• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು MDMA ಹೊಂದಿದ ಆರೋಪಿಗಳ ಸೆರೆ!

Tulunadu News Posted On February 10, 2020
0


0
Shares
  • Share On Facebook
  • Tweet It

ಮಂಗಳೂರು : ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ (Methylene dioxy methamphetamine) MDMA ಮುಂಬೈಯಿಂದ ಖರೀದಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಇಕಾನಾಮಿಕ್ & ನಾರ್ಕೋಟಿಕ್ ಠಾಣೆಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿರುತ್ತಾರೆ

ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ (Methylene dioxy methamphetamine) MDMA ವನ್ನು ಮುಂಬೈಯಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿಗೆ ಐಷಾರಾಮಿ ಕಾರೊಂದರಲ್ಲಿ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಬಳಿ ಕಾರನ್ನು ತಪಾಸಣೆ ಮಾಡಿದಾಗ (Methylene dioxy methamphetamine) MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ

1. ಮೊಹಮ್ಮದ್ ಶರೀಫ್ ಸಿದ್ದಿಕ್, ಪ್ರಾಯ(40), ತಂದೆ: ಪಿ ಮೊಹಮ್ಮದ್, ವಾಸ: ಸೈಟ್ ನಂಬ್ರ: 151/2, ಚೊಕ್ಕಬೆಟ್ಟು, ಸುರತ್ಕಲ್, ಮಂಗಳೂರು.

2. ಮೊಹಮ್ಮದ್ ಶಾಫಿ @ ಚಪ್ಪಿ, ಪ್ರಾಯ(33), ತಂದೆ: ದಿ: ಅಬ್ದುಲ್ ಖಾದರ್, ವಾಸ: ಡೋರ್ ನಂಬ್ರ: ಜಿಎಲ್-2/478, 2 ನೇ ಬ್ಲಾಕ್, ಕಾಟಿಪಳ್ಳ, ಸುರತ್ಕಲ್, ಮಂಗಳೂರು.

3. ಮೊಹಮ್ಮದ್ ಅನಾಸ್,, ಪ್ರಾಯ(27), ತಂದೆ: ಅಹಮ್ಮದ್, ವಾಸ: 3-48, 2 ನೇ ಬ್ಲಾಕ್, ಕಾಟಿಪಳ್ಳ, ಜುಮ್ಮಾ ಮಸೀದಿ ಬಳಿ, ಕೈಕಂಬ ಅಂಚೆ, ಮಂಗಳೂರು.

ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರಿಂದ ರೂ. 87,560/- ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು, 3 ಮೊಬೈಲ್ ಫೋನ್ ಗಳು, ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಐಷಾರಾಮಿ ಬಿಎಂಡಬ್ಲೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್ ಗಳು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಬಿಎಂಡಬ್ಲೂ ಕಾರಿನ ಒಟ್ಟು ಮೌಲ್ಯ 51,12,560/- ಲಕ್ಷ ಆಗಬಹುದು. ಆರೋಪಿಗಳು ಮುಂಬೈಯಿಂದ ಅಕ್ರಮವಾಗಿ ಮಾದಕ ವಸ್ತುಗಳನ್ನು ಖರೀದಿಸಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಹಣ ಗಳಿಸಲು ಮಂಗಳೂರು ಕಡೆಗೆ ಬರುತ್ತಿದ್ದರು.

ಆರೋಪಿಗಳ ಪೈಕಿ ಮೊಹಮ್ಮದ್ ಶರೀಫ್ ಸಿದ್ದಿಕ್ ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತುವನ್ನು ಹೊಂದಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಮೊಹಮ್ಮದ್ ಶಾಫಿ @ ಚಪ್ಪಿ ಎಂಬಾತನ ವಿರುದ್ದ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಹೊಂದಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಮೊಹಮ್ಮದ್ ಅನಾಸ್ ಎಂಬಾತನ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣವೊಂದು ದಾಖಲಾಗಿರುತ್ತದೆ.

ಮಾನ್ಯ ಪೊಲೀಸ್ ಆಯುಕ್ತರಾದ ಡಾ: ಹರ್ಷ ಐ.ಪಿ.ಎಸ್, ಮಾನ್ಯ ಪೊಲೀಸ್ ಉಪ ಆಯುಕ್ತರವರಾದ ಶ್ರೀ ಲಕ್ಷ್ಮಿ ಗಣೇಶ್, (ಅಪರಾಧ & ಸಂಚಾರ), ರವರ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್ ನಾಯ್ಕ್, ಪಿಎಸ್ಐಯವರಾದ ಕಬ್ಬಾಳ್ ರಾಜ್ ಮತ್ತು ಸಿಬ್ಬಂದಿಗಳು ಹಾಗೂ ಎಕಾನಾಮಿಕ್ ಮತ್ತು ನಾರ್ಕೋಟಿಕ್ ಪೊಲೀಸ್ ಠಾಣೆಯ ಪಿಎಸ್ಐ ಲತಾ ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

0
Shares
  • Share On Facebook
  • Tweet It




Trending Now
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
  • Popular Posts

    • 1
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 2
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 3
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 4
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 5
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!

  • Privacy Policy
  • Contact
© Tulunadu Infomedia.

Press enter/return to begin your search