಂಘಕ್ಕೂ ಆದಿತ್ಯನಿಗೂ ಲಿಂಕ್ ಕಲ್ಪಿಸುತ್ತಿದ್ದಾರೆ. ಸಂದೀಪ್ ಲೋಬೋ ಹಾಗೂ ಆದಿತ್ಯ ಒಬ್ಬರೇ ಅಲ್ಲ.

ಇಲ್ಲಿ ಒಂದು ವಿಚಾರ ಸ್ಪಷ್ಟಪಡಿಸಿಕೊಳ್ಳೋಣ. ಅವನು ಹಿಂದೂ ಭಯೋತ್ಪಾದಕ ಎನ್ನುವವರಿಗೆ ನನ್ನ ಪ್ರಶ್ನೆ ಹೀಗಿದೆ. ಏನೆಂದರೆ ಆದಿತ್ಯನಿಗೆ ಬಾಂಬ್ ಇಡಲು ಎಲ್ಲಿಯೂ ಯಾವ ದೇವಸ್ಥಾನದಲ್ಲಿಯೂ ಮೈಂಡ್ ವಾಶ್ ಮಾಡಿಲ್ಲ. ಅವನು ಬಾಂಬ್ ಇಡಲು ಅವನಿಗೆ ಅವನ ಧರ್ಮದ ಕೆಲವು ಧರ್ಮಭೋದಕರು ಎಲ್ಲಿಯೂ ಭೋದನೆ ಮಾಡಿಲ್ಲ. ನೀನು ಬಾಂಬ್ ಇಟ್ಟರೆ ನಿನಗೆ ಪರಲೋಕದಲ್ಲಿ 72 ಸಾವಿರ ಅಪ್ಸರೆಯರು ಸಿಗುತ್ತಾರೆ ಎಂದು ಆಸೆ ಹುಟ್ಟಿಸಲಿಲ್ಲ. ನೀನು ಬಾಂಬ್ ಇಡು, ನಿನಗೆ ವಿದೇಶದಿಂದ ಹಣ ಕೊಡಿಸುವ ಆಸೆ ಹುಟ್ಟಿಸಲಿಲ್ಲ. ನೀನು ಬಾಂಬ್ ಇಟ್ಟು ಸತ್ತಾಗ ನಿನ್ನ ಕುಟುಂಬದವರಿಗೆ ಹಣ ಕೊಡುತ್ತೇವೆ ಎಂದು ಯಾರೂ ಅವನಿಗೆ ಹೇಳಿಲ್ಲ. ಅವನು ವಾಸವಿದ್ದ ಕೋಣೆಗೆ ಹೋದರೆ ಅಲ್ಲಿ ಯಾವುದೇ ಧರ್ಮದ ವಿರುದ್ಧದ ಯಾವುದೇ ಪುಸ್ತಕ, ಪೋಸ್ಟರ್, ಸಿಡಿ ಸಿಗುವುದಿಲ್ಲ. ಅವನು ಪಾಕಿಸ್ತಾನದಲ್ಲಿರುವ ಯಾರೊಂದಿಗೂ ಫೋನಿನಲ್ಲಿ ಮಾತನಾಡಿಲ್ಲ. ಅವನು ಮುಸ್ಲಿಮರ ವಿರುದ್ಧ ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿಲ್ಲ. ಕೊನೆಯದಾಗಿ ಅವನಿಗೂ ಕೇಸರಿ ಸಂಘಟನೆಗಳಿಗೂ ದೂರದೂರಕ್ಕೂ ಯಾವುದೇ ಸಂಬಂಧವಿಲ್ಲ. ಇನ್ನು ಅಕ್ಷರಶ: ಅವನಿಗೆ ಬಾಂಬ್ ಇಡಲು ಹೋಗುವಾಗ ತನ್ನ ಧರ್ಮ ಬಿಟ್ಟು ಉಳಿದವರು ಕಾಫೀರರು ಎಂದು ಪಠಿಸುವ ಅಗತ್ಯವೇ ಬಂದಿರಲಿಲ್ಲ. ಇಷ್ಟೆಲ್ಲ ಆದ ಮೇಲೆ ಆದಿತ್ಯ ರಾವ್ ಎನ್ನುವ ವ್ಯಕ್ತಿಯನ್ನು ಹಿಂದೂ ಭಯೋತ್ಪಾದಕ ಎನ್ನುವುದು ಯಾವ ಕಾರಣಕ್ಕೆ.

