• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೊರೋನ ವೈರಸ್ ತಡೆಯಲು ಆಯುರ್ವೇದಿಕ್ ಔಷಧ

Tulunadu News Posted On March 20, 2020


  • Share On Facebook
  • Tweet It

ಅನಾದಿಕಾಲದಿಂದಲೂ ಮಾನವ ತನ್ನ ದೇಹವನ್ನು ರೋಗರುಜಿನಗಳಿಂದ ರಕ್ಷಿಸಿಕೊಳ್ಳಲು ಆಯುರ್ವೇದ ಔಷಧಿಗಳ ಮೊರೆ ಹೋಗುತ್ತಿದ್ದದ್ದು ಪ್ರಾಚೀನ ಗ್ರಂಥಗಳಿಂದ ತಿಳಿದು ಬರುತ್ತದೆ. ಕೋರೋನ ವೈರಸ್ ನಮ್ಮ ದುರ್ಬಲವಾದ ರೋಗ ನಿರೋಧಕ ಶಕ್ತಿಯಿಂದ ದೇಹದಲ್ಲಿ ಬೆಳೆಯುತ್ತದೆ. ಹಾಗಾಗಿ ನಮ್ಮ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ಆಹಾರ ವಿಹಾರ ಮತ್ತು ಮನೆಮದ್ದು ಪಾಲಿಸಿದರೆ ಉತ್ತಮ. ಖ್ಯಾತ ಆಯುರ್ವೇದ ತಜ್ಞ ಡಾ.ಶ್ರೀವತ್ಸ ಭಾರದ್ವಾಜ ಅವರು ಈ ವಿವಿಧ ಗಿಡಮೂಲಿಕೆ ಮತ್ತು ಆಹಾರಪದಾರ್ಥಗಳ ಸಂಯೋಗದೊಂದಿಗೆ ಉತ್ಪತ್ತಿಯಾಗುವ ಔಷಧಗಳನ್ನು ಸೇವಿಸುವ ಮೂಲಕ ದೇಹಕ್ಕೆ ಹೇಗೆ ಆರೋಗ್ಯಕವಚ ಸೃಷ್ಟಿಸಬಹುದು ಎಂದು ತಿಳಿಸಿದ್ದಾರೆ.
ಐದು ಕೂಡಿ ಕಿರಾತ ಕಡ್ಡಿ, ನೆಲನೆಲ್ಲಿ, ನಾಲ್ಕು ಇಂಚು ಅಮೃತಬಳ್ಳಿ ಮತ್ತು ಒಂದು ಚಮಚ ಜೀರಿಗೆಯನ್ನು ನಾಲ್ಕು ಲೋಟ ನೀರಿಗೆ ಹಾಕಿ ಕುದಿಸಿ ಒಂದು ಲೋಟಕ್ಕೆ ಬತ್ತಿಸಿದ ಕಷಾಯವನ್ನು ವೈದ್ಯರ ಸಲಹೆಯ ಮೇರೆಗೆ ಪ್ರತಿನಿತ್ಯ ಸೇವಿಸಿದರೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯು ವೃದ್ಧಿಸುತ್ತದೆ.

ಪ್ರತಿನಿತ್ಯ ಜೀರಿಗೆ ನೀರನ್ನು ಕುಡಿಯಲು ಬಳಸುವುದು ಮತ್ತು 1/4 ಚಮಚ ಶುಂಠಿ ರಸವನ್ನು ಚಿಟಿಕಿ ಉಪ್ಪಿನೊಂದಿಗೆ ಸೇವಿಸುವುದು ಒಳ್ಳೆಯದು. ಚಳಿಗಾಲದಲ್ಲಿ ದಿನನಿತ್ಯ 1 ಚಮಚ ಚ್ಯವನಪ್ರಾಶ ಲೇಹವನ್ನು ಬಿಸಿನೀರಿನಲ್ಲಿ ಹಸಿಹೊಟ್ಟೆಯಲ್ಲಿ ಸೇವಿಸುವುದು. ಮನೆಯೊಳಗೆ ಪ್ರತಿನಿತ್ಯ ಅರಶಿಣದ ಧೂಪವನ್ನು ಹಾಕಿದರೆ ದೇಹಕ್ಕೂ, ಮನಸ್ಸಿಗೂ ಶ್ರೇಯಸ್ಕರ. ಕಾಫಿ, ಚಹಾ ಬದಲಿಗೆ ಒಳ್ಳೆಮೆಣಸು, ಮೆಂತೆ, ಜೀರಿಗೆ, ಶುಂಠಿ ಬಳಸಿ ತಯಾರಿಸಿದ ವಿವಿಧ ಕಷಾಯಗಳನ್ನು ಸೇವಿಸುವುದು ದೇಹದ ಆರೋಗ್ಯಕ್ಕೆ ಉತ್ತಮ ವಿಧಾನ ಎಂದು ಡಾ. ಶ್ರೀವತ್ಸ ಭಾರದ್ವಾಜ ಅವರು ತಿಳಿಸಿದ್ದಾರೆ. ಈ ಉತ್ಪನ್ನಗಳನ್ನು ಮನೆಯಲ್ಲಿ ತಯಾರಿಸಬಹುದು ಅಥವಾ ಪ್ರಖ್ಯಾತ ಆಯುರ್ವೇದ ಔಷಧಗಳ ರಖಂ ಮತ್ತು ಬಿಡಿ ಮಾರಾಟ ಮಳಿಗೆಯಾಗಿರುವ ವಿವೇಕ್ ಟ್ರೇಡರ್ಸ್ ಇದರ ಮಂಗಳೂರಿನ ಕೊಡಿಯಾಲ್ ಬೈಲ್ ಸಮೀಪದ ವಿ.ಟಿ.ರಸ್ತೆಯ ಧನ್ವಂತರಿ ನಗರದಲ್ಲಿರುವ ವಿವೇಕ್ ಟ್ರೇಡರ್ಸ್ ಮಳಿಗೆ ಅಥವಾ ಹಂಪನಕಟ್ಟೆ ಸರಕಾರಿ ವಿಶ್ವವಿದ್ಯಾನಿಲಯ ಕಾಲೇಜು ಎದುರಿಗೆ ಇರುವ ಆಯುರ್ ವಿವೇಕ್ ಮಳಿಗೆಯಲ್ಲಿ ಪಡೆದುಕೊಳ್ಳಬಹುದು. ದೂರವಾಣಿ ಸಂಖ್ಯೆ- 0824-2443501.

  • Share On Facebook
  • Tweet It


- Advertisement -


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
Tulunadu News February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search