• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತುಳುನಾಡಿನ ಕಂಬಳ ಓಟಗಾರನಿಗೆ ಫಿದಾ ಆದ ಕೇಂದ್ರ ಸಚಿವ!

Hanumantha Kamath Posted On February 16, 2020
0


0
Shares
  • Share On Facebook
  • Tweet It

ಮಂಗಳೂರು ಸಮೀಪದ ಐಕಳ ಎಂಬಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಶ್ರೀನಿವಾಸ ಗೌಡರು, ಕೇವಲ 13.62 ಸೆಕೆಂಡ್ ಗಳಲ್ಲಿ 142.50 ಮೀಟರ್ ಓಡಿ ಉಸೇನ್ ಬೋಲ್ಟ್ ದಾಖಲೆ ಮುರಿದಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದ್ದು ಇದೀಗ ಶ್ರೀನಿವಾಸ ಗೌಡರು ದೇಶದ ಕಣ್ಮಣಿಯಾಗಿದ್ದಾರೆ. ಕಂಬಳದ ಗದ್ದೆಯಲ್ಲಿ ಉಸೇನ್ ಬೋಲ್ಟ್ ದಾಖಲೆ ಮುರಿದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಮೂಲದ ಯುವಕ ಶ್ರೀನಿವಾಸಗೌಡರನ್ನು ಟೋಕ್ಯೋ ಒಲಂಪಿಕ್ಸ್ ಕಳಿಸಿಕೊಡಿ ಎಂದು ರಾಜ್ಯ ಒಲಂಪಿಕ್ ಅಸೋಸಿಯೇಶನ್ ಅಧ್ಯಕ್ಷ ಗೋವಿಂದರಾಜು ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ ಬರೆದ ಪತ್ರದಲ್ಲಿ ಉಲ್ಲೇಖ ಮಾಡಿರುವುದು ಇಡೀ ತುಳುನಾಡಿಗೆ ಹೆಮ್ಮೆಯ ವಿಚಾರ.

ಶ್ರೀನಿವಾಸ ಗೌಡರ ಸಾಧನೆಗೆ ಫುಲ್ ಫಿದಾ ಆದ ಕ್ರೀಡಾ ಸಚಿವ…

ಹೌದು… ಕಂಬಳದ ಉಸೇನ್ ಬೋಲ್ಟ್ ಎಂದೆನಿಸಿರುವ ಶ್ರೀನಿವಾಸ ಗೌಡರನ್ನು ಸ್ವತಃ ಕೇಂದ್ರ ಕ್ರೀಡಾ ಸಚಿವ ಕಿರಣ್ ರಜಿಜು ಅವರೇ ಭಾರತೀಯ ಕ್ರೀಡಾ ಪ್ರಾಧಿಕಾರದ ತರಬೇತುದಾರರ ಬಳಿಗೆ ಟ್ರಯಲ್ಸ್‍ಗೆ ಬರಲು ಆಹ್ವಾನಿಸಿದ್ದಾರೆ. ಈಗಾಗಲೇ ರೈಲ್ವೆ ಟಿಕೆಟ್ ಬುಕ್ ಮಾಡಿದ್ದು ಗೌಡರು ಸೋಮವಾರ ದಿಲ್ಲಿ ತಲುಪುವ ವ್ಯವಸ್ಥೆಯನ್ನೂ ಕೇಂದ್ರ ಸರಕಾರ ಮಾಡಿದೆ. ಅವರಿಗೆ ದೇಶದ ಪ್ರತಿಷ್ಠಿತ ತರಬೇತುದಾರರಿಂದ ತರಬೇತಿ ಒದಗಿಸಲು ನಾವು ಸಿದ್ಧ ಎಂದು ಘೋಷಿಸಿದ್ದಾರೆ.