ಆತ ಎಂಬಿಎ ಪದವಿಧರ. ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದ. ಎರಡು ವರ್ಷದಿಂದ ಮನೆಯಿಂದ ಹೊರಗೆ ಇದ್ದ. ಮೆಕಾನಿಕಲ್ ಇಂಜಿನಿಯರ್ ಕೂಡ ಕಲಿತಿದ್ದಾನೆ. ಎಲ್ಲಕ್ಕಿಂತ ಹೆಚ್ಚಾಗಿ ಅವನಿಗೆ ಧರ್ಮದ ಅಮಲು ತಲೆಗೆ ಹೋಗಿಲ್ಲ. ಅವನು ಬಾಂಬ್ ಇಡುವಾಗ ಅವನ ಹಿಂದೆ ಅವನಿಗೆ ಧರ್ಮದ ನೆರಳು ಇರಲೇ ಇಲ್ಲ. ಆದ್ದರಿಂದ ಅವನನ್ನು ಬೇಕಾದರೆ ಉಗ್ರ ಎಂದು ಕರೆಯಲಿ. ಆದರೆ ಹಿಂದೂ ಉಗ್ರ ಎನ್ನುವ ಹಣೆಪಟ್ಟಿ ಅವನಿಗೆ ಅನ್ವಯಿಸಲ್ಲ. ಒಂದು ವೇಳೆ ತನ್ನ ಧರ್ಮ ವಿಸ್ತರಿಸಲು ಬೇರೆ ಧರ್ಮದ ಅವನತಿಗೆ ಅವನು ಮೈಂಡ್ ವಾಶ್ ಒಳಗಾಗಿ ಹೀಗೆ ಮಾಡಿದ್ದರೆ ಅವನನ್ನು ಏನೂ ಬೇಕಾದರೂ ಹೇಳಬಹುದಿತ್ತು. ಆದರೂ ಈಗ ನಾನು ಹೇಳುವುದೇನೆಂದರೆ ಅವನು ತಪ್ಪು ಮಾಡಿರುವುದರಿಂದ ಅವನನ್ನು ಗಲ್ಲಿಗೇರಿಸಿದರೂ ಯಾವ ಹಿಂದೂ ಕೂಡ ಬೇಸರ ಮಾಡಲ್ಲ. ಅವನು ಈಗ ಮಾಡಿರುವುದು ಅವನ ಹುಚ್ಚಾಟಿಕೆ ಹೊರತು ಧರ್ಮದ ಅಮಲು ಏರಿ ಅಲ್ಲ. ಅವನು ಮಾಡಿರುವ ಕೃತ್ಯದಿಂದ ಅವನ ಕುಟುಂಬದವರನ್ನು ಕೂಡ ಸೇರಿಸಿ ಯಾರೂ ತಲೆತಗ್ಗಿಸಬೇಕಾಗಿಲ್ಲ.

ಯಾಕೆಂದರೆ ಅವನು ತನ್ನ ತಾಯಿಯ ಅಂತ್ಯ ಸಂಸ್ಕಾರಕ್ಕೂ ಮನೆಗೆ ಬಂದಿರಲಿಲ್ಲ ಎಂದು ಅವನ ಸಹೋದರ ಹೇಳಿದ್ದಾರೆ. ತಲೆಯನ್ನು ಯಾವಾಗಲೂ ಬೋಳಿಸಿದಂತೆ ಇರುತ್ತಿದ್ದ ಆದಿತ್ಯ ಯಾವ ಮಟ್ಟಿಗಿನ ಮೆಂಟಲ್ ಎಂದರೆ ಇಲ್ಲಿ ಬಾಂಬ್ ಇಟ್ಟು ನಂತರ ಇಲ್ಲಿಂದ ಲಾರಿ ಹತ್ತಿ ಬೆಂಗಳೂರು ತನಕ ಪ್ರಯಾಣಿಸಿ ನಂತರ ಅಲ್ಲಿ ಹಲಸೂರು ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ. ಅವನು ಹಿಂದೂ ಧರ್ಮದಲ್ಲಿ ಹುಟ್ಟಿದ್ದು ಆಕಸ್ಮಿಕ. ಬಾಂಬ್ ಇಟ್ಟಿದ್ದು ನಿಶ್ಚಿತ. ಆದರೆ ಅವನಿಗೆ ಬಾಂಬ್ ಇಡಲು ಮನಸ್ಥಿತಿ ಬರುವಂತಹ ಸಂದರ್ಭ ಏರ್ಪಡುವುದಕ್ಕೂ ಆತನ ಧರ್ಮಕ್ಕೂ ಸಂಬಂಧವೇ ಇಲ್ಲ. ಈಗಾಗಲೇ ಡಿಸಿಪಿ ವಿನಯ್ ಗಾಂವ್ಕರ್ ಹಾಗೂ ಎಸಿಪಿ ಬೆಳಿಯಪ್ಪ ಅವನನ್ನು ಮಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ. ಹಿಂದೆ ಹುಸಿ ಬಾಂಬ್ ಕರೆ ಮಾಡಿ ಜೈಲಿನಲ್ಲಿದ್ದ ಅನುಭವ ಆದಿತ್ಯನಿಗೆ ಇದೆ. ಈಗ ಮತ್ತೆ ಇರಲಿದ್ದಾನೆ. ಪದೇ ಪದೇ ಅವನು ಹೀಗೆ ಮಾಡುತ್ತಿರುವುದರಿಂದ ಒಂದಷ್ಟು ಸ್ಪಷ್ಟ, ಅವನು ಪಕ್ಕಾ ಮೆಂಟಲ್!

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Hanumantha Kamath February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Hanumantha Kamath January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search