• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಒಂಭತ್ತುಕೆರೆಯಲ್ಲಿ ಕಟ್ಟಲಾಗಿರುವ ಮನೆಗಳಿಗಿಂತ ಖಾದರ್ ಮನೆಯ ಶೌಚಾಲಯ ದೊಡ್ಡದಿರಬಹುದು!

Hanumantha Kamath Posted On February 3, 2020


  • Share On Facebook
  • Tweet It

ಪಾಪದವರಿಗಾದರೆ ಹೇಗೆ ಬೇಕಾದರೂ ಮನೆ ಕಟ್ಟಬಹುದು. ಅದು ಹಿಂದಿನ ಕಾಲದಲ್ಲಿ ಇದ್ದಂತಹ ಟೆಲಿಫೋನ್ ಬೂತ್ ನಷ್ಟೇ ದೊಡ್ಡದಾಗಿದ್ದರೂ ಪರವಾಗಿಲ್ಲ ಎಂದು ಯು.ಟಿ.ಖಾದರ್ ಯೋಚಿಸಿದಂತಿದೆ. ಅದಕ್ಕಾಗಿ ಅವರು ತಮ್ಮ ತಂದೆಯ ಕಾಲದಲ್ಲಿ ಕಟ್ಟಿ ಇವತ್ತಿಗೂ ವಿಲೇವಾರಿಯಾಗದ, ಒಂದು ಜೋರು ಮಳೆ ಬಿದ್ದರೆ ದೊಪ್ಪನೆ ತಲೆಯ ಮೇಲೆ ಬೀಳಲು ಅಣಿಯಾಗಿರುವ ಒಂಭತ್ತುಕೆರೆ ಪರ ವಾದವನ್ನು ಮಂಡಿಸುತ್ತಾ ಸುದ್ದಿಗೋಷ್ಟಿ ಮಾಡಿ ಕೈ ತೊಳೆದುಕೊಂಡಿದ್ದಾರೆ. ಒಂಭತ್ತು ಕೆರೆ ಪ್ರದೇಶದಲ್ಲಿದ್ದ ದಟ್ಟವಾದ ಕಾಡುಗಳನ್ನು ಕಡಿದು, ಹಲವಾರು ಔಷಧಿಯ ಸಸ್ಯಗಳನ್ನು ನಾಶ ಮಾಡಿ ಹಂದಿಗೂಡುಗಳಂತಿರುವ ಮನೆಗಳನ್ನು ನಿರ್ಮಿಸಿರುವುದು ನಿಮಗೆ ಗೊತ್ತೆ ಇರಬಹುದು. ಬಡವರಿಗೆ ಮನೆ ಕಟ್ಟಿ ಕೊಡಲು ಯಾರೂ ವಿರೋಧ ಮಾಡುವುದಿಲ್ಲ. ಆದರೆ ಬಡವರು ಎನ್ನುವ ಕಾರಣಕ್ಕೆ ಹೇಗೆ ಬೇಕಾದರೂ ಕಟ್ಟಿ ಕೊಡಬಹುದು. ವಾಸಿಸಲು ಯೋಗ್ಯವಾಗಿದೆಯಾ ಎಂದು ನೋಡುವ ಅವಶ್ಯಕತೆ ಇಲ್ಲ ಎಂದು ಆಗಿನ ಶಾಸಕ ಯುಟಿ ಫರೀದ್ ಅವರು ಅಂದುಕೊಂಡಿದ್ದಾರಾ? ಅವೈಜ್ಞಾನಿಕವಾದ ಕಾಮಗಾರಿ, ಕಳಪೆ ಕಾಮಗಾರಿಯ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯವಿಲ್ಲದೆ ಇರುವ 390 ಮನೆಗಳನ್ನು ನೋಡದೇ ಟ್ರಾಲ್ ಮಾಡುವುದು ಸರಿಯಲ್ಲ ಎಂದು ಶಾಸಕ ಖಾದರ್ ಹೇಳುತ್ತಾರೆ. ಟ್ರಾಲ್ ಮಾಡಿದವರ ಪರವಾಗಿ ನಾನು ಬರೆಯುತ್ತಿಲ್ಲ. ಆದರೆ ಅಂಗೈ ಹುಣ್ಣಿಗೆ ಕನ್ನಡಿ ಬೇಕಾ ಎನ್ನುವಂತೆ ಟ್ರಾಲ್ ನಡೆದಿರುವುದರಿಂದ 19 ವರ್ಷಗಳ ಹಿಂದಿನ ಪ್ರಕರಣ ಮತ್ತು ಪೋಲಾಗಿರುವ ನಮ್ಮ ತೆರಿಗೆಯ ಹಣದ ಬಗ್ಗೆ ನಾವು ಮಾತನಾಡದೆ ಇನ್ಯಾರು ಮಾತನಾಡುವುದು ಖಾದರ್ ಸಾಹೇಬ್ರೆ.

