• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಲಾಕ್ ಡೌನ್ ಸಂಕಷ್ಟದಲ್ಲಿರುವವರಿಗೆ ಮುಖ್ಯಮಂತ್ರಿಗಳಿಂದ ರೂ.1,610 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ!

TN Author Posted On May 6, 2020


  • Share On Facebook
  • Tweet It

1. ರಾಜ್ಯದಲ್ಲಿರುವ 15.80 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಹಿಂದಿನ 2 ಸಾವಿರ ರೂ. ನೀಡುವ ಯೋಜನೆಯಲ್ಲಿ ಹೆಚ್ಚುವರಿಯಾಗಿ 3 ಸಾವಿರ ರೂ ಬಿಡುಗಡೆಗೊಳಿಸಲಾಗುವುದು

2. ಕಳೆದ ವರ್ಷ ಘೋಷಿಸಿದ್ದ ನೇಕಾರರ ಸಾಲಮನ್ನಾ ಯೋಜನೆ ಬಾಕಿ 80 ಕೋಟಿ ರೂ. ಬಿಡುಗಡೆ. 2019ರ ಜನವರಿ 1ರಿಂದ ಮಾರ್ಚ್ 31ರವರೆಗೆ 1 ಲಕ್ಷದೊಳಗಿನ ಸಾಲ ಪಾವತಿಸಿರುವ ನೇಕಾರರ ಮೊತ್ತ ಅವರಿಗೆ ಮರುಪಾವತಿಗೆ ಕ್ರಮ.
ನೇಕಾರರ ಸಮಾನ್ ಯೋಜನೆ ಘೋಷಣೆ – ರಾಜ್ಯದ ಅಂದಾಜು 54,000 ಕೈಮಗ್ಗ ನೇಕಾರರಿಗೆ ಪ್ರತಿವರ್ಷ 2 ಸಾವಿರ ರೂ.

3. ಕಂದಾಯದ ಬಾಕಿ ಮೊತ್ತ ಕಂತುಗಳಲ್ಲಿ ಪಾವತಿಗೆ ಅವಕಾಶ. 30.06.2020 ರವರೆಗೆ ಕಂದಾಯ ಬಾಕಿ ಉಳಿಸಿಕೊಂಡ ಗ್ರಾಹಕರ ವಿದ್ಯುತ್ ಸಂಪರ್ಕ್ ಕಡಿತವಿಲ್ಲ.

4. ನಿಗದಿತ ಸಮಯದೊಳಗೆ ವಿದ್ಯುತ್ ಬಿಲ್ ಪಾವತಿಸುವ ಗ್ರಾಹಕರಿಗೆ ಪ್ರೋತ್ಸಾಹ/ರಿಯಾಯಿತಿ.
ಮುಂಗಡ ಪಾವತಿಸುವವರಿಗೆ ಪ್ರೋತ್ಸಾಹ ಧನ
ವಿದ್ಯುತ್ ಬಿಲ್ ವಿಳಂಬ ಪಾವತಿ ಬಡ್ಡಿ ಕಡಿತ.

5. ಬೃಹತ್ ಕೈಗಾರಿಕೆಗಳ ಚೇತರಿಕೆ ನಿಟ್ಟಿನಲ್ಲಿ ವಿದ್ಯುತ್ ಬಿಲ್ ನ ಫಿಕ್ಸ್ಡ್ ದರದ ಪಾವತಿಯನ್ನು 2 ತಿಂಗಳ ಅವಧಿಗೆ ಯಾವುದೇ ಬಡ್ಡಿ, ದಂಡ ಬಡ್ಡಿ ರಹಿತ ಮುಂದೂಡಿಕೆ

6. ಅತಿಸಣ್ಣ, ಸಣ್ಣ, ಮಧ್ಯಮ ಉದ್ದಿಮೆದಾರರ ವಹಿವಾಟು ಚೇತರಿಕೆಗೆ ಉತ್ತೇಜನ ನೀಡಲು ವಿದ್ಯುತ್ ಬಿಲ್ ನ ಫಿಕ್ಸ್ಡ್ ದರ 2 ತಿಂಗಳ ಅವಧಿಗೆ ಪೂರ್ತಿ ಮನ್ನಾ.

7. ರಾಜ್ಯದ ಸುಮಾರು 7,75,000 ಆಟೋ, ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ 5 ಸಾವಿರ ರೂ. ನೆರವು

8. ಲಾಕ್ ಡೌನ್ ನಿಂದಾಗಿ ನಷ್ಟ ಅನುಭವಿಸಿದ ಅಂದಾಜು 2,30,000 ಕ್ಷೌರಿಕ ವೃತ್ತಿಯಲ್ಲಿರುವವರಿಗೆ ಒಂದು ಬಾರಿ ಪರಿಹಾರವಾಗಿ 5 ಸಾವಿರ ರೂ. ನೆರವು.

9. ಲಾಕ್ ಡೌನ್ ನಿಂದಾಗಿ ನಷ್ಟ ಅನುಭವಿಸಿದ ರಾಜ್ಯದಲ್ಲಿರುವ ಅಂದಾಜು 60,000 ಅಗಸ ವೃತ್ತಿಯಲ್ಲಿರುವವರಿಗೆ ಒಂದು ಬಾರಿ ಪರಿಹಾರವಾಗಿ 5 ಸಾವಿರ ರೂ. ನೆರವು.

10. ರೈತರು ಬೆಳೆದು ನಷ್ಟವಾದ ಹೂವಿನ ಬೆಳೆಗಳಿಗೆ ಗರಿಷ್ಠ ಒಂದು ಹೆಕ್ಟೇರ್ ಗೆ ಮಿತಿಗೊಳಪಟ್ಟು, ಪ್ರತಿ ಹೆಕ್ಟೇರ್ ಗೆ 25 ಸಾವಿರ ರೂ. ಪರಿಹಾರ ಧನ.

  • Share On Facebook
  • Tweet It


- Advertisement -


Trending Now
ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
TN Author February 1, 2023
ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
TN Author January 31, 2023
Leave A Reply

  • Recent Posts

    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
  • Popular Posts

    • 1
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 2
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 3
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • 4
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 5
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search