• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊರೋನ ವೈರಸ್ ತಡೆಯಲು ಆಯುರ್ವೇದಿಕ್ ಔಷಧ

Tulunadu News Posted On March 20, 2020
0


0
Shares
  • Share On Facebook
  • Tweet It

ಅನಾದಿಕಾಲದಿಂದಲೂ ಮಾನವ ತನ್ನ ದೇಹವನ್ನು ರೋಗರುಜಿನಗಳಿಂದ ರಕ್ಷಿಸಿಕೊಳ್ಳಲು ಆಯುರ್ವೇದ ಔಷಧಿಗಳ ಮೊರೆ ಹೋಗುತ್ತಿದ್ದದ್ದು ಪ್ರಾಚೀನ ಗ್ರಂಥಗಳಿಂದ ತಿಳಿದು ಬರುತ್ತದೆ. ಕೋರೋನ ವೈರಸ್ ನಮ್ಮ ದುರ್ಬಲವಾದ ರೋಗ ನಿರೋಧಕ ಶಕ್ತಿಯಿಂದ ದೇಹದಲ್ಲಿ ಬೆಳೆಯುತ್ತದೆ. ಹಾಗಾಗಿ ನಮ್ಮ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ಆಹಾರ ವಿಹಾರ ಮತ್ತು ಮನೆಮದ್ದು ಪಾಲಿಸಿದರೆ ಉತ್ತಮ. ಖ್ಯಾತ ಆಯುರ್ವೇದ ತಜ್ಞ ಡಾ.ಶ್ರೀವತ್ಸ ಭಾರದ್ವಾಜ ಅವರು ಈ ವಿವಿಧ ಗಿಡಮೂಲಿಕೆ ಮತ್ತು ಆಹಾರಪದಾರ್ಥಗಳ ಸಂಯೋಗದೊಂದಿಗೆ ಉತ್ಪತ್ತಿಯಾಗುವ ಔಷಧಗಳನ್ನು ಸೇವಿಸುವ ಮೂಲಕ ದೇಹಕ್ಕೆ ಹೇಗೆ ಆರೋಗ್ಯಕವಚ ಸೃಷ್ಟಿಸಬಹುದು ಎಂದು ತಿಳಿಸಿದ್ದಾರೆ.
ಐದು ಕೂಡಿ ಕಿರಾತ ಕಡ್ಡಿ, ನೆಲನೆಲ್ಲಿ, ನಾಲ್ಕು ಇಂಚು ಅಮೃತಬಳ್ಳಿ ಮತ್ತು ಒಂದು ಚಮಚ ಜೀರಿಗೆಯನ್ನು ನಾಲ್ಕು ಲೋಟ ನೀರಿಗೆ ಹಾಕಿ ಕುದಿಸಿ ಒಂದು ಲೋಟಕ್ಕೆ ಬತ್ತಿಸಿದ ಕಷಾಯವನ್ನು ವೈದ್ಯರ ಸಲಹೆಯ ಮೇರೆಗೆ ಪ್ರತಿನಿತ್ಯ ಸೇವಿಸಿದರೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯು ವೃದ್ಧಿಸುತ್ತದೆ.

ಪ್ರತಿನಿತ್ಯ ಜೀರಿಗೆ ನೀರನ್ನು ಕುಡಿಯಲು ಬಳಸುವುದು ಮತ್ತು 1/4 ಚಮಚ ಶುಂಠಿ ರಸವನ್ನು ಚಿಟಿಕಿ ಉಪ್ಪಿನೊಂದಿಗೆ ಸೇವಿಸುವುದು ಒಳ್ಳೆಯದು. ಚಳಿಗಾಲದಲ್ಲಿ ದಿನನಿತ್ಯ 1 ಚಮಚ ಚ್ಯವನಪ್ರಾಶ ಲೇಹವನ್ನು ಬಿಸಿನೀರಿನಲ್ಲಿ ಹಸಿಹೊಟ್ಟೆಯಲ್ಲಿ ಸೇವಿಸುವುದು. ಮನೆಯೊಳಗೆ ಪ್ರತಿನಿತ್ಯ ಅರಶಿಣದ ಧೂಪವನ್ನು ಹಾಕಿದರೆ ದೇಹಕ್ಕೂ, ಮನಸ್ಸಿಗೂ ಶ್ರೇಯಸ್ಕರ. ಕಾಫಿ, ಚಹಾ ಬದಲಿಗೆ ಒಳ್ಳೆಮೆಣಸು, ಮೆಂತೆ, ಜೀರಿಗೆ, ಶುಂಠಿ ಬಳಸಿ ತಯಾರಿಸಿದ ವಿವಿಧ ಕಷಾಯಗಳನ್ನು ಸೇವಿಸುವುದು ದೇಹದ ಆರೋಗ್ಯಕ್ಕೆ ಉತ್ತಮ ವಿಧಾನ ಎಂದು ಡಾ. ಶ್ರೀವತ್ಸ ಭಾರದ್ವಾಜ ಅವರು ತಿಳಿಸಿದ್ದಾರೆ. ಈ ಉತ್ಪನ್ನಗಳನ್ನು ಮನೆಯಲ್ಲಿ ತಯಾರಿಸಬಹುದು ಅಥವಾ ಪ್ರಖ್ಯಾತ ಆಯುರ್ವೇದ ಔಷಧಗಳ ರಖಂ ಮತ್ತು ಬಿಡಿ ಮಾರಾಟ ಮಳಿಗೆಯಾಗಿರುವ ವಿವೇಕ್ ಟ್ರೇಡರ್ಸ್ ಇದರ ಮಂಗಳೂರಿನ ಕೊಡಿಯಾಲ್ ಬೈಲ್ ಸಮೀಪದ ವಿ.ಟಿ.ರಸ್ತೆಯ ಧನ್ವಂತರಿ ನಗರದಲ್ಲಿರುವ ವಿವೇಕ್ ಟ್ರೇಡರ್ಸ್ ಮಳಿಗೆ ಅಥವಾ ಹಂಪನಕಟ್ಟೆ ಸರಕಾರಿ ವಿಶ್ವವಿದ್ಯಾನಿಲಯ ಕಾಲೇಜು ಎದುರಿಗೆ ಇರುವ ಆಯುರ್ ವಿವೇಕ್ ಮಳಿಗೆಯಲ್ಲಿ ಪಡೆದುಕೊಳ್ಳಬಹುದು. ದೂರವಾಣಿ ಸಂಖ್ಯೆ- 0824-2443501.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search