• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು MDMA ಹೊಂದಿದ ಆರೋಪಿಗಳ ಸೆರೆ!

Tulunadu News Posted On February 10, 2020
0


0
Shares
  • Share On Facebook
  • Tweet It

ಮಂಗಳೂರು : ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ (Methylene dioxy methamphetamine) MDMA ಮುಂಬೈಯಿಂದ ಖರೀದಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಇಕಾನಾಮಿಕ್ & ನಾರ್ಕೋಟಿಕ್ ಠಾಣೆಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿರುತ್ತಾರೆ

ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ (Methylene dioxy methamphetamine) MDMA ವನ್ನು ಮುಂಬೈಯಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿಗೆ ಐಷಾರಾಮಿ ಕಾರೊಂದರಲ್ಲಿ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಬಳಿ ಕಾರನ್ನು ತಪಾಸಣೆ ಮಾಡಿದಾಗ (Methylene dioxy methamphetamine) MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ

1. ಮೊಹಮ್ಮದ್ ಶರೀಫ್ ಸಿದ್ದಿಕ್, ಪ್ರಾಯ(40), ತಂದೆ: ಪಿ ಮೊಹಮ್ಮದ್, ವಾಸ: ಸೈಟ್ ನಂಬ್ರ: 151/2, ಚೊಕ್ಕಬೆಟ್ಟು, ಸುರತ್ಕಲ್, ಮಂಗಳೂರು.

2. ಮೊಹಮ್ಮದ್ ಶಾಫಿ @ ಚಪ್ಪಿ, ಪ್ರಾಯ(33), ತಂದೆ: ದಿ: ಅಬ್ದುಲ್ ಖಾದರ್, ವಾಸ: ಡೋರ್ ನಂಬ್ರ: ಜಿಎಲ್-2/478, 2 ನೇ ಬ್ಲಾಕ್, ಕಾಟಿಪಳ್ಳ, ಸುರತ್ಕಲ್, ಮಂಗಳೂರು.

3. ಮೊಹಮ್ಮದ್ ಅನಾಸ್,, ಪ್ರಾಯ(27), ತಂದೆ: ಅಹಮ್ಮದ್, ವಾಸ: 3-48, 2 ನೇ ಬ್ಲಾಕ್, ಕಾಟಿಪಳ್ಳ, ಜುಮ್ಮಾ ಮಸೀದಿ ಬಳಿ, ಕೈಕಂಬ ಅಂಚೆ, ಮಂಗಳೂರು.

ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರಿಂದ ರೂ. 87,560/- ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು, 3 ಮೊಬೈಲ್ ಫೋನ್ ಗಳು, ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಐಷಾರಾಮಿ ಬಿಎಂಡಬ್ಲೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್ ಗಳು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಬಿಎಂಡಬ್ಲೂ ಕಾರಿನ ಒಟ್ಟು ಮೌಲ್ಯ 51,12,560/- ಲಕ್ಷ ಆಗಬಹುದು. ಆರೋಪಿಗಳು ಮುಂಬೈಯಿಂದ ಅಕ್ರಮವಾಗಿ ಮಾದಕ ವಸ್ತುಗಳನ್ನು ಖರೀದಿಸಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಹಣ ಗಳಿಸಲು ಮಂಗಳೂರು ಕಡೆಗೆ ಬರುತ್ತಿದ್ದರು.

ಆರೋಪಿಗಳ ಪೈಕಿ ಮೊಹಮ್ಮದ್ ಶರೀಫ್ ಸಿದ್ದಿಕ್ ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತುವನ್ನು ಹೊಂದಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಮೊಹಮ್ಮದ್ ಶಾಫಿ @ ಚಪ್ಪಿ ಎಂಬಾತನ ವಿರುದ್ದ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಹೊಂದಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಮೊಹಮ್ಮದ್ ಅನಾಸ್ ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣವೊಂದು ದಾಖಲಾಗಿರುತ್ತದೆ.

ಮಾನ್ಯ ಪೊಲೀಸ್ ಆಯುಕ್ತರಾದ ಡಾ: ಹರ್ಷ ಐ.ಪಿ.ಎಸ್, ಮಾನ್ಯ ಪೊಲೀಸ್ ಉಪ ಆಯುಕ್ತರವರಾದ ಶ್ರೀ ಲಕ್ಷ್ಮಿ ಗಣೇಶ್, (ಅಪರಾಧ & ಸಂಚಾರ), ರವರ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್ ನಾಯ್ಕ್, ಪಿಎಸ್ಐಯವರಾದ ಕಬ್ಬಾಳ್ ರಾಜ್ ಮತ್ತು ಸಿಬ್ಬಂದಿಗಳು ಹಾಗೂ ಎಕಾನಾಮಿಕ್ ಮತ್ತು ನಾರ್ಕೋಟಿಕ್ ಪೊಲೀಸ್ ಠಾಣೆಯ ಪಿಎಸ್ಐ ಲತಾ ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search