ಅದಲ್ಲದೆ ಉದ್ಯಮಿ ಆನಂದ್ ಮಹೀಂದ್ರಾ ಶ್ರೀನಿವಾಸ ಗೌಡರ ಸಾಧನೆಯನ್ನು ಕೊಂಡಾಡಿದ್ದಾರೆ. ಒಮ್ಮೆ ಅವರ ಮೈಕಟ್ಟನ್ನು ನೋಡಿ, ಈ ಮನುಷ್ಯ ಅಸಾಧಾರಣ ಅಥ್ಲೆಟಿಕ್ ಸಾಹಸ ಮಾಡಲು ಸಮರ್ಥ. ಈ ವ್ಯಕ್ತಿಗೆ ಸರಿಯಾದ ತರಬೇತಿ ನೀಡಬೇಕು ಇಲ್ಲವೇ ಕಂಬಳವನ್ನು ಒಲಿಂಪಿಕ್ಸ್‍ಗೆ ಸೇರಿಸಬೇಕು. ಏನಾದರೂ ಮಾಡಿ ಶ್ರೀನಿವಾಸ್‍ರಿಂದ ನಮಗೆ ಚಿನ್ನದ ಪದಕ ಬೇಕಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಶ್ರೀನಿವಾಸ್ ಗೌಡ ಅವರ ಸಾಧನೆಯನ್ನು ರಾಜ್ಯ ಸರಕಾರವೂ ಗುರುತಿಸಿದೆ.

ಉಸೆನ್ ಬೋಲ್ಟ್ ವೇಗವನ್ನು ಮುರಿದ ಕಂಬಳ ಓಟಗಾರ

28 ವರ್ಷದ ಶ್ರೀನಿವಾಸ ಗೌಡರು ಕಟ್ಟಡ ಮೇಸ್ತ್ರಿಯಾಗಿದ್ದು ನವೆಂಬರ್‍ನಿಂದ ಮಾರ್ಚ್‍ನವರೆಗೆ ದಕ್ಷಿಣ ಕನ್ನಡದ ಸಾಂಪ್ರದಾಯಿಕ ಕ್ರೀಡೆಯಾಗಿರುವ ಕಂಬಳದಲ್ಲಿ ಭಾಗವಹಿಸುತ್ತಾರೆ. ಇದೀಗ ಶರವೇಗದ ಕಂಬಳ ಓಟಗಾರ ದೇಶದೆಲ್ಲೆಡೆ ಸುದ್ದಿಯಲ್ಲಿದ್ದಾರೆ. ಶ್ರೀನಿವಾಸ್ ಗೌಡ ಅವರು ಕಂಬಳ ಅಕಾಡೆಮಿಯಲ್ಲಿ 2011ರಲ್ಲಿ ಓಟದ ತರಬೇತಿ ಪಡೆದಿದ್ದರು. ಆ ಬಳಿಕ ನೇಗಿಲು ಕಿರಿಯ – ಹಿರಿಯ, ಹಗ್ಗ ಹಿರಿಯ – ಕಿರಿಯ ವಿಭಾಗಗಳಲ್ಲಿ ಕೋಣಗಳನ್ನು ಓಡಿಸಿ ಸಾಧನೆ ಮಾಡಿದ್ದಾರೆ. 8 ವರ್ಷದಲ್ಲಿ 100ಕ್ಕೂ ಅಧಿಕ ಪದಕ ಪಡೆದುಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶ್ರೀನಿವಾಸ ಗೌಡ ಉಸೇನ್ ಬೋಲ್ಟ್ ವಿಶ್ವ ಚಾಂಪಿಯನ್ ಆಗಿದ್ದಾರೆ. ನಾನು ಓಡಿದ್ದು ಕೇವಲ ನಮ್ಮೂರಿನ ಕೆಸರು ಗದ್ದೆಯಲ್ಲಿ …ಇಷ್ಟರ ಮಟ್ಟಿಗೆ ಸುದ್ದಿಯಾಗಿರುವುದು ಹೆಮ್ಮೆಯ ವಿಚಾರ ಎಂದಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Hanumantha Kamath October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Hanumantha Kamath October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search