• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೆದ್ದ ಮೇಲೆ ಕೊಂಕಣಿಗರು ಯಾಕೆ ಅಲ್ವಾ ಯಡಿಯೂರಪ್ಪನವರೇ?

Hanumantha Kamath Posted On March 6, 2020
0


0
Shares
  • Share On Facebook
  • Tweet It

ಸನ್ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ 78 ನೇ ಹರೆಯದಲ್ಲಿ ಏಳನೇ ಬಜೆಟ್ ಮಂಡಿಸಿದ್ದಾರೆ. ಇನ್ನು ಉಳಿದ 3 ವರ್ಷಗಳನ್ನು ಸೇರಿಸಿದರೆ ಅವರು ತಮ್ಮ ರಾಜಕೀಯ ಜೀವನದ ಒಟ್ಟು ಹತ್ತು ಬಜೆಟ್ ಮಂಡಿಸಿದಂತೆ ಆಗುತ್ತದೆ. ಆ ನಿಟ್ಟಿನಲ್ಲಿ ಅದು ಅವರ ಮಟ್ಟಿಗಿನ ದಾಖಲೆಯೇ. ಆದರೆ ಅವರು ಇನ್ನೊಂದು ದಾಖಲೆ ಬರೆದದ್ದು ಕ್ರೈಸ್ತ ಸಮುದಾಯಕ್ಕೆ ಇನ್ನೂರು ಕೋಟಿ ಕೊಡುವ ಮೂಲಕ.

