• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು ವಿವಿಯಲ್ಲಿ ಖಾನ್ ಕೊನೆಯ ಹೈಡ್ರಾಮಾ!!

Hanumantha Kamath Posted On April 27, 2020
0


0
Shares
  • Share On Facebook
  • Tweet It

ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿದ್ದ ಪ್ರೋ.ಎ.ಎಂ.ಖಾನ್ ತಾವು ಅಧಿಕಾರದಲ್ಲಿದಷ್ಟು ದಿನ ಇಡೀ ವಿಶ್ವವಿದ್ಯಾನಿಲಯಕ್ಕೆ ತಲೆನೋವಾಗಿದ್ದು ನಮಗೆ ಗೊತ್ತೆ ಇದೆ. ಭ್ರಷ್ಟಾಚಾರದ ಆರೋಪ ಅವರನ್ನು ಸುತ್ತುವರೆದು ಅದು ವಿಧಾನಸೌಧದ ಮೆಟ್ಟಿಲು ಹತ್ತಿರುವುದು ವಿದ್ಯಾರ್ಥಿ ಸಂಘಟನೆಗಳ ಯಶಸ್ಸು.
ಸಿಂಡಿಕೇಟ್ ಸದಸ್ಯರಿಂದಲೇ ಇವರ ವಿರುದ್ಧ ಸಿಂಡಿಕೇಟ್ ನಿರ್ಣಯವನ್ನು ತಿರುಚಿದ ಆರೋಪ ಕೂಡ ಇರುವುದು ಎಲ್ಲರಿಗೂ ಗೊತ್ತೆ ಇದೆ. ತಮ್ಮ ಅಧಿಕಾರ ಚಲಾಯಿಸಿ ಮಡದಿ ವಾಜಿದ ಬಾನು ಅವರ ಹುದ್ದೆ ಸಹಿತ ವರ್ಗಾವಣೆ ನಡೆಸಿದ್ದು, ವಿವಿ ಸಿಂಡಿಕೇಟ್ ಸಭೆಯಲ್ಲಿ ತನಿಖೆಗೆ ಆದೇಶವಾಗಿತ್ತು. ಆದರೆ ಆ ನಿರ್ಣಯವನ್ನು ಖಾನ್ ತಿರುಚಿದ್ದರು ಎನ್ನುವ ಆರೋಪ ಇದೆ. ರಾಜ್ಯದಲ್ಲಿ ಸರಕಾರ ಬದಲಾಗುತ್ತಿದ್ದಂತೆ ಖಾನ್ ಅದೃಷ್ಟವೂ ಕೊನೆಗೊಂಡಿತ್ತು. ಕೊನೆಗೂ ಅವರನ್ನು ಉಳಿಸಲು ಕಾಂಗ್ರೆಸ್ಸಿನ ಶಾಸಕರುಗಳಿಗೆ ಸಾಧ್ಯವಾಗಿಲ್ಲ. ಖಾನ್ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರ ಹುದ್ದೆಯಿಂದ ಎತ್ತಂಗಡಿಯಾಗುವ ಮುಹೂರ್ತ ಕೊನೆಗೂ ಬಂದಿದೆ. ಆದರೆ ಬಂಗಾರದ ಗಣಿಯಿಂದ ಎದ್ದು ಹೋಗಲು ಖಾನ್ ಅವರಿಗೆ ಮನಸ್ಸಿಲ್ಲ. ಅದಕ್ಕಾಗಿ ಅವರು ಆಡಿದ ಕೊನೆಯಾಟ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಸ್ಥಾನಕ್ಕೆ ತಕ್ಕುದ್ದಲ್ಲ.
ಖಾನ್ ಅವರ ಸ್ಥಾನಕ್ಕೆ ಕೆಎಎಸ್ ಅಧಿಕಾರಿ, ಮಂಗಳೂರು ಮಹಾನಗರ ಪಾಲಿಕೆಯ ಅಸಿಸ್ಟೆಂಟ್ ಕಮೀಷನರ್ ಆಗಿದ್ದ ರಾಜು ಮೊಗವೀರ ಅವರು ನೇಮಕವಾಗಿದ್ದಾರೆ. ಅವರು ಇವತ್ತು ಬೆಳಿಗ್ಗೆ 11 ಗಂಟೆಗೆ ಅಧಿಕಾರ ವಹಿಸಿಕೊಳ್ಳಲು ಕಚೇರಿಗೆ ಹೋಗಿದ್ದಾಗ ಖಾನ್ ಅಲ್ಲಿಂದ ಓಡಿಹೋಗಿದ್ದಾರೆ. ಸೀದಾ ಆಸ್ಪತ್ರೆಗೆ ಹೋಗಿ ಹುಶಾರಿಲ್ಲದ ನಾಟಕ ಆಡಿದ್ದಾರೆ. ಆದಷ್ಟು ದಿನದೂಡಿ ತಮ್ಮ ಸ್ಥಾನ ಉಳಿಸಿಕೊಳ್ಳುವ ಕೊನೆಯ ಪ್ರಯತ್ನ ಮಾಡಿದ್ದಾರೆ. ನಂತರ ಖಾನ್ ಅವರ ಈ ಹೈಡ್ರಾಮದಿಂದ ಬೇಸತ್ತ ಕುಲಪತಿ ಎಡಪಡಿತ್ತಾಯ ಅವರು ತಮ್ಮ ಪರಮಾಧಿಕಾರವನ್ನು ಬಳಸಿ ಸುಗ್ರೀವಾಜ್ಞೆಯ ಮೂಲಕ ನೂತನ ಕುಲಸಚಿವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ. ಈ ಮೂಲಕ ಖಾನ್ ಅವರು ಅಧಿಕಾರದಿಂದ ನಿರ್ಗಮಿಸುವಾಗಲೂ ತಮ್ಮ ವರ್ಚಸ್ಸಿಗೆ ಕಪ್ಪುಚುಕ್ಕೆ ಉಳಿಸಿ ಹೋಗಬೇಕಾಗಿದೆ. ಈ ಪರಿಸ್ಥಿತಿ ಮಂಗಳೂರು ವಿವಿಯಲ್ಲಿ ಯಾರಿಗೂ ಬರಬಾರದು. ಅಸಹ್ಯದ ಪರಾಕಾಷ್ಟೆ ಇದು!
0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Hanumantha Kamath December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Hanumantha Kamath December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search