• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೋವಿಡ್ ನಿಂದ ಮೃತ ಶರೀರದ ಪ್ಯಾಕ್ ತೆರೆದು ಆತಂಕ ಸೃಷ್ಟಿಸಿದ ಕಾಂಗ್ರೇಸ್ ಮುಖಂಡರು!

Tulunadu News Posted On July 25, 2020


  • Share On Facebook
  • Tweet It

ಬೋಳೂರು ಸ್ಮಶಾನದಲ್ಲಿ ನಿಯಮ ಉಲ್ಲಂಘಿಸಿ ಕೋವಿಡ್ ನಿಂದ ಮೃತ ಶರೀರದ ಪ್ಯಾಕ್ ತೆರೆದು ಆತಂಕ ಸೃಷ್ಟಿಸಿದ ಕಾಂಗ್ರೇಸ್ ಮುಖಂಡರು.

ಸಾಮಾನ್ಯವಾಗಿ ಕೊರೋನ ಪೀಡಿತ ವ್ಯಕ್ತಿ ಮೃತಪಟ್ಟರೆ ಆ ವ್ಯಕ್ತಿಯ ಸಂಬಂಧಿಕರಿಗೂ ಬಂಧು ಮಿತ್ರರಿಗೂ ಅಂತಿಮ ದರ್ಶನಕ್ಕೂ ಅವಕಾಶವಿರುವುದಿಲ್ಲ. ಯಾಕೆಂದರೆ ಮೃತ ದೇಹದಿಂದ ವೈರಸ್ ಹರಡದಂತೆ ಸಂಪೂರ್ಣವಾಗಿ ಪ್ಯಾಕ್ ಮಾಡಲಾಗಿರುತ್ತದೆ. ಆದರೆ ನಿನ್ನೆ ರಾತ್ರಿ ಕಾಂಗ್ರೇಸ್ ಮುಖಂಡರ ಪ್ರಚಾರದ ತೆವಲಿನಿಂದ ಆ ಪರಿಸರದಲ್ಲಿ ಭೀತಿ ಸೃಷ್ಠಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‌ವ್ಯಾಪಕವಾಗಿ ಹರಡುತ್ತಿರುವ‌ ವೈರಸ್ ಈಗಾಗಲೇ ಸೋಂಕಿತರ ಸಂಖ್ಯೆಯನ್ನು ಗಗನಕ್ಕೇರಿಸುವ ಹಂತದಲ್ಲಿದೆ. ಇಂತಹ ಸಂದರ್ಭದಲ್ಲಿ ಎಲ್ಲರಿಗಿಂತಲೂ ಹೆಚ್ಚು ಜವಬ್ದಾರಿಯುತವಾಗಿ ನಡೆದುಕೊಳ್ಳಬೇಕಾದವರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು. ಜಿಲ್ಲಾಡಳಿತ ಜಾರಿಗೊಳಿಸಿರುವ‌ ನಿಯಮವನ್ನು ಜನಪ್ರತಿನಿಧಿಗಳೇ ಧಿಕ್ಕರಿಸಿದರೆ ಜನ ಸಾಮಾನ್ಯರು ನಿಯಮ ಪಾಲಿಸುವುದು ಹೇಗೆ ? ಶಾಸಕರಾಗಿ, ಸಚಿವರಾಗಿ ಅನುಭವಿ ರಾಜಕಾರಣಿ ಯು.ಟಿ ಖಾದರ್ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ರಾಜಕೀಯ ಪ್ರಚಾರದ‌ ತೆವಲು ಈ ಮಟ್ಟಕ್ಕೆ ಇಳಿದಿರುವುದು ಸಾಮಾನ್ಯ ಜನತೆಯನ್ನೂ ಆತಂಕಕ್ಕೆ ದೂಡಿದೆ.

ನಿನ್ನೆ ಕೋವಿಡ್ ನಿಂದ ಮೃತಪಟ್ಟ ವ್ಯತ್ತಿಯ ಶವ ಸಂಸ್ಕಾರಕ್ಕಾಗಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳದ ಸ್ವಯಂ ಸೇವಕರು ಶವವನ್ನು ಬೋಳೂರು ಸ್ಮಶಾನಕ್ಕೆ ತಂದಿದ್ದ ಸಂದರ್ಭ ಅಲ್ಲಿಗೆ ಆಗಮಿಸಿದ ಶಾಸಕ‌ ಯು.ಟಿ ಖಾದರ್, ಮಾಜಿ ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ ಹಾಗೂ ಕಾಂಗ್ರೇಸ್ ಮುಖಂಡರು ಒತ್ತಾಯ ಪೂರ್ವಕವಾಗಿ ಶವದ ಮೇಲಿನ ಪಿಪಿಇ ಕಿಟ್ ಸರಿಸಿ ಫೋಟೋ ಶೂಟ್ ಮಾಡಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಒಬ್ಬ ಸಾಮಾನ್ಯ ವ್ಯಕ್ತಿ ಮೃತಪಟ್ಟರೆ ಆತನ ಮನೆಯವರಿಗೂ ಕೂಡ ಅಂತಿಮ ದರ್ಶನಕ್ಕೆ ಅನುವು ಮಾಡಿ ಕೊಡದೆ ಇರುವ ಪರಿಸ್ಥಿತಿಯಲ್ಲಿ ಒಬ್ಬ ಶಾಸಕ ಮತ್ತೊಬ್ಬ ಮಾಜಿ ವಿಧಾನ ಪರಿಷತ್ ಸದಸ್ಯರಿಗೆ ನಿಯಮ ಪರಿಪಾಲನೆಯ ಜವಬ್ದಾರಿ ಇಲ್ಲವೆ ?

ಅಂದ ಹಾಗೆ ಕಳೆದ‌ ಕೆಲವು ದಿನಗಳಿಂದ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿ ಕೋವಿಡ್ ನಿಂದ‌ ಮೃತಪಟ್ಟ‌ ವ್ಯಕ್ತಿಗಳ‌ ಶವ‌ಸಂಸ್ಕಾರದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ನಿನ್ನೆಯೂ ಕೂಡ ಬೋಳೂರು‌ ಸ್ಮಶಾನಕ್ಕೆ ಬಜರಂಗದಳ ಕಾರ್ಯಕರ್ತರು ಶವ ತಂದಾಗ ಕಾಂಗ್ರೇಸಿಗರು ಅದರ ಭಾವಚಿತ್ರವನ್ನು ಕಾಂಗ್ರೇಸಿನ ಸ್ವಯಂ ಸೇವಕರೇ ಶವ ಸಂಸ್ಕಾರ ಮಾಡಿರುವುದು ಎಂಬಂತೆ ಬಿಂಬಿಸಲು ಅದೇ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ‌ ಹರಿಯಬಿಟ್ಟು ಬೆಚತ್ತಲಾಗಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಹೆಣದ ಮೇಲಿನ ರಾಜಕೀಯ ಮಾಡುತ್ತಿರುವ ಖಾದರ್,ಐವನ್ ಅವರ ಮೇಲೆ ಜಿಲ್ಲಾಡಳಿತ ಕ್ರಮ ಜರಗಿಸಬಹುದೇ ??

  • Share On Facebook
  • Tweet It


- Advertisement -


Trending Now
ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
Tulunadu News September 29, 2023
ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
Tulunadu News September 29, 2023
Leave A Reply

  • Recent Posts

    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
  • Popular Posts

    • 1
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • 2
      ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • 3
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 4
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 5
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search