• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊರೋನ ವೈರಸ್ ತಡೆಯಲು ಆಯುರ್ವೇದಿಕ್ ಔಷಧ

Tulunadu News Posted On March 20, 2020
0


0
Shares
  • Share On Facebook
  • Tweet It

ಅನಾದಿಕಾಲದಿಂದಲೂ ಮಾನವ ತನ್ನ ದೇಹವನ್ನು ರೋಗರುಜಿನಗಳಿಂದ ರಕ್ಷಿಸಿಕೊಳ್ಳಲು ಆಯುರ್ವೇದ ಔಷಧಿಗಳ ಮೊರೆ ಹೋಗುತ್ತಿದ್ದದ್ದು ಪ್ರಾಚೀನ ಗ್ರಂಥಗಳಿಂದ ತಿಳಿದು ಬರುತ್ತದೆ. ಕೋರೋನ ವೈರಸ್ ನಮ್ಮ ದುರ್ಬಲವಾದ ರೋಗ ನಿರೋಧಕ ಶಕ್ತಿಯಿಂದ ದೇಹದಲ್ಲಿ ಬೆಳೆಯುತ್ತದೆ. ಹಾಗಾಗಿ ನಮ್ಮ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ಆಹಾರ ವಿಹಾರ ಮತ್ತು ಮನೆಮದ್ದು ಪಾಲಿಸಿದರೆ ಉತ್ತಮ. ಖ್ಯಾತ ಆಯುರ್ವೇದ ತಜ್ಞ ಡಾ.ಶ್ರೀವತ್ಸ ಭಾರದ್ವಾಜ ಅವರು ಈ ವಿವಿಧ ಗಿಡಮೂಲಿಕೆ ಮತ್ತು ಆಹಾರಪದಾರ್ಥಗಳ ಸಂಯೋಗದೊಂದಿಗೆ ಉತ್ಪತ್ತಿಯಾಗುವ ಔಷಧಗಳನ್ನು ಸೇವಿಸುವ ಮೂಲಕ ದೇಹಕ್ಕೆ ಹೇಗೆ ಆರೋಗ್ಯಕವಚ ಸೃಷ್ಟಿಸಬಹುದು ಎಂದು ತಿಳಿಸಿದ್ದಾರೆ.
ಐದು ಕೂಡಿ ಕಿರಾತ ಕಡ್ಡಿ, ನೆಲನೆಲ್ಲಿ, ನಾಲ್ಕು ಇಂಚು ಅಮೃತಬಳ್ಳಿ ಮತ್ತು ಒಂದು ಚಮಚ ಜೀರಿಗೆಯನ್ನು ನಾಲ್ಕು ಲೋಟ ನೀರಿಗೆ ಹಾಕಿ ಕುದಿಸಿ ಒಂದು ಲೋಟಕ್ಕೆ ಬತ್ತಿಸಿದ ಕಷಾಯವನ್ನು ವೈದ್ಯರ ಸಲಹೆಯ ಮೇರೆಗೆ ಪ್ರತಿನಿತ್ಯ ಸೇವಿಸಿದರೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯು ವೃದ್ಧಿಸುತ್ತದೆ.

ಪ್ರತಿನಿತ್ಯ ಜೀರಿಗೆ ನೀರನ್ನು ಕುಡಿಯಲು ಬಳಸುವುದು ಮತ್ತು 1/4 ಚಮಚ ಶುಂಠಿ ರಸವನ್ನು ಚಿಟಿಕಿ ಉಪ್ಪಿನೊಂದಿಗೆ ಸೇವಿಸುವುದು ಒಳ್ಳೆಯದು. ಚಳಿಗಾಲದಲ್ಲಿ ದಿನನಿತ್ಯ 1 ಚಮಚ ಚ್ಯವನಪ್ರಾಶ ಲೇಹವನ್ನು ಬಿಸಿನೀರಿನಲ್ಲಿ ಹಸಿಹೊಟ್ಟೆಯಲ್ಲಿ ಸೇವಿಸುವುದು. ಮನೆಯೊಳಗೆ ಪ್ರತಿನಿತ್ಯ ಅರಶಿಣದ ಧೂಪವನ್ನು ಹಾಕಿದರೆ ದೇಹಕ್ಕೂ, ಮನಸ್ಸಿಗೂ ಶ್ರೇಯಸ್ಕರ. ಕಾಫಿ, ಚಹಾ ಬದಲಿಗೆ ಒಳ್ಳೆಮೆಣಸು, ಮೆಂತೆ, ಜೀರಿಗೆ, ಶುಂಠಿ ಬಳಸಿ ತಯಾರಿಸಿದ ವಿವಿಧ ಕಷಾಯಗಳನ್ನು ಸೇವಿಸುವುದು ದೇಹದ ಆರೋಗ್ಯಕ್ಕೆ ಉತ್ತಮ ವಿಧಾನ ಎಂದು ಡಾ. ಶ್ರೀವತ್ಸ ಭಾರದ್ವಾಜ ಅವರು ತಿಳಿಸಿದ್ದಾರೆ. ಈ ಉತ್ಪನ್ನಗಳನ್ನು ಮನೆಯಲ್ಲಿ ತಯಾರಿಸಬಹುದು ಅಥವಾ ಪ್ರಖ್ಯಾತ ಆಯುರ್ವೇದ ಔಷಧಗಳ ರಖಂ ಮತ್ತು ಬಿಡಿ ಮಾರಾಟ ಮಳಿಗೆಯಾಗಿರುವ ವಿವೇಕ್ ಟ್ರೇಡರ್ಸ್ ಇದರ ಮಂಗಳೂರಿನ ಕೊಡಿಯಾಲ್ ಬೈಲ್ ಸಮೀಪದ ವಿ.ಟಿ.ರಸ್ತೆಯ ಧನ್ವಂತರಿ ನಗರದಲ್ಲಿರುವ ವಿವೇಕ್ ಟ್ರೇಡರ್ಸ್ ಮಳಿಗೆ ಅಥವಾ ಹಂಪನಕಟ್ಟೆ ಸರಕಾರಿ ವಿಶ್ವವಿದ್ಯಾನಿಲಯ ಕಾಲೇಜು ಎದುರಿಗೆ ಇರುವ ಆಯುರ್ ವಿವೇಕ್ ಮಳಿಗೆಯಲ್ಲಿ ಪಡೆದುಕೊಳ್ಳಬಹುದು. ದೂರವಾಣಿ ಸಂಖ್ಯೆ- 0824-2443501.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search