ಈ ವಿಷಯದಲ್ಲಿ ಯಡಿಯೂರಪ್ಪನವರು ಸಿದ್ಧರಾಮಯ್ಯನವರಿಗೂ ನಾಚಿಕೆ ಆಗುವಷ್ಟು ವೇಗದಲ್ಲಿ ಮುಂದಕ್ಕೆ ಹೋಗಿದ್ದಾರೆ. ಕ್ರೈಸ್ತ ಸಮುದಾಯದವರಿಗೂ ಆಶ್ಚರ್ಯವಾಗುವ ಮಟ್ಟಿಗೆ ಅವರಿಗೆ ಅನುದಾನ ಸಿಕ್ಕಿದೆ. ಸಾಮಾನ್ಯವಾಗಿ ಬಿಜೆಪಿ ಸರಕಾರ ಇದ್ದಾಗ ಯಾವ ಕ್ರೈಸ್ತನೂ ತಮ್ಮ ಸಮುದಾಯಕ್ಕೆ ಮೂರು ಅಂಕೆಯಷ್ಟು ಕೋಟಿ ಮೊತ್ತ ಸಿಗುತ್ತದೆ ಎನ್ನುವ ನಿರೀಕ್ಷೆ ಇಟ್ಟುಕೊಂಡಿರುವುದಿಲ್ಲ. ಯಾಕೆಂದರೆ ಕಾಂಗ್ರೆಸ್ಸಿನ ಮತಬ್ಯಾಂಕೊಂದಕ್ಕೆ ಈ ಪರಿ ಅನುದಾನ ಇಡುವುದಕ್ಕೆ ಬೇರೆ ಪಕ್ಷಗಳು ಕೂಡ ಹೋಗುವುದಿಲ್ಲ. ಆದರೆ ಬಿಎಸ್ ವೈ ಸ್ಪರ್ದೇಗೆ ಬಿದ್ದವರಂತೆ 200 ಕೋಟಿ ಇಟ್ಟಿದ್ದಾರೆ. ಇರಲಿ, ಅವರು ಮತ ಬ್ಯಾಂಕ್ ನೋಡಿಲ್ಲ, ಒಳ್ಳೆಯ ಭಾವನೆಯಿಂದ ಹಣ ನೀಡಿದ್ದಾರೆ ಎಂದೇ ಭಾವಿಸೋಣ. ಆದರೆ ವಿಷಯ ಏನೆಂದರೆ ಯಾರು ನಿಜವಾಗಿಯೂ ಭಾರತೀಯ ಜನತಾ ಪಾರ್ಟಿಯ ಮತಬ್ಯಾಂಕಾಗಿದ್ದಾರೋ ಅವರನ್ನು ಯಡಿಯೂರಪ್ಪನವರು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದವರು ಎಷ್ಟೋ ದಶಕಗಳಿಂದ ಬಿಜೆಪಿಗೆ ಮತ ನೀಡಿಯೇ ಬರುತ್ತಿದ್ದಾರೆ. ಯುಎಸ್ ಮಲ್ಯ ಕಾಲದಲ್ಲಿ ಜಿಎಸ್ ಬಿಗಳು ಕಾಂಗ್ರೆಸ್ಸಿನಲ್ಲಿ ಇದ್ದಿರಬಹುದು. ನಂತರ ಕಾಂಗ್ರೆಸ್ಸಿನ ವಿಪರೀತ ಅಲ್ಪಸಂಖ್ಯಾತ ತುಷ್ಟೀಕರಣದಿಂದ ಹೈರಾಣಾದ ಜಿಎಸ್ ಬಿಗಳು ಕಾಂಗ್ರೆಸ್ ಬಿಟ್ಟು ಬಿಜೆಪಿ ಬಂದಾಗಿದೆ. ಕರಾವಳಿಯ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆ ಸೇರಿ ಅತೀ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆದ್ದದ್ದು ನಮ್ಮಿಂದಲೇ ಎಂದು ಹೇಳಲಿಕ್ಕೆ ಆಗದಿದ್ದರೂ ಕೊಂಕಣಿಗರನ್ನು ಕಡೆಗಣಿಸಿದ ಸಂದರ್ಭ ಕಾರ್ಕಳದಲ್ಲಿ ಒಮ್ಮೆ ಏನಾಗಿತ್ತು ಎನ್ನುವುದನ್ನು ಅಲ್ಲಿನ ಬಿಜೆಪಿ ಮುಖಂಡರು ಮರೆತಿರಲಿಕ್ಕಿಲ್ಲ. ಆದ್ದರಿಂದ ಕೊಂಕಣಿಗರು ಎಂದು ಬೇರೆಯವರಿಂದ ಕರೆಸಲ್ಪಡುವ ಜಿಎಸ್ ಬಿ ಮತ್ತು ಇತರ 40 ಪಂಗಡಗಳು ಕರಾವಳಿಯ ಬಹುತೇಕ ಕಡೆ ಸೋಲು-ಗೆಲುವಿನ ನಡುವೆ ನಿರ್ಣಾಯಕವಾಗಿ ನಿಲ್ಲುವ ಸಾಮರ್ತ್ಯ ಹೊಂದಿದ್ದಾರೆ. ಆದ್ದರಿಂದ ಸಾಮಾನ್ಯವಾಗಿ ಇವತ್ತಿನ ದಿನಗಳಲ್ಲಿ ಕೊಂಕಣಿಗರನ್ನು ದೂರ ಇಟ್ಟು ರಾಜಕೀಯ ಮಾಡಲು ಯಾವುದೇ ಪಕ್ಷದ ಶಾಸಕರು, ಸಂಸದರು ಹೋಗುವುದಿಲ್ಲ. ಆದರೆ ಇದೆಲ್ಲ ಯಡಿಯೂರಪ್ಪನವರಿಗೆ ಬಿದ್ದು ಹೋಗಿಲ್ಲ. ಅವರು ಕೊಂಕಣಿಗರು ಹೇಗಾದರೂ ಬಿಜೆಪಿಗೆ ಮತ ಕೊಟ್ಟೇ ಕೊಡುತ್ತಾರೆ. ನಾವು ಕ್ರೈಸ್ತರಿಗೆ ಬಕೆಟ್ ಹಿಡಿಯೋಣ ಎಂದು ನಿರ್ಧರಿಸಿದ್ದಂತೆ ಕಾಣುತ್ತದೆ. ರಾಜ್ಯ ಸರಕಾರದ ಈ ಧೋರಣೆಗೆ ಸ್ವತ: ಪದ್ಮಶ್ರೀ ಟಿ ವಿ ಮೋಹನದಾಸ್ ಪೈ ಅವರೇ ತಮ್ಮ ಟ್ವಿಟರ್ ನಲ್ಲಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವ ಕೊಂಕಣಿ ಕೇಂದ್ರದ ಪರವಾಗಿ ಕೆಲವು ಗಣ್ಯಾತೀಗಣ್ಯರು ಕೊಂಕಣಿ ಭಾಷೆಯ ಅಭಿವೃದ್ಧಿಗೆ 15 ಕೋಟಿ ಕೇಳಿದ್ದರೂ ಅದನ್ನು ಬಜೆಟಿನಲ್ಲಿ ನೀಡದೇ ಇರುವುದು ಕೊಂಕಣಿಗರಿಗೆ ಬೇಸರ ತಂದಿದೆ. ಹಿಂದೆ 50 ಕೋಟಿ ಅನುದಾನ ಇದ್ದ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಈ ಬಾರಿ 200 ಕೋಟಿ ಕೊಡುವಾಗ ಉಳಿದ ಧರ್ಮದ ಕೊಂಕಣಿಗರು ಯಾವ ತಪ್ಪು ಮಾಡಿದ್ದಾರೆ ಸಿಎಂ? ಹಾಗಾದರೆ ನಾವು ಮತ ನೀಡುವುದಕ್ಕೆ ಸೀಮಿತನಾ? ನಾವು ಬಿಜೆಪಿ ಶಾಸಕರನ್ನು ಗೆಲ್ಲಿಸುವುದಕ್ಕೆ ತನು, ಮನ, ಧನ ಸುರಿಯಬೇಕಾ? ಗೆದ್ದ ಮೇಲೆ ನಮ್ಮನ್ನು ನೀವು ಮರೆಯುವುದಾದರೆ ನಿಮಗೂ, ಕಾಂಗ್ರೆಸ್ಸಿಗೂ ಅಥವಾ ಬೇರೆ ಪಕ್ಷಗಳಿಗೆ ವ್ಯತ್ಯಾಸವೇನು?

