• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

1991 ರಲ್ಲಿ ಅಯೋಧ್ಯೆಗೆ ಬಂದಿದ್ದ ಮೋದಿ ಪತ್ರಕರ್ತರಿಗೆ ಹೇಳಿದ್ದ ಮಾತು ಉಳಿಸಿಕೊಂಡ್ರಾ?

Hanumantha Kamath Posted On August 5, 2020
0


0
Shares
  • Share On Facebook
  • Tweet It

ಅದು 1991 ರ ಸಮಯವಿರಬಹುದು. ಆವತ್ತಿನ ಒಂದು ಅಪರೂಪವಾದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈಗಿನ ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ನಾಯಕರುಗಳಲ್ಲಿ ಪ್ರಮುಖರಾಗಿದ್ದ ಮುರಳಿ ಮನೋಹರ್ ಜೋಷಿಯವರೊಂದಿಗೆ ಇರುವಂತಹ ಒಂದು ಫೋಟೋ. ಅಯೋಧ್ಯೆಯ ರಾಮಜನ್ಮ ಭೂಮಿಯ ವಿವಾದ ತಾರಕಕ್ಕೆ ಏರುತ್ತಿದ್ದಾಗ ತೆಗೆದಿರುವಂತಹ ಫೋಟೋ ಎಂದು ಹೇಳಲಾಗಿದೆ. ಅಯೋಧ್ಯೆಯ ರಾಮಜನ್ಮ ಭೂಮಿಯ ಸಮೀಪದಲ್ಲಿಯೇ ಸ್ಟುಡಿಯೋ ಇಟ್ಟುಕೊಂಡಿದ್ದ ಮಹೇಂದ್ರ ತ್ರಿಪಾಠಿ ಎನ್ನುವವರು ಈ ಫೋಟೋ ತೆಗೆದಿದ್ದಾರೆ ಎಂದು ಹೇಳಲಾಗುತ್ತದೆ.

ಈ ಬಗ್ಗೆ ತಮ್ಮ ಹಳೆ ಅನುಭವಗಳನ್ನು ಹಂಚಿಕೊಂಡಿರುವ ಮಹೇಂದ್ರ ತ್ರಿಪಾಠಿಯವರು ಈಗಿನ ಪ್ರಧಾನಿ ನರೇಂದ್ರ ಮೋದಿಜಿಯವರು ಆಗ 1991, ಎಪ್ರಿಲ್ ತಿಂಗಳಲ್ಲಿ ರಾಮಜನ್ಮಭೂಮಿಗೆ ಭೇಟಿ ನೀಡಿದ್ದರು. ಆಗ ಅವರೊಂದಿಗೆ ಮುರಳಿ ಮನೋಹರ ಜೋಷಿಯವರು ಕೂಡ ಇದ್ದರು. ಆ ದಿನ ನಾನೊಬ್ಬನೇ ಛಾಯಾಗ್ರಾಹಕ ಅಲ್ಲಿ ಹಾಜರಿದ್ದೆ. ವಿಶ್ವ ಹಿಂದೂ ಪರಿಷತ್ ವತಿಯಿಂದ ನನಗೆ ಅಧಿಕೃತ ಆಹ್ವಾನವಿತ್ತು. ನನಗೆ ಇಬ್ಬರು ಘಟಾನುಘಟಿ ನಾಯಕರು ಒಟ್ಟಿಗೆ ಇರುವ ಫೋಟೋ ಕ್ಲಿಕ್ಕಿಸುವ ಅವಕಾಶ ದೊರಕಿತು ಎಂದು ಹೇಳಿಕೊಂಡಿದ್ದಾರೆ.

ನಂತರ ಒಂದಿಷ್ಟು ಪತ್ರಕರ್ತರು ಆಗಮಿಸಿದ ಬಳಿಕ ಮುರಳಿ ಮನೋಹರ ಜೋಷಿಯವರು ನರೇಂದ್ರ ಮೋದಿಯವರನ್ನು ಪತ್ರಕರ್ತರಿಗೆ ಪರಿಚಯಿಸುತ್ತಾ ಗುಜರಾತಿನಲ್ಲಿ ನಮ್ಮ ಪಕ್ಷದ ಮುಖಂಡರು ಎಂದು ಪರಿಚಯಿಸಿದ್ದರು. ಆಗ ಪತ್ರಕರ್ತರು ಮಾತನಾಡುತ್ತಾ ನಿಮ್ಮ ಮುಂದಿನ ಭೇಟಿ ಅಯೋಧ್ಯೆಗೆ ಯಾವಾಗ ಎಂದು ಮೋದಿಯವರನ್ನು ಕೇಳಿದ್ದರು. ಆಗ ನರೇಂದ್ರ ಮೋದಿಜಿಯವರು ಖಡಕ್ಕಾಗಿ ಏನು ಹೇಳಿದ್ದರೆಂದರೆ _” ಇದೇ ಸ್ಥಳದಲ್ಲಿ ರಾಮ ದೇವರಿಗೆ ಭವ್ಯ ಮಂದಿರ ನಿರ್ಮಾಣವಾಗುವ ದಿನ ನಾನು ಮತ್ತೆ ಅಯೋಧ್ಯೆಗೆ ಬರುತ್ತೇನೆ”

ಮೋದಿಜಿಯವರು ಅಂದು ಹೇಳಿದ ಮಾತು ಇಂದು ನಿಜವಾಗಿದೆ. ಆವತ್ತು ಅಯೋಧ್ಯೆಯಿಂದ ಗುಜರಾತಿಗೆ ಮರಳಿದ ಮೋದಿಜಿಯವರು ಪ್ರಧಾನಿಯಾಗಿ ಮೊದಲ ಬಾರಿ ಅಯೋಧ್ಯೆಗೆ ಆಗಮಿಸಿ ಭವ್ಯ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Hanumantha Kamath July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Hanumantha Kamath July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search