• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1991 ರಲ್ಲಿ ಅಯೋಧ್ಯೆಗೆ ಬಂದಿದ್ದ ಮೋದಿ ಪತ್ರಕರ್ತರಿಗೆ ಹೇಳಿದ್ದ ಮಾತು ಉಳಿಸಿಕೊಂಡ್ರಾ?

Hanumantha Kamath Posted On August 5, 2020
0


0
Shares
  • Share On Facebook
  • Tweet It

ಅದು 1991 ರ ಸಮಯವಿರಬಹುದು. ಆವತ್ತಿನ ಒಂದು ಅಪರೂಪವಾದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈಗಿನ ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ನಾಯಕರುಗಳಲ್ಲಿ ಪ್ರಮುಖರಾಗಿದ್ದ ಮುರಳಿ ಮನೋಹರ್ ಜೋಷಿಯವರೊಂದಿಗೆ ಇರುವಂತಹ ಒಂದು ಫೋಟೋ. ಅಯೋಧ್ಯೆಯ ರಾಮಜನ್ಮ ಭೂಮಿಯ ವಿವಾದ ತಾರಕಕ್ಕೆ ಏರುತ್ತಿದ್ದಾಗ ತೆಗೆದಿರುವಂತಹ ಫೋಟೋ ಎಂದು ಹೇಳಲಾಗಿದೆ. ಅಯೋಧ್ಯೆಯ ರಾಮಜನ್ಮ ಭೂಮಿಯ ಸಮೀಪದಲ್ಲಿಯೇ ಸ್ಟುಡಿಯೋ ಇಟ್ಟುಕೊಂಡಿದ್ದ ಮಹೇಂದ್ರ ತ್ರಿಪಾಠಿ ಎನ್ನುವವರು ಈ ಫೋಟೋ ತೆಗೆದಿದ್ದಾರೆ ಎಂದು ಹೇಳಲಾಗುತ್ತದೆ.

ಈ ಬಗ್ಗೆ ತಮ್ಮ ಹಳೆ ಅನುಭವಗಳನ್ನು ಹಂಚಿಕೊಂಡಿರುವ ಮಹೇಂದ್ರ ತ್ರಿಪಾಠಿಯವರು ಈಗಿನ ಪ್ರಧಾನಿ ನರೇಂದ್ರ ಮೋದಿಜಿಯವರು ಆಗ 1991, ಎಪ್ರಿಲ್ ತಿಂಗಳಲ್ಲಿ ರಾಮಜನ್ಮಭೂಮಿಗೆ ಭೇಟಿ ನೀಡಿದ್ದರು. ಆಗ ಅವರೊಂದಿಗೆ ಮುರಳಿ ಮನೋಹರ ಜೋಷಿಯವರು ಕೂಡ ಇದ್ದರು. ಆ ದಿನ ನಾನೊಬ್ಬನೇ ಛಾಯಾಗ್ರಾಹಕ ಅಲ್ಲಿ ಹಾಜರಿದ್ದೆ. ವಿಶ್ವ ಹಿಂದೂ ಪರಿಷತ್ ವತಿಯಿಂದ ನನಗೆ ಅಧಿಕೃತ ಆಹ್ವಾನವಿತ್ತು. ನನಗೆ ಇಬ್ಬರು ಘಟಾನುಘಟಿ ನಾಯಕರು ಒಟ್ಟಿಗೆ ಇರುವ ಫೋಟೋ ಕ್ಲಿಕ್ಕಿಸುವ ಅವಕಾಶ ದೊರಕಿತು ಎಂದು ಹೇಳಿಕೊಂಡಿದ್ದಾರೆ.

ನಂತರ ಒಂದಿಷ್ಟು ಪತ್ರಕರ್ತರು ಆಗಮಿಸಿದ ಬಳಿಕ ಮುರಳಿ ಮನೋಹರ ಜೋಷಿಯವರು ನರೇಂದ್ರ ಮೋದಿಯವರನ್ನು ಪತ್ರಕರ್ತರಿಗೆ ಪರಿಚಯಿಸುತ್ತಾ ಗುಜರಾತಿನಲ್ಲಿ ನಮ್ಮ ಪಕ್ಷದ ಮುಖಂಡರು ಎಂದು ಪರಿಚಯಿಸಿದ್ದರು. ಆಗ ಪತ್ರಕರ್ತರು ಮಾತನಾಡುತ್ತಾ ನಿಮ್ಮ ಮುಂದಿನ ಭೇಟಿ ಅಯೋಧ್ಯೆಗೆ ಯಾವಾಗ ಎಂದು ಮೋದಿಯವರನ್ನು ಕೇಳಿದ್ದರು. ಆಗ ನರೇಂದ್ರ ಮೋದಿಜಿಯವರು ಖಡಕ್ಕಾಗಿ ಏನು ಹೇಳಿದ್ದರೆಂದರೆ _” ಇದೇ ಸ್ಥಳದಲ್ಲಿ ರಾಮ ದೇವರಿಗೆ ಭವ್ಯ ಮಂದಿರ ನಿರ್ಮಾಣವಾಗುವ ದಿನ ನಾನು ಮತ್ತೆ ಅಯೋಧ್ಯೆಗೆ ಬರುತ್ತೇನೆ”

ಮೋದಿಜಿಯವರು ಅಂದು ಹೇಳಿದ ಮಾತು ಇಂದು ನಿಜವಾಗಿದೆ. ಆವತ್ತು ಅಯೋಧ್ಯೆಯಿಂದ ಗುಜರಾತಿಗೆ ಮರಳಿದ ಮೋದಿಜಿಯವರು ಪ್ರಧಾನಿಯಾಗಿ ಮೊದಲ ಬಾರಿ ಅಯೋಧ್ಯೆಗೆ ಆಗಮಿಸಿ ಭವ್ಯ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Hanumantha Kamath January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Hanumantha Kamath January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search