ಕಳೆದ ವರ್ಷ ಆರ್ಥಿಕ ಹಿಂದುಳಿದ ಬ್ರಾಹ್ಮಣರ ಪಟ್ಟಿಯಿಂದ ಜಿಎಸ್ ಬಿಗಳನ್ನು ಹೊರಗೆ ಇಡಲಾಗಿತ್ತು. ಇದು ಜಾಣ ಮರೆವೋ ಅಥವಾ ಕಣ್ತಪ್ಪಿನಿಂದ ಆದದ್ದೋ ಎಂದು ಇವತ್ತಿಗೂ ಗೊತ್ತಾಗಿಲ್ಲ. ನಾವು ನಿರಂತರ ಪ್ರಯತ್ನ ಪಟ್ಟರೂ ನಮ್ಮನ್ನು ಆ ಪಟ್ಟಿಯಲ್ಲಿ ಸೇರಿಸಿಲ್ಲ. ಹೀಗಿರುವಾಗ ಮತ್ತೆ ಅನ್ಯಾಯ. ಅಷ್ಟಕ್ಕೂ ವಿಶ್ವ ಕೊಂಕಣಿ ಕೇಂದ್ರದವರು ತಮಗೊಸ್ಕರ ಒಂದು ಪೈಸೆ ಕೇಳಿಲ್ಲ. ಅವರು ಕೊಂಕಣಿ ಭಾಷೆಗೆ ಸಲ್ಲಿಸುತ್ತಿರುವ ಸೇವೆಗೆ ಸರಕಾರ ಕೈ ಜೋಡಿಸಿದ್ದರೆ ಬಿಜೆಪಿಗೂ ಗೌರವ ಸಿಗುತ್ತಿತ್ತು. ಬಿಜೆಪಿ ಹೀಗೆ ಕೊಂಕಣಿಗರನ್ನು ನಿರ್ಲಕ್ಷ್ಯ ಮಾಡಿದರೆ ಕೊಂಕಣಿಗರು ಮತದಾನದ ಸಮಯದಲ್ಲಿ ತಟಸ್ಥರಾದರೂ ಸಾಕು, ಉಳಿದದ್ದು ಬುದ್ಧಿವಂತರಿಗೆ ಹೇಳಬೇಕಾಗಿಲ್ಲ!

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Hanumantha Kamath September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Hanumantha Kamath September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search