ಇನ್ನೊಂದು ವಿಷಯ ಏನೆಂದರೆ ಅಲ್ಲಿ ಒಳಚರಂಡಿ ನಿರ್ಮಾಣವಾಗದೇ ಮನೆಯನ್ನು ಹಂಚಬಾರದು ಎಂದು ಸ್ಥಳೀಯರು ನ್ಯಾಯಾಲಯದ ಮೊರೆ ಹೋಗಿರುವುದು ನಿಜ. ಅದನ್ನೇ ಪ್ರತಿ ಬಾರಿ ಖಾದರ್ ಅವರು ಪ್ರಕರಣ ನ್ಯಾಯಾಲಯದಲ್ಲಿದೆ. ನಾವೇನೂ ಮಾಡಲು ಆಗುವುದಿಲ್ಲ ಎಂದು ಹೇಳುತ್ತಾ ಬಂದಿದ್ದಾರೆ. ಆದರೆ ನ್ಯಾಯಾಲಯಕ್ಕೆ ಪ್ರಕರಣ ಯಾಕೆ ಹೋಯಿತು ಎನ್ನುವುದನ್ನು ಯಾಕೆ ಅವರು ಹೇಳುತ್ತಿಲ್ಲ. ಈ ಒಂಭತ್ತುಕೆರೆಯಲ್ಲಿ ವಸತಿ ಕಾಲೋನಿ ನಿರ್ಮಾಣವಾಗಿರುವ ಪ್ರದೇಶ ಎತ್ತರದಲ್ಲಿದೆ. ಅದರ ಸನಿಹದ ತಗ್ಗುಪ್ರದೇಶದಲ್ಲಿ 50 ಮೀಟರ್ ನಿಂದ 60 ಮೀಟರ್ ಅಂತರದಲ್ಲಿ ಒಂಭತ್ತು ಕೆರೆಗಳು ಇವೆ. ವಸತಿ ಕಾಲೋನಿ ಇರುವ ಪ್ರದೇಶ ಮುರಕಲ್ಲಿನ ಪ್ರದೇಶವಾಗಿದ್ದು ಅದು ರಂಧ್ರಯುಕ್ತವಾಗಿದೆ. ಇದರ ತಳದಲ್ಲಿ ಶೇಡಿ ಇರುವುದರಿಂದ ಜನವಸತಿ ಪ್ರಾರಂಭವಾದ ನಂತರ ಅಲ್ಲಿನ ತ್ಯಾಜ್ಯ ಹರಿದು ಬಂದು ನೇರ ಕೆರೆಗಳಿಗೆ ಸಂಪರ್ಕವಾಗಲಿದೆ. ಇದನ್ನು ಹೇಳುತ್ತಿರುವುದು ಯಾವುದೇ ಸಾಮಾನ್ಯ ವ್ತಕ್ತಿಗಳೂ ಅಲ್ಲ. ಬಿಜೆಪಿ ಮುಖಂಡರೂ ಅಲ್ಲ. ಟ್ರಾಲ್ ಮಾಡುವವರು ಅಲ್ಲ. ಇದನ್ನು ಹೇಳಿರುವುದು ಗಣಿ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಂತರ್ಜಲ ವಿಭಾಗದ ಹಿರಿಯ ಅಧಿಕಾರಿಗಳು. ಅದು ತಪ್ಪಬೇಕಾದರೆ ವಸತಿ ಕಾಲನಿಗೆ ನೆಲದಡಿಯಲ್ಲಿಯೇ ಒಳಚರಂಡಿಯನ್ನು ನಿರ್ಮಿಸಬೇಕು ಎಂದು ವಿಜ್ಞಾನಿಗಳೇ ಸಲಹೆ ಕೊಟ್ಟಿದ್ದಾರೆ.

ಇನ್ನು ವಸತಿ ಕಾಲೋನಿ ನಿರ್ಮಾಣವಾದ ಪ್ರದೇಶ ದಟ್ಟವಾದ ಅರಣ್ಯ ಪ್ರದೇಶವಾಗಿದ್ದು, ನಾಗದೇವರ ದೈವಗಳ ಬನಗಳು ಇದ್ದ ಪ್ರದೇಶವಾಗಿದೆ.‌ ಅದನ್ನು ನಾಶ ಮಾಡಿದ್ದರಿಂದ ಅದರ ದೋಷಗಳು ಆ ಭಾಗದ ಜನರಿಗೆ ತಗುಲಿವೆ ಎಂದು ಜ್ಯೋತಿಷ್ಯ ತಜ್ಞರು ಹೇಳಿದ್ದಾರೆ. ನೂರಾರು ನಾಗಬನಗಳು ನಾಶವಾಗಿರುವುದರಿಂದ ದೇವರ ಪವಿತ್ರವಾದ ಕೆರೆಗಳಿಗೆ ಬರುತ್ತಿರುವ ನೀರಿನ ಮೂಲ ಕೂಡ ತೊಂದರೆಗೆ ಒಳಗಾಗಿವೆ. ಇಲ್ಲಿ ಕೊಳಚೆಗೇರಿ ನಿರ್ಮಾಣವಾದರೆ ಅದು ಭವಿಷ್ಯದಲ್ಲಿ ಕೆರೆಗಳು ಸಂಪೂರ್ಣ ನಾಶವಾಗಿ ಜನರ ಧಾರ್ಮಿಕ ಭಾವನೆಗಳಿಗೆ ಕೂಡ ದಕ್ಕೆ ತರಬಹುದು. ಅಲ್ಲಿನ ಮಣ್ಣಿನ ಗುಣಮಟ್ಟ, ನೀರಿನ ಝರಿಗಳನ್ನು ಅವಲೋಕಿಸಿದಾಗ ಸದರಿ ವಸತಿ ಕಾಲೋನಿಗಳನ್ನು ಅಲ್ಲಿ ಕಟ್ಟಿದ್ದೇ ತಪ್ಪು ಎನ್ನುವುದು ಎಲ್ಲಾ ಆಯಾಮಗಳಲ್ಲಿ ಗೊತ್ತಾಗುತ್ತಿದೆ!

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Hanumantha Kamath May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Hanumantha Kamath May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search