• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೋವಿಡ್ ನಿಂದ ಮೃತ ಶರೀರದ ಪ್ಯಾಕ್ ತೆರೆದು ಆತಂಕ ಸೃಷ್ಟಿಸಿದ ಕಾಂಗ್ರೇಸ್ ಮುಖಂಡರು!

Tulunadu News Posted On July 25, 2020
0


0
Shares
  • Share On Facebook
  • Tweet It

ಬೋಳೂರು ಸ್ಮಶಾನದಲ್ಲಿ ನಿಯಮ ಉಲ್ಲಂಘಿಸಿ ಕೋವಿಡ್ ನಿಂದ ಮೃತ ಶರೀರದ ಪ್ಯಾಕ್ ತೆರೆದು ಆತಂಕ ಸೃಷ್ಟಿಸಿದ ಕಾಂಗ್ರೇಸ್ ಮುಖಂಡರು.

ಸಾಮಾನ್ಯವಾಗಿ ಕೊರೋನ ಪೀಡಿತ ವ್ಯಕ್ತಿ ಮೃತಪಟ್ಟರೆ ಆ ವ್ಯಕ್ತಿಯ ಸಂಬಂಧಿಕರಿಗೂ ಬಂಧು ಮಿತ್ರರಿಗೂ ಅಂತಿಮ ದರ್ಶನಕ್ಕೂ ಅವಕಾಶವಿರುವುದಿಲ್ಲ. ಯಾಕೆಂದರೆ ಮೃತ ದೇಹದಿಂದ ವೈರಸ್ ಹರಡದಂತೆ ಸಂಪೂರ್ಣವಾಗಿ ಪ್ಯಾಕ್ ಮಾಡಲಾಗಿರುತ್ತದೆ. ಆದರೆ ನಿನ್ನೆ ರಾತ್ರಿ ಕಾಂಗ್ರೇಸ್ ಮುಖಂಡರ ಪ್ರಚಾರದ ತೆವಲಿನಿಂದ ಆ ಪರಿಸರದಲ್ಲಿ ಭೀತಿ ಸೃಷ್ಠಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‌ವ್ಯಾಪಕವಾಗಿ ಹರಡುತ್ತಿರುವ‌ ವೈರಸ್ ಈಗಾಗಲೇ ಸೋಂಕಿತರ ಸಂಖ್ಯೆಯನ್ನು ಗಗನಕ್ಕೇರಿಸುವ ಹಂತದಲ್ಲಿದೆ. ಇಂತಹ ಸಂದರ್ಭದಲ್ಲಿ ಎಲ್ಲರಿಗಿಂತಲೂ ಹೆಚ್ಚು ಜವಬ್ದಾರಿಯುತವಾಗಿ ನಡೆದುಕೊಳ್ಳಬೇಕಾದವರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು. ಜಿಲ್ಲಾಡಳಿತ ಜಾರಿಗೊಳಿಸಿರುವ‌ ನಿಯಮವನ್ನು ಜನಪ್ರತಿನಿಧಿಗಳೇ ಧಿಕ್ಕರಿಸಿದರೆ ಜನ ಸಾಮಾನ್ಯರು ನಿಯಮ ಪಾಲಿಸುವುದು ಹೇಗೆ ? ಶಾಸಕರಾಗಿ, ಸಚಿವರಾಗಿ ಅನುಭವಿ ರಾಜಕಾರಣಿ ಯು.ಟಿ ಖಾದರ್ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ರಾಜಕೀಯ ಪ್ರಚಾರದ‌ ತೆವಲು ಈ ಮಟ್ಟಕ್ಕೆ ಇಳಿದಿರುವುದು ಸಾಮಾನ್ಯ ಜನತೆಯನ್ನೂ ಆತಂಕಕ್ಕೆ ದೂಡಿದೆ.

ನಿನ್ನೆ ಕೋವಿಡ್ ನಿಂದ ಮೃತಪಟ್ಟ ವ್ಯತ್ತಿಯ ಶವ ಸಂಸ್ಕಾರಕ್ಕಾಗಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳದ ಸ್ವಯಂ ಸೇವಕರು ಶವವನ್ನು ಬೋಳೂರು ಸ್ಮಶಾನಕ್ಕೆ ತಂದಿದ್ದ ಸಂದರ್ಭ ಅಲ್ಲಿಗೆ ಆಗಮಿಸಿದ ಶಾಸಕ‌ ಯು.ಟಿ ಖಾದರ್, ಮಾಜಿ ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ ಹಾಗೂ ಕಾಂಗ್ರೇಸ್ ಮುಖಂಡರು ಒತ್ತಾಯ ಪೂರ್ವಕವಾಗಿ ಶವದ ಮೇಲಿನ ಪಿಪಿಇ ಕಿಟ್ ಸರಿಸಿ ಫೋಟೋ ಶೂಟ್ ಮಾಡಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಒಬ್ಬ ಸಾಮಾನ್ಯ ವ್ಯಕ್ತಿ ಮೃತಪಟ್ಟರೆ ಆತನ ಮನೆಯವರಿಗೂ ಕೂಡ ಅಂತಿಮ ದರ್ಶನಕ್ಕೆ ಅನುವು ಮಾಡಿ ಕೊಡದೆ ಇರುವ ಪರಿಸ್ಥಿತಿಯಲ್ಲಿ ಒಬ್ಬ ಶಾಸಕ ಮತ್ತೊಬ್ಬ ಮಾಜಿ ವಿಧಾನ ಪರಿಷತ್ ಸದಸ್ಯರಿಗೆ ನಿಯಮ ಪರಿಪಾಲನೆಯ ಜವಬ್ದಾರಿ ಇಲ್ಲವೆ ?

ಅಂದ ಹಾಗೆ ಕಳೆದ‌ ಕೆಲವು ದಿನಗಳಿಂದ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿ ಕೋವಿಡ್ ನಿಂದ‌ ಮೃತಪಟ್ಟ‌ ವ್ಯಕ್ತಿಗಳ‌ ಶವ‌ಸಂಸ್ಕಾರದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ನಿನ್ನೆಯೂ ಕೂಡ ಬೋಳೂರು‌ ಸ್ಮಶಾನಕ್ಕೆ ಬಜರಂಗದಳ ಕಾರ್ಯಕರ್ತರು ಶವ ತಂದಾಗ ಕಾಂಗ್ರೇಸಿಗರು ಅದರ ಭಾವಚಿತ್ರವನ್ನು ಕಾಂಗ್ರೇಸಿನ ಸ್ವಯಂ ಸೇವಕರೇ ಶವ ಸಂಸ್ಕಾರ ಮಾಡಿರುವುದು ಎಂಬಂತೆ ಬಿಂಬಿಸಲು ಅದೇ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ‌ ಹರಿಯಬಿಟ್ಟು ಬೆಚತ್ತಲಾಗಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಹೆಣದ ಮೇಲಿನ ರಾಜಕೀಯ ಮಾಡುತ್ತಿರುವ ಖಾದರ್,ಐವನ್ ಅವರ ಮೇಲೆ ಜಿಲ್ಲಾಡಳಿತ ಕ್ರಮ ಜರಗಿಸಬಹುದೇ ??

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search