• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊರೋನ ವೈರಸ್ ತಡೆಯಲು ಆಯುರ್ವೇದಿಕ್ ಔಷಧ

Tulunadu News Posted On March 20, 2020
0


0
Shares
  • Share On Facebook
  • Tweet It

ಅನಾದಿಕಾಲದಿಂದಲೂ ಮಾನವ ತನ್ನ ದೇಹವನ್ನು ರೋಗರುಜಿನಗಳಿಂದ ರಕ್ಷಿಸಿಕೊಳ್ಳಲು ಆಯುರ್ವೇದ ಔಷಧಿಗಳ ಮೊರೆ ಹೋಗುತ್ತಿದ್ದದ್ದು ಪ್ರಾಚೀನ ಗ್ರಂಥಗಳಿಂದ ತಿಳಿದು ಬರುತ್ತದೆ. ಕೋರೋನ ವೈರಸ್ ನಮ್ಮ ದುರ್ಬಲವಾದ ರೋಗ ನಿರೋಧಕ ಶಕ್ತಿಯಿಂದ ದೇಹದಲ್ಲಿ ಬೆಳೆಯುತ್ತದೆ. ಹಾಗಾಗಿ ನಮ್ಮ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ಆಹಾರ ವಿಹಾರ ಮತ್ತು ಮನೆಮದ್ದು ಪಾಲಿಸಿದರೆ ಉತ್ತಮ. ಖ್ಯಾತ ಆಯುರ್ವೇದ ತಜ್ಞ ಡಾ.ಶ್ರೀವತ್ಸ ಭಾರದ್ವಾಜ ಅವರು ಈ ವಿವಿಧ ಗಿಡಮೂಲಿಕೆ ಮತ್ತು ಆಹಾರಪದಾರ್ಥಗಳ ಸಂಯೋಗದೊಂದಿಗೆ ಉತ್ಪತ್ತಿಯಾಗುವ ಔಷಧಗಳನ್ನು ಸೇವಿಸುವ ಮೂಲಕ ದೇಹಕ್ಕೆ ಹೇಗೆ ಆರೋಗ್ಯಕವಚ ಸೃಷ್ಟಿಸಬಹುದು ಎಂದು ತಿಳಿಸಿದ್ದಾರೆ.
ಐದು ಕೂಡಿ ಕಿರಾತ ಕಡ್ಡಿ, ನೆಲನೆಲ್ಲಿ, ನಾಲ್ಕು ಇಂಚು ಅಮೃತಬಳ್ಳಿ ಮತ್ತು ಒಂದು ಚಮಚ ಜೀರಿಗೆಯನ್ನು ನಾಲ್ಕು ಲೋಟ ನೀರಿಗೆ ಹಾಕಿ ಕುದಿಸಿ ಒಂದು ಲೋಟಕ್ಕೆ ಬತ್ತಿಸಿದ ಕಷಾಯವನ್ನು ವೈದ್ಯರ ಸಲಹೆಯ ಮೇರೆಗೆ ಪ್ರತಿನಿತ್ಯ ಸೇವಿಸಿದರೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯು ವೃದ್ಧಿಸುತ್ತದೆ.

ಪ್ರತಿನಿತ್ಯ ಜೀರಿಗೆ ನೀರನ್ನು ಕುಡಿಯಲು ಬಳಸುವುದು ಮತ್ತು 1/4 ಚಮಚ ಶುಂಠಿ ರಸವನ್ನು ಚಿಟಿಕಿ ಉಪ್ಪಿನೊಂದಿಗೆ ಸೇವಿಸುವುದು ಒಳ್ಳೆಯದು. ಚಳಿಗಾಲದಲ್ಲಿ ದಿನನಿತ್ಯ 1 ಚಮಚ ಚ್ಯವನಪ್ರಾಶ ಲೇಹವನ್ನು ಬಿಸಿನೀರಿನಲ್ಲಿ ಹಸಿಹೊಟ್ಟೆಯಲ್ಲಿ ಸೇವಿಸುವುದು. ಮನೆಯೊಳಗೆ ಪ್ರತಿನಿತ್ಯ ಅರಶಿಣದ ಧೂಪವನ್ನು ಹಾಕಿದರೆ ದೇಹಕ್ಕೂ, ಮನಸ್ಸಿಗೂ ಶ್ರೇಯಸ್ಕರ. ಕಾಫಿ, ಚಹಾ ಬದಲಿಗೆ ಒಳ್ಳೆಮೆಣಸು, ಮೆಂತೆ, ಜೀರಿಗೆ, ಶುಂಠಿ ಬಳಸಿ ತಯಾರಿಸಿದ ವಿವಿಧ ಕಷಾಯಗಳನ್ನು ಸೇವಿಸುವುದು ದೇಹದ ಆರೋಗ್ಯಕ್ಕೆ ಉತ್ತಮ ವಿಧಾನ ಎಂದು ಡಾ. ಶ್ರೀವತ್ಸ ಭಾರದ್ವಾಜ ಅವರು ತಿಳಿಸಿದ್ದಾರೆ. ಈ ಉತ್ಪನ್ನಗಳನ್ನು ಮನೆಯಲ್ಲಿ ತಯಾರಿಸಬಹುದು ಅಥವಾ ಪ್ರಖ್ಯಾತ ಆಯುರ್ವೇದ ಔಷಧಗಳ ರಖಂ ಮತ್ತು ಬಿಡಿ ಮಾರಾಟ ಮಳಿಗೆಯಾಗಿರುವ ವಿವೇಕ್ ಟ್ರೇಡರ್ಸ್ ಇದರ ಮಂಗಳೂರಿನ ಕೊಡಿಯಾಲ್ ಬೈಲ್ ಸಮೀಪದ ವಿ.ಟಿ.ರಸ್ತೆಯ ಧನ್ವಂತರಿ ನಗರದಲ್ಲಿರುವ ವಿವೇಕ್ ಟ್ರೇಡರ್ಸ್ ಮಳಿಗೆ ಅಥವಾ ಹಂಪನಕಟ್ಟೆ ಸರಕಾರಿ ವಿಶ್ವವಿದ್ಯಾನಿಲಯ ಕಾಲೇಜು ಎದುರಿಗೆ ಇರುವ ಆಯುರ್ ವಿವೇಕ್ ಮಳಿಗೆಯಲ್ಲಿ ಪಡೆದುಕೊಳ್ಳಬಹುದು. ದೂರವಾಣಿ ಸಂಖ್ಯೆ- 0824-2443